ಚಿನ್ನಕ್ಕೆ ಮುತ್ತಿಟ್ಟ ಶಿರಸಿಯ ರಾಜಶ್ರೀ ಭಟ್

•543 ವಿದ್ಯಾರ್ಥಿಗಳಿಗೆ ಪದವಿ•7 ವಿಭಾಗದಲ್ಲಿ 21 ವಿದ್ಯಾರ್ಥಿಗಳಿಗೆ ರ್‍ಯಾಂಕ್‌

Team Udayavani, Jun 9, 2019, 12:50 PM IST

uk-tdy-2..

ಧಾರವಾಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಮಹಾವಿದ್ಯಾಲಯದ 9ನೇ ಪದವಿ ಪ್ರದಾನ ಸಮಾರಂಭ ಶನಿವಾರ ಜರುಗಿತು.

ಮುಖ್ಯ ಅತಿಥಿಯಾಗಿದ್ದ ಜೈಪುರ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ(ಐಐಟಿ) ನಿರ್ದೇಶಕ ಡಾ| ಉದಯ ಯರಗಟ್ಟಿ ಅವರು ಕಾಲೇಜಿನ 543 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಕಾಲೇಜಿನ ಏಳು ವಿಭಾಗದಲ್ಲಿ ಪ್ರತಿ ವಿಭಾಗದಲ್ಲಿ ಹೆಚ್ಚಿಗೆ ಅಂಕ ಗಳಿಸಿದ ಮೂರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ರ್‍ಯಾಂಕ್‌ ವಿತರಿಸಲಾಯಿತು. ಈ ಪೈಕಿ ಅತಿ ಹೆಚ್ಚು ಅಂಕಗಳಿಸಿದ (ಸಿಜಿಪಿಎ 9.70) ಇನ್‌ಫಾರ್ಮೇಶನ್‌ ಸೈನ್ಸ್‌ ವಿಭಾಗದ ಶಿರಸಿಯ ರಾಜಶ್ರೀ ಭಟ್‌ಗೆ ಡಾ| ವೀರೇಂದ್ರ ಹೆಗ್ಗಡೆ ಅವರ ಚಿನ್ನದ ಪದಕ ಪ್ರದಾನ ಮಾಡಲಾಯಿತು.

ಚಿನ್ನದ ಬೇಟೆ: ಶಿರಸಿಯ ಮತ್ತಿಗಾರ ಗ್ರಾಮದ ರಾಜಾರಾಮ ಹಾಗೂ ಶ್ರೀಲತಾ ಭಟ್ ದಂಪತಿಗೆ ಇಬ್ಬರು ಮಕ್ಕಳಿದ್ದು, ಈ ಪೈಕಿ ಹಿರಿಯ ಮಗಳೇ ರಾಜಶ್ರೀ. ಪೌರೋಹಿತ್ಯ ಹಾಗೂ ಕೃಷಿಯಲ್ಲಿ ತೊಡಗಿಕೊಂಡಿರುವ ರಾಜಾರಾಮ, ತಾವಂತೂ ಕಲಿಯಲಿಲ್ಲ. ಮಗಳಾದರೂ ಕಲಿಯಲಿ ಎಂಬ ಉದ್ದೇಶದಿಂದ ಮಗಳ ಇಚ್ಛೆಯಂತೆ ಅವಳ ಆಸೆಗೆ ನೀರೆರೆದು ಪ್ರೋತ್ಸಾಹಿಸಿದ್ದಾರೆ. ಅಷ್ಟೇ ಅಲ್ಲದೇ ಮುಂದೆ ಕೂಡ ಅವಳು ಆಸೆ ಪಟ್ಟರೆ ಕಲಿಸಲು ಸಿದ್ಧರಾಗಿದ್ದಾರೆ. ತಾಯಿ ಶ್ರೀಲತಾ ಅವರಿಂದ ಸಂಗೀತದಲ್ಲೂ ಆಸಕ್ತಿ ಹೊಂದಿ ಗಾಯಕಿ ಆಗಿರುವ ರಾಜಶ್ರೀ, ಈಗ ಸಿಕ್ಕಿರುವ ಕೆಲಸ ಮಾಡಲು ಉತ್ಸುಕತೆ ಹೊಂದಿದ್ದು, ಮುಂದೆ ಉನ್ನತ ಶಿಕ್ಷಣ ಪಡೆಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ರ್‍ಯಾಂಕ್‌ ಪಡೆದವರು: ಕೆಮಿಕಲ್ ವಿಭಾಗದಲ್ಲಿ ತೇಜಸ್‌ ಶೇಟ್, ನಿಮಿತ ಎನ್‌, ಟಿ.ಯು. ರಚಿತಾ; ಕಂಪ್ಯೂಟರ ಸೈನ್ಸ್‌ ವಿಭಾಗದಲ್ಲಿ ಗುಣಾ ಕೆ. ಕಂಬಳಿಮಠ, ಸೌಮ್ಯ ಭಟ್, ಸೌಮ್ಯಾ ದೇಸಾಯಿ; ಸಿವಿಲ್ ವಿಭಾಗದಲ್ಲಿ ವಿಜಯಕುಮಾರ ಅರೀಕಟ್ಟಿ, ಅಲ್ತಾಫ್‌ ಹುಸೇನಖಾನ್‌ ಎಚ್.ಎಸ್‌., ಹರ್ಷಿತಾ ಕೆ.; ಇನ್‌ಫಾರ್ಮೇಶನ್‌ ಸೈನ್ಸ್‌ ವಿಭಾಗದ ರಾಜಶ್ರೀ ಭಟ್, ಪ್ರಿಯಾಂಕಾ ಎ., ಅಮೃತಾ ಎಚ್.; ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯುನಿಕೇಶನ್‌ ವಿಭಾಗದಲ್ಲಿ ವಿನುತಾ ನಾಯ್ಕ, ವಿನಯಗೌಡ ಆರ್‌., ಸ್ಪೂರ್ತಿ ಎಸ್‌.; ಇಲೆಕ್ಟ್ರಿಕಲ್ ವಿಭಾಗದಲ್ಲಿ ಶೃತಿ, ಪ್ರತೀಕ್ಷಾ ಹೆಗಡೆ, ಶ್ರೇಯಾ ಪಾಟೀಲ ಹಾಗೂ ಮೆಕ್ಯಾನಿಕಲ್ ವಿಭಾಗದಲ್ಲಿ ಅಕುಂಶ ನಾಯ್ಕ, ಎನ್‌.ಪ್ರವೀಣ, ಪ್ರಸಾದ ಜಿ. ಅನುಕ್ರಮವಾಗಿ ಆಯಾ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.