ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ: ನಿಟ್ಟುಸಿರು ಬಿಟ್ಟ ಜನ


Team Udayavani, Aug 11, 2019, 1:35 PM IST

UK-TDY-2

ಕಾರವಾರ: ಕದ್ರಾ ಭಾಗದಲ್ಲಿ ನೀರು ತುಂಬಿರುವುದು.

ಕಾರವಾರ: ಉತ್ತರ ಕನ್ನಡದ ಕರಾವಳಿಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಆದರೆ ಘಟ್ಟದ ಮೇಲಿನ ಸಿದ್ದಾಪುರ, ಶಿರಸಿ, ಮುಂಡಗೋಡ, ಹಳಿಯಾಳದಲ್ಲಿ ಇನ್ನು ಮಳೆ ಬಿರುಸು ನಿಲ್ಲಿಸಿಲ್ಲ. ಸಿದ್ದಾಪುರದಲ್ಲಂತೂ ಶನಿವಾರ 153 ಮಿಮೀ ಮಳೆ ಸುರಿದಿದೆ. ಜಲಾಶಯಗಳಿಂದ ನೀರು ಹೊರ ಬಿಡುವುದು ನಿಲ್ಲಿಸಲಾಗಿದ್ದರೂ, ಈಗ ನೆರೆ ನಂತರದ ಗೋಳು ಆರಂಭವಾಗಿದೆ.

ನೆರೆ ಸಂತ್ರಸ್ತರಿಗೆ ವಿವಿಧ ಸಂಘ ಸಂಸ್ಥೆಗಳು ನೆರವು ನೀಡಲು ಮುಂದಾಗಿವೆ. ಆದರೆ ಇದು ಒಂದು ದಿನದ ಒಪ್ಪತ್ತಿನ ನೆರವು ಆಗಿದ್ದು, ಶಾಶ್ವತ ಪರಿಹಾರವನ್ನು ಸರ್ಕಾರ ನೀಡೀತೆ ಎಂದು ಕಾಯುತ್ತಿದ್ದಾರೆ. ನದಿ ದಂಡೆಯ ಜನರು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಮನೆಯಲ್ಲಿನ ಎಲ್ಲ ಸಾಮಾಗ್ರಿಗಳು ನಾಶವಾಗಿವೆ. ಇವನ್ನೆಲ್ಲಾ ವರ್ಷಗಟ್ಟಲೇ ದುಡಿದು ಸಂಪಾದಿಸಿದ್ದು, 12 ತಾಸಿನ ನೆರೆಯಲ್ಲಿ ಕೊಚ್ಚಿ ಹೋಗಿದೆ. ಈಗ ಮುಳುಗಿದ ಬದುಕು ಕಟ್ಟುವುದು ಹೇಗೆ ಎಂದು ಸಂತ್ರಸ್ತರು ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾರೆ. ಕಾಳಿ ನದಿ ದಂಡೆಯ ನೆರೆ ಸಂತ್ರಸ್ತರ ಕಣ್ಣೀರು ಒರೆಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬರುವ ಭರವಸೆ ಇಟ್ಟುಕೊಂಡೇ ನಿಟ್ಟುಸಿರಿನೊಂದಿಗೆ ಸೋಮವಾರ ಹಳ್ಳಿಗಳತ್ತ ಹೆಜ್ಜೆ ಹಾಕಬೇಕಿದೆ.

ಜನರು ದಶಕಗಳಿಂದ ದುಡಿದು ಕಟ್ಟಿದ ಮನೆ ಸತತ ಮೂರು ದಿನಗಳ ಮಳೆಗೆ ನಾಶವಾಗಿವೆ. ಮತ್ತು ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ಕಳೆದುಕೊಂಡು ಖಾಲಿ ಕೈಯಲ್ಲಿ ನಿಂತಿದ್ದಾರೆ. ಕಾರವಾರ ತಾಲೂಕಿನ 35 ಗ್ರಾಮಗಳು, ಅಂಕೋಲಾ 33, ಹೊನ್ನಾವರ 12, ಯಲ್ಲಾಪುರ 5, ಉಳಿದ ತಾಲೂಕುಗಳಲ್ಲಿ ತಲಾ 2 ಗ್ರಾಮಗಳ ಜನರು ಎಲ್ಲವನ್ನು ಕಳೆದುಕೊಂಡಿದ್ದಾರೆ. ಅವರೀಗ ಸರ್ಕಾರದ ಸಹಾಯದತ್ತ ಮುಖ ಮಾಡಿದ್ದಾರೆ. ರಾಜ್ಯ ಸರ್ಕಾರ ಜಿಲ್ಲೆಯ 11 ತಾಲೂಕುಗಳನ್ನು ಪ್ರವಾಹ ಪೀಡಿತ ಜಿಲ್ಲೆಯೆಂದು ಶನಿವಾರ ಸಂಜೆ ಘೋಷಿಸಿದೆ. ಆದರೆ ಪರಿಹಾರ ತಲುಪುವ ತನಕ ಜನ ಕಾಯಬೇಕಿದೆ. ಜಿಲ್ಲೆಯಲ್ಲಿ ನೆರೆಯಿಂದ 9104 ಹೆಕ್ಟೇರ್‌ ಕೃಷಿ ಭೂಮಿ ಜಲಾವೃತ ಆಗಿದ್ದು, ಬೆಳೆ ಹಾನಿಯಾಗಿದೆ. 996,72 ಹೆ. ತೋಟಗಾರಿಕಾ ಬೆಳೆ ಹಾನಿಯಾಗಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ 2018 ಮನೆಗಳು ಬಿದ್ದಿವೆ. ಇನ್ನೂ ಭಾಗಶಃ ಬಿದ್ದ ಮನೆಗಳು 3 ಸಾವಿರ ದಾಟಬಹುದು. 26 ಜಾನುವಾರುಗಳು ಸತ್ತಿವೆ. ಈ ಸಂಖ್ಯೆ ಸಹ 100 ದಾಟಬಹುದು. ಅಧಿಕಾರಿಗಳು ಸಮೀಕ್ಷೆ ಆರಂಭಿಸಿದ್ದಾರೆ. ನಷ್ಟದ ಅಂದಾಜು ಸಹ ನಡೆದಿದೆ.

ನಾಲ್ವರ ಸಾವು: ಜಿಲ್ಲೆಯಲ್ಲಿ ಈವರೆಗೆ ಸುರಿದ ಭಾರಿ ಮಳೆಗೆ ನೆರೆಯಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಹೇಳಿದೆ. ಈ ಪೈಕಿ ಒಂದು ಪ್ರಕರಣದಲ್ಲಿ ತಕ್ಷಣ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

 

•ನಾಗರಾಜ ಹರಪನಹಳ್ಳಿ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.