Hospital ದಾಖಲಾಗಿದ್ದ ಕಾರಣ ರಾಜ್ಯಸಭಾ ಮತದಾನ ಮಾಡಿಲ್ಲ: ಶಿವರಾಮ ಹೆಬ್ಬಾರ್
BJP ಯಾವುದೇ ಕಾನೂನಾತ್ಮಕ ಕ್ರಮ ಕೈಗೊಂಡರೂ ಎದುರಿಸುತ್ತೇನೆ....ದಾಖಲೆ ಇದ್ದರೆ ಬಿಡುಗಡೆ ಮಾಡಲಿ..
Team Udayavani, Feb 28, 2024, 5:07 PM IST
ಯಲ್ಲಾಪುರ: ”ನನಗೆ ಆರೋಗ್ಯದ ತೊಂದರೆಯಿಂದ ರಾಜ್ಯಸಭಾ ಮತದಾನದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ,ಮಂಗಳವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದೆ”ಎಂದು ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಬುಧವಾರ ಕಾರಣ ನೀಡಿದ್ದಾರೆ.
ಲೋಕೋಪಯೋಗಿ ಇಲಾಖೆ ಪ್ರವಾಸಿಗ್ರಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಪಲಾಯನ ಗೈದಿದ್ದೇನೆ,ತಪ್ಪಿಸಿಕೊಂಡು ಹೋಗಿದ್ದೇನೆ ಎಂದೆಲ್ಲ ಮಾಧ್ಯಮದಲ್ಲಿ ಪ್ರಕಟವಾಗಿದೆ.ಆದರೆ ಅನಾರೋಗ್ಯ ನಿಮಿತ್ತ ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ಮತದಾನದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದರು.
ಜೆಡಿ ಎಸ್- ಬಿಜೆಪಿ ಸಂಬಂಧದ ಕಾರಣಕ್ಕಾಗಿ ನಾನು ಹೋಗಿಲ್ಲ.ಆರೋಗ್ಯ ಸರಿ ಇರಲಿಲ್ಲ ಎಂಬ ದ್ವಂದ್ವದ ಹೇಳಿಕೆಯನ್ನೂ ಈ ಸಂದರ್ಭದಲ್ಲಿ ಒತ್ತಿ ಹೇಳಿದರು.ವಿಪ್ ಉಲ್ಲಂಘನೆ ಬಗ್ಗೆ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಂಡರೂ ಎದುರಿಸುತ್ತೇನೆ. ಜಿಲ್ಲೆ ಮತ್ತು ತಾಲೂಕಿನ ಬಿಜೆಪಿ ನಡೆಯ ಬಗ್ಗೆ ಚುನಾವಣೆ ಆದಾಗಿನಿಂದಲೂ ಬೇಸರ ವ್ಯಕ್ತಪಡಿಸುತ್ತಲೇ ಬಂದಿದ್ದೇನೆ.ಅಮಾನತು ಮಾಡಿ,ಅವರಿಗೇ ಮತ್ತೆ ಹುದ್ದೆ ನೀಡಿದ್ದಾರೆ.ಪದಾಧಿಕಾರಿಗಳೇ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದ ಬಗ್ಗೆ ಬೇಸರ ಇದೆ ಎಂದು ಪುನರುಚ್ಚರಿಸಿದ ಅವರು ನನಗೆ ಪಲಾಯನ ಮಾಡಬೇಕಾದ ಅವಶ್ಯಕತೆಯೂ ಇಲ್ಲ.ಊಹಾಪೋಹಗಳಿಗೆ ಉತ್ತರ ಕೊಡಬೇಕಾದ ಅವಶ್ಯಕತೆಯೂ ಇಲ್ಲ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನ ಆತ್ಮೀಯ ಸ್ನೇಹಿತರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜತೆಗೆ ಹೋದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.
ಕಾಂಗ್ರೆಸ್ ಗೆಲುವು ನಿಶ್ಚಿತ ಇದ್ದಾಗ ನಮ್ಮ ಅವಶ್ಯಕತೆ ಅವರಿಗಿಲ್ಲ.ರಾತ್ರಿ ಕದ್ದುಮುಚ್ಚಿ ಹೋಗ ಬೇಕಾದ ಅಗತ್ಯತೆಯೂ ಇಲ್ಲ.ಅಭಿವೃದ್ಧಿ ವಿಚಾರಕ್ಕೆ ಮಾತ್ರ ಹಿಂದೆ ಭೇಟಿ ಆಗಿದ್ದೆ ಅಷ್ಟೇ ಎಂದರು.ಆರೋಗ್ಯ ಸರಿ ಇರಲಿಲ್ಲ.ಬೆಂಗಳೂರಿನಲ್ಲೇ ಇದ್ದೆ.ನಾನು ಬಿಜೆಪಿ ಯಲ್ಲೇ ಇದ್ದೇನೆ.ಯಾರಿಗೂ ಯಾವುದೇ ಸಂಶಯ ಬೇಡ.ಆಸ್ಪತ್ರೆ ವಿಚಾರ ಪ್ರಚಾರ ಮಾಡಲಿಕ್ಕಾಗುವುದಿಲ್ಲ.ಕ್ಷೇತ್ರದ ಅಭಿವೃದ್ಧಿ ಗೆ ಕಿಂಚಿತ್ತೂ ತೊಂದರೆ ಆಗಲು ಬಿಡುವುದಿಲ್ಲ ಎಂದರು.
ಇದೆ ವೇಳೆ ಸಿದ್ದಿ ಯುವಕನ ಕೊಲೆ ಘಟನೆ ಶೋಭೆ ತರದು.ತಪ್ಪಿತಸ್ಥರಿಗೆ ಕ್ರಮ ಆಗಬೇಕು. ಆರೋಪಿಗಳ ರಕ್ಷಣೆ ಮಾಡಬೇಕಾದ ಹಂಗೂ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ