ಕೈ-ಜೆಡಿಎಸ್‌ನಲ್ಲಿ ಬಂಡಾಯ


Team Udayavani, Nov 17, 2019, 1:23 PM IST

uk-tdy-1

ಮುಂಡಗೋಡ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೂರು ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಬಂಡಾಯದ ವಾತಾವರಣ ನಿರ್ಮಾಣವಾದರೆ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶಿತವಾಗಿದೆ. ಡಿ.5 ರಂದು ಮತದಾನ ನಡೆಯಲಿದ್ದು ಕಳೆದ ಎರಡು ದಿನಗಳಿಂದ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು ಮೂರೂ ಪಕ್ಷದವರು ಪ್ರಚಾರ ಕಾರ್ಯವನ್ನು ಭರದಿಂದ ನಡೆಸಿದ್ದಾರೆ.

ಈಗಾಗಲೆ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಸಿದ್ದು ಬಿಜೆಪಿ ಶಿವರಾಮ ಹೆಬ್ಟಾರ ಹಾಗೂ ಜೆಡಿಎಸ್‌ನ ಚೈತ್ರಾ ಗೌಡ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಉಪಚುನಾವಣೆಯಾಗಿದ್ದರಿಂದ ಈ ಚುನಾವಣೆ ಹೆಚ್ಚಿನ ತುರುಸಿನಿಂದ ನಡೆಯಲಿದೆ ಎನ್ನಲಾಗಿದೆ.

ಬಂಡಾಯದ ಬಿಸಿ: ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಬಂಡಾಯದ ವಾತಾವರಣ ನಿರ್ಮಾಣವಾಗಿದ್ದು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಯುವ ಮುಖಂಡ ಲಕ್ಷ್ಮಣ ಬನಸೋಡೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಜೆಡಿಎಸ್‌ನಲ್ಲಿಯೂ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಕುಟ್ರಿ ಹಾಗೂ ಉಮಾಕಾಂತ ಬೆಳ್ಳನಕೇರಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎನ್ನುತ್ತಿದ್ದು ಸದ್ಯ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಬಂಡಾಯ ವಾತಾವರಣ ನಿರ್ಮಾಣವಾಗಿರುವುದು ಅಭ್ಯರ್ಥಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಪ್ರಚಾರ ಶುರು: ತಾಲೂಕಿನಲ್ಲಿ ಮೂರೂ ಪಕ್ಷದ ಮುಖಂಡರು ಗ್ರಾಮೀಣ ಭಾಗದಲ್ಲಿ ಈಗಾಗಲೆ ಪ್ರಚಾರ ಕಾರ್ಯ ನಡೆಸಿದ್ದು ತಮ್ಮ ಸರಕಾರದ ಅವಧಿಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡುತ್ತಿದ್ದಾರೆ. ಹಾಗೂ ತಮ್ಮ ಪಕ್ಷದ ಅಭ್ಯರ್ಥಿಗೆ ಮತವನ್ನು ಹಾಕುವಂತೆ ಮನವಿ ಮಾಡುತ್ತಿದ್ದಾರೆ.

ಬಿಜೆಪಿಗರ ಉತ್ಸಾಹ: ಶಿವರಾಮ ಹೆಬ್ಟಾರ ಬಿಜೆಪಿ ಅಭ್ಯರ್ಥಿಯಾಗಿದ್ದು ಇದೀಗ ಮಾಜಿ ಶಾಸಕ ವಿ.ಎಸ್‌. ಪಾಟೀಲ ಹಾಗೂ ಜಿಪಂ ಸದಸ್ಯ ಎಲ್‌.ಟಿ. ಪಾಟೀಲ ಪ್ರಚಾರ ಕಾರ್ಯ ನಡೆಸಿದ್ದು ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಮೂರು ಪ್ರಮುಖ ಮುಖಂಡರು ಒಂದಾಗಿ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವುದು ಮಾತ್ರ ಬಿಜೆಪಿ ಪಾಳಾಯದಲ್ಲಿ ಉತ್ಸಾಹ ಮತ್ತಷ್ಟು ಇಮ್ಮಡಿಗೊಳಿಸಿದೆ.

ಒಟ್ಟಿನಲ್ಲಿ ಮೂರೂ ಪಕ್ಷಗಳ ಅಭ್ಯರ್ಥಿಗಳ ಪ್ರಚಾರ ಕಾರ್ಯ ನಡೆದಿದ್ದು ದಿನದಿಂದ ದಿನಕ್ಕೆ ಕ್ಷೇತ್ರದಲ್ಲಿ ಚುನಾವಣಾ ಕಾವು ಏರತೋಡಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಬಂಡಾಯ ಶಮನವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.