ಹಳಿಯಾಳ ಅಭಿವೃದ್ಧಿ ಹತ್ತು ಹಲವು ಯೋಜನೆಗಳ ರೂವಾರಿ ಆರ್‌.ವಿ.ದೇಶಪಾಂಡೆ


Team Udayavani, Jul 3, 2022, 9:00 AM IST

ad – deshpande

ಹಳಿಯಾಳ ಪಟ್ಟಣ ರಾಜ್ಯ-ರಾಷ್ಟ್ರಮಟ್ಟದಲ್ಲಿ ಈಗಲೂ ಸಹ ಶಾಸಕ ಆರ್‌.ವಿ. ದೇಶಪಾಂಡೆ ಅವರ ಹೆಸರಿನಲ್ಲಿಯೇ ಗುರುತಿಸಲಾಗುತ್ತದೆ. ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ನೀಡಿದ ಕೊಡುಗೆಗಳು ಅಪಾರ. ಹಳಿಯಾಳ ಪಟ್ಟಣ ಜಿಲ್ಲೆಯಲ್ಲಿಯೇ ಮಾದರಿಯಾಗಿದೆ. ಸ್ವಚ್ಛತೆ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳಿಂದ ಸಾಕಷ್ಟು ಪ್ರಗತಿ ಕಾಣಲು ದಣಿವರಿಯದ ನಾಯಕ ದೇಶಪಾಂಡೆಯವರು ಪ್ರಮುಖ ಕಾರಣೀಕರ್ತರಾಗಿದ್ದಾರೆ.

ಮಂತ್ರಿ ಇರಲಿ, ಶಾಸಕರಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ತಾವು ಹುಟ್ಟಿ ಬೆಳೆದ ಪಟ್ಟಣದ ಬಗ್ಗೆ ಅಪಾರ ಕಾಳಜಿ ಹೊಂದಿರುವ ಆರ್‌.ವಿ.ಡಿ ಅವರು ಪಟ್ಟಣದ ಜನತೆಗಾಗಿ ಹತ್ತು ಹಲವಾರು ಯೋಜನೆ ಜಾರಿ ಮಾಡಿ ಮೂಲಸೌಕರ್ಯ ಒದಗಿಸಿಕೊಡುವಲ್ಲಿ ನಿಸ್ಸೀಮರು. ಅವರ ಸುದೀರ್ಘ‌ ನಾಲ್ವತ್ತು ವರ್ಷಗಳ ರಾಜಕೀಯ ಪಯಣದಲ್ಲಿ ಪಟ್ಟಣದ ಸಾರ್ವಜನಿಕರನ್ನು ಕಿಂಚಿತ್ತು ಕಡೆಗಣಿಸದೆ ಅವರ ನೆರವಿಗೆ ನಿಂತಿದ್ದಾರೆ.

ಪಟ್ಟಣವು ಪ್ರತಿಯೊಂದು ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುವ ದೇಶಪಾಂಡೆಯವರು ಅದಕ್ಕೆ ಪೂರಕವಾಗಿ ಸಾವಿರಾರು ಸಂಖ್ಯೆಯಲ್ಲಿ ಆಶ್ರಯ ಮನೆಗಳನ್ನು ಮಂಜೂರು ಮಾಡಿಸಿದ್ದಾರೆ. ಅದರೊಟ್ಟಿಗೆ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ 2?ಠ47 ಕುಡಿಯುವ ನೀರು, ಉದ್ಯಾನವನಗಳ ನಿರ್ಮಾಣ, ಖಾಸಗಿ ಸಹಭಾಗಿತ್ವದಲ್ಲಿ ಕೆರೆಗಳ ಪುನರುಜ್ಜೀವನ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಸ್ವಚ್ಛತೆ ಹಿತದೃಷ್ಟಿಯಿಂದ ಸಾರ್ವಜನಿಕ ಶೌಚಾಲಯಗಳು, ಮಾರುಕಟ್ಟೆ ನಿರ್ಮಾಣ, ಪ್ರತಿಯೊಂದು ವಾರ್ಡುಗಳಲ್ಲಿ ಸುಸಜ್ಜಿತ ರಸ್ತೆಗಳು, ಸ್ಮಶಾನಗಳ ಅಭಿವೃದ್ಧಿ, ಒಳಚರಂಡಿ ಯೋಜನೆ, ಜಿ +2 ಮನೆಗಳು, ಪುರಸಭೆ ಸಿಬ್ಬಂದಿಗಳಿಗಾಗಿ ವಸತಿ ಗೃಹ ನಿರ್ಮಾಣ, ನಿರ್ಮಾಣ ಹಂತದಲ್ಲಿರುವ ಪುರಸಭೆ ನೂತನ ಕಚೇರಿ, ಪುರಭವನ, ವ್ಯಾಪಾರ ವಹಿವಾಟುಗಾಗಿ ಪುರಸಭೆ ಒಡೆತನದಲ್ಲಿ ಸಾಕಷ್ಟು ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಶ್ರಮಿಸಿರುವ ದೇಶಪಾಂಡೆ ಅವರ ಸಾಧನೆಯ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ .

ಇಷ್ಟಕ್ಕೆ ನಿಲ್ಲದ ದೇಶಪಾಂಡೆ ಅವರ ಅಭಿವೃದ್ಧಿಯ ದಾಹಕ್ಕೆ ಸಾಕಷ್ಟು ನಿದರ್ಶನಗಳಿವೆ. ಪ್ರಮುಖವಾಗಿ ಸ್ವಂತ, ಸುಸಜ್ಜಿತ ಸರಕಾರಿ ಕಚೇರಿಗಳು, ವಿಐಪಿ ಪ್ರವಾಸಿ ಮಂದಿರಗಳು, ತಾಲೂಕು ಸರಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ವಿಸ್ತರಿಸಿ ಮೇಲ್ದರ್ಜೆಗೇರಿಸಿರುವುದು, ಯಾತ್ರಿ ನಿವಾಸ, ಸಿದ್ಧಿ ಭವನ, ಕನ್ವೆನÒನ್‌ ಹಾಲ್‌, ಸಬ್‌ ಜೈಲ್‌, ಡಿಪ್ಲೋಮಾ ಕಾಲೇಜು, ಖೇಲೋ ಇಂಡಿಯಾ ಸ್ಟೇಡಿಯಂ, ಹೊಸ ಬಸ್‌ ನಿಲ್ದಾಣ, ಸಾರಿಗೆ ಸಂಸ್ಥೆಯ ಡೀಪೋ ನಿರ್ಮಿಸಿ ಮಾದರಿ ಪಟ್ಟಣವಾಗಿ ಹಳಿಯಾಳ ಗುರುತಿಸಿಕೊಳ್ಳಲು ದೇಶಪಾಂಡೆಯವರ ಇಚ್ಛಾಶಕ್ತಿ ಮತ್ತು ಅವಿರಳ ಪ್ರಯತ್ನವೇ ಕಾರಣ.

2013ರಿಂದ 2022ರ ಅವಧಿಯಲ್ಲಿ ಹಳಿಯಾಳ ಪಟ್ಟಣ ಸಾಕಷ್ಟು ಬೆಳೆದು ನಿಲ್ಲಲು ದೇಶಪಾಂಡೆ ಮತ್ತು ಪುರಸಭೆ ಹಾಲಿ, ಮಾಜಿ ಅಧ್ಯಕ್ಷ-ಉಪಾಧ್ಯಕ್ಷರು, ಸರ್ವ ಸದಸ್ಯರು ಮತ್ತು ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಕಾರ್ಮಿಕರ ಪಾತ್ರವೂ ಬಹುಮುಖ್ಯವಾಗಿದೆ. ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಹಲವು ಯೋಜನೆಗಳು ಮುಕ್ತಾಯಗೊಂಡು ಲೋಕಾರ್ಪಣೆಗೊಂಡಿವೆ. ಇನ್ನು ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮುಂಬರುವ ವರ್ಷದಲ್ಲಿ ಮುಕ್ತಾಯಗೊಳ್ಳಲಿವೆ. ಪ್ರಮುಖ ಯೋಜನೆಗಳನ್ನು ಹೊರತುಪಡಿಸಿ ಮೂಲಸೌಕರ್ಯ ಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್‌ ವ್ಯವಸ್ಥೆ, ಸಾರಿಗೆ ಸಂಪರ್ಕಗಳು ಅಕ್ಕಪಕ್ಕದ ಪಟ್ಟಣ ಮತ್ತು ನಗರಗಳಿಗೆ ಹೋಲಿಸಿದರೆ ಹಳಿಯಾಳ ಅವುಗಳನ್ನು ಮೀರಿ ನಿಲ್ಲುತ್ತದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಣಕ್ಕೆ ಭೇಟಿ ನೀಡಿದಾಗ ದೇಶಪಾಂಡೆ ಅವರ ಕಾರ್ಯವೈಖರಿ ಕುರಿತು ಶ್ಲಾಘಿಸಿದರು.

ಈ ಎಲ್ಲ ಯೋಜನೆ ಮತ್ತು ಕಾಮಗಾರಿಗಳ ರೂವಾರಿಯಾಗಿರುವ ದೇಶಪಾಂಡೆ ಅವರಿಂದಾಗಿ ಹಳಿಯಾಳದ ಭೂಮಿಗೆ ಬಂಗಾರದ ಬೆಲೆ ದೊರೆಯುತ್ತಿದ್ದು, ಕೆಲ ವರ್ಷಗಳ ಹಿಂದೆ ಸಾವಿರ ರೂಪಾಯಿಗಳಲ್ಲಿದ್ದ ಭೂಮಿ ಇಂದು ಲಕ್ಷಾಂತರ ರೂಪಾಯಿ ಬೆಲೆ ಬಾಳುತ್ತಿದೆ. ಅಲ್ಲದೆ ಸಕಲ ಸೌಲಭ್ಯಗಳನ್ನು ಹೊಂದಿರುವ ಹಳಿಯಾಳ ಪಟ್ಟಣದಲ್ಲಿ ಶಾಶ್ವತವಾಗಿ ನೆಲೆಯೂರುತ್ತಿರುವವರ ಸಂಖ್ಯೆ ಕೆಲ ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಶಿಕ್ಷಕರು, ಅಧಿಕಾರಿಗಳು, ಸೈನಿಕರು, ಗುತ್ತಿಗೆದಾರರು, ವ್ಯಾಪಾರಿಗಳು, ಪರ ಪಟ್ಟಣಗಳ ಜನತೆ ಹಳಿಯಾಳದಲ್ಲಿ ವಾಸಿಸಲು ಅಣಿಯಾಗುತ್ತಿದ್ದಾರೆ.

ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ: ಕೊಳಗೇರಿ ನಿವಾಸಿಗಳ ಸಮಸ್ಯೆಯನ್ನರಿತ ದೇಶಪಾಂಡೆಯವರು 40 ವರ್ಷಗಳಿಂದ ಸಾಧ್ಯವಾಗದ ಸಮಸ್ಯೆಯನ್ನು ಪರಿಹರಿಸಲು ಸರಕಾರ ಮಟ್ಟದಲ್ಲಿ ಸಾಕಷ್ಟು ಪ್ರಯತ್ನಿಸಿ ಅವರಿಗೆ ಸ್ವಂತ ನಿವೇಶನ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದು,ಇತ್ತೀಚೆಗೆ 290 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದ್ದಾರೆ. ಅಲ್ಲದೆ ಸ್ಲಮ್‌ ಬೋರ್ಡ್‌ ಮುಖಾಂತರ 661 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ನೆರವಾಗಿದ್ದಾರೆ.

ಸ್ವಚ್ಛತೆಯಲ್ಲಿ ಹಲವು ಬಾರಿ ಹಳಿಯಾಳ ಪ್ರಥಮ:
ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಆರ್‌.ವಿ. ದೇಶಪಾಂಡೆ ಅವರು ಬೆಳ್ಳಂಬೆಳಗ್ಗೆ ಪಟ್ಟಣದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸುತ್ತಾರೆ. ಅಲ್ಲದೆ ಸೂಕ್ತ ಸಲಹೆ-ಸೂಚನೆ ನೀಡಿ ಸ್ವತ್ಛತಾ ಕಾರ್ಯಕ್ಕೆ ಹಿನ್ನಡೆ ಉಂಟಾಗಬಾರದೆಂದು ಖಡಕ್‌ ಆದೇಶ ನೀಡುತ್ತಾರೆ. ದೇಶಪಾಂಡೆಯವರಿಗೆ ಸ್ವತ್ಛತೆ ಕುರಿತು ಇರುವ ಕಾಳಜಿ ಹಾಗೂ ಪುರಸಭೆ ಮುಖ್ಯಾಧಿಕಾರಿ, ಪರಿಸರ ಅಧಿಕಾರಿ, ಪೌರ ಕಾರ್ಮಿಕರ ಪ್ರತಿನಿತ್ಯದ ಪರಿಶ್ರಮದಿಂದಾಗಿ 2021-22ರ ಸ್ವಚ್ಛ ಸರ್ವೇಕ್ಷಣ ಅಭಿಯಾನದ 25,000 ಜನಸಂಖ್ಯೆ ಹೊಂದಿರುವ ಪಟ್ಟಣಗಳ ಪೈಕಿ ಹಳಿಯಾಳ ಪಟ್ಟಣ ದಕ್ಷಿಣ ವಲಯದಲ್ಲಿ 7ನೇ ಸ್ಥಾನ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. 2020-21 ಸಾಲಿನ ದಕ್ಷಿಣ ವಲಯದಲ್ಲಿ 23ನೇ ಸ್ಥಾನ, ರಾಜ್ಯದಲ್ಲಿ 12ನೇ ಸ್ಥಾನವನ್ನು ತನ್ನದಾಗಿಸಿಕೊಂಡಿತ್ತು. 2019-20ರಲ್ಲಿ ಸೌತ್‌ ಜೋನ್‌ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ 233ನೇ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡಿತ್ತು. ಘನತ್ಯಾಜ್ಯ ವಸ್ತು ವಿಲೇವಾರಿ ಸೂಕ್ತ ನಿರ್ವಹಣೆಗಾಗಿ ಹಳಿಯಾಳ ಪುರಸಭೆ 2022ರಲ್ಲಿ ಜಿಲ್ಲೆಗೆ ಎರಡನೇ ಸ್ಥಾನ ಪಡೆದಿದೆ.

ಪ್ರಗತಿಯಲ್ಲಿರುವ ಕಾಮಗಾರಿ ವಿವರ
-ನೂತನ ಪುರಸಭೆ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ: 4 ಕೋಟಿ 99 ಲಕ್ಷ
-ಶಿಥಿಲಾವಸ್ಥೆಯಲ್ಲಿದ್ದ ಗಜಾನನ ವಾಣಿಜ್ಯ ಮಳಿಗೆ ತೆರವುಗೊಳಿಸಿ ಹೊಸ ವಾಣಿಜ್ಯ ಸಂಕೀರ್ಣಗಳ ನಿರ್ಮಾಣ: 1 ಕೋಟಿ ಐವತ್ತು ಲಕ್ಷ.
-ಪುರಸಭೆ ಸಿಬ್ಬಂದಿಗಳ ವಸತಿ ಗೃಹ ನಿರ್ಮಾಣ: 1 ಕೋಟಿ ಐವತ್ತು ಲಕ್ಷ.
-ಹಳೆ ಪುರಸಭೆ ಕಚೇರಿ ಕಟ್ಟಡ ತೆರವುಗೊಳಿಸಿ ಹೊಸ ಪುರಭವನ ಕಟ್ಟಡ ನಿರ್ಮಾಣ ಕಾಮಗಾರಿ: 2 ಕೋಟಿ
-ಮೌರ್ಯ ಹೋಟೆಲ್‌ ಪಕ್ಕ ವಾಣಿಜ್ಯ ಮಳಿಗೆ ನಿರ್ಮಾಣದ ಮುಂದುವರಿದ ಕಾಮಗಾರಿ: 1 ಕೋಟಿ 10 ಲಕ್ಷ
-ಜಿ + 2. 240 ಮನೆಗಳ ನಿರ್ಮಾಣ: 12 ಕೋಟಿ .
-ಒಳಚರಂಡಿ ಯೋಜನೆ: 76 ಕೋಟಿ 20 ಲಕ್ಷ
-ಕನ್ವೆನ್ಷನ್ ಹಾಲ್: 8 ಕೋಟಿ
-ನೂತನ ಬಸ್‌ ನಿಲ್ದಾಣ ಕಾಮಗಾರಿ: 4 ಕೋಟಿ 5 ಲಕ್ಷ
-ಖೇಲೋ ಇಂಡಿಯಾ ಸ್ಟೇಡಿಯಂ: 7 ಕೋಟಿ 50 ಲಕ್ಷ
-ಡಿಪ್ಲೊಮಾ ಕಾಲೇಜು: 8 ಕೋಟಿ.

ಸ್ಥಳೀಯ ಜನಪ್ರತಿನಿಧಿಗಳು ಮತ್ತು ಆಡಳಿತ ಮಂಡಳಿ ಸಹಕಾರದೊಂದಿಗೆ ನಾವು ಉತ್ತಮವಾಗಿ ಕಾರ್ಯ ನಿರ್ವಹಿಸಲು ಪ್ರಯತ್ನಿಸುತ್ತಿದ್ದೇವೆ. ಸಾರ್ವಜನಿಕರಿಗೆ ತ್ವರಿತ ಹಾಗೂ ಗುಣಮಟ್ಟದ ಸೇವೆ ಒದಗಿಸುವುದು ನಮ್ಮ ಆದ್ಯ ಕರ್ತವ್ಯ. ಜನತೆ ಸ್ವಚ್ಛತೆ ಹಾಗೂ ಇನ್ನಿತರೆ ವಿಷಯಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಹಕಾರ ನೀಡಬೇಕು.
ಪರಶುರಾಮ ಶಿಂಧೆ,
ಮುಖ್ಯಾಧಿಕಾರಿಗಳು, ಪುರಸಭೆ ಹಳಿಯಾಳ

ಮಾಜಿ ಶಾಸಕ ಸುನೀಲ ಹೆಗಡೆ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಟ್ಟಣದ ಅಭಿವೃದ್ಧಿಗಾಗಿ ಕೇಂದ್ರ-ರಾಜ್ಯ ಸರಕಾರ ಸಾಕಷ್ಟು ಅನುದಾನ ಒದಗಿಸಿದೆ. ಸರ್ಕಾರ ಜಾರಿ ಮಾಡುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ವ ಸದಸ್ಯರು ಕಾರ್ಯ ಪ್ರವೃತ್ತರಾಗಿದ್ದೇವೆ.
-ಸಂತೋಷ ಘಟಕಾಂಬಳೆ,
ಸದಸ್ಯರು, ಪುರಸಭೆ ಹಳಿಯಾಳ

ಶೇ. 95 ಸ್ವಚ್ಛತೆಯ ಕಾರ್ಯವನ್ನು ಪೌರಕಾರ್ಮಿಕರು ನಿರ್ವಹಿಸುತ್ತಾರೆ. ಬೇರೆ ಪಟ್ಟಣ ಮತ್ತು ನಗರಗಳಿಗೆ ಹೋಲಿಸಿದರೆ ಹಳಿಯಾಳದ ಪೌರಕಾರ್ಮಿಕರು ಸಹಕಾರಿಗಳು ಮತ್ತು ಕಠಿಣ ಪರಿಶ್ರಮಿಗಳಾಗಿದ್ದಾರೆ. ಸ್ವಚ್ಛ ಸರ್ವೆಕ್ಷನ್‌ ಸ್ಥಾನ ಕಾಪಾಡಿಕೊಂಡು ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಬೇಕೆಂಬ ಮಹತ್ವಾಕಾಂಕ್ಷೆ ಇದೆ. ಯಾವುದೇ ಕಸವು ವ್ಯರ್ಥವಾಗದಂತೆ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ.
-ಬಿ.ಎಸ್‌ ದರ್ಶಿತಾ,
ಪರಿಸರ ಅಧಿಕಾರಿಗಳು, ಪುರಸಭೆ ಹಳಿಯಾಳ

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.