ತೆಂಗಿನ ಪೌಡರ್‌ಗೆ ತಗ್ಗಿದ ಬೇಡಿಕೆ; ಆತಂಕದಲ್ಲಿ ತೆಂಗು ಬೆಳೆಗಾರರು

ತೆಂಗಿನ ಕಾಯಿಯನ್ನು ತುಮಕೂರು ಜಿಲ್ಲೆಯ ತಿಪಟೂರಿಗೆ ಕಳುಹಿಸುತ್ತಾರೆ.

Team Udayavani, Jun 10, 2023, 6:07 PM IST

ತೆಂಗಿನ ಪೌಡರ್‌ಗೆ ತಗ್ಗಿದ ಬೇಡಿಕೆ; ಆತಂಕದಲ್ಲಿ ತೆಂಗು ಬೆಳೆಗಾರರು

ಗೋಕರ್ಣ: ಕಲ್ಪವೃಕ್ಷ ಎಂದೇ ಕರೆಯಲಾಗುವ ತೆಂಗಿನಕಾಯಿ ಬೆಲೆ ಭಾರಿ ಇಳಿಕೆಯಾಗಿದೆ. ಹೀಗಾಗಿ ಈ ಉದ್ಯೋಗವನ್ನೇ ನಂಬಿ ಬದುಕುವ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇನ್ನೊಂದೆಡೆ ಕೂಲಿಯಾಳುಗಳ ಕೊರತೆಯೂ ತೆಂಗು ಬೆಳೆಗಾರರನ್ನು ಕಾಡುತ್ತಿದೆ. ತೆಂಗು ಬೆಳೆ ಈಗ ಅಷ್ಟಾಗಿ ಲಾಭದಾಯಕವಲ್ಲ ಎನ್ನುವಷ್ಟರ ಮಟ್ಟಿಗೆ ಬಂದು ತಲುಪಿದೆ.

ಜಿಲ್ಲೆಯಲ್ಲಿ 10087.73 ಹೆಕ್ಟೇರ್‌ ಪ್ರದೇಶದಲ್ಲಿ ತೆಂಗನ್ನು ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಹೊನ್ನಾವರ ತಾಲೂಕು ಪ್ರಥಮ ಸ್ಥಾನದಲ್ಲಿದ್ದರೆ, ಹಳಿಯಾಳ ಕೊನೆಯ ಸ್ಥಾನದಲ್ಲಿದೆ. ತೆಂಗಿನ ಮರಕ್ಕೆ ಕಾಂಡ ಸೋರುವ ರೋಗ, ನುಸಿ ಪೀಡೆ, ಮೊಗ್ಗು ಕೊಳೆ ರೋಗ, ಮಿಳ್ಳೆ ಉದುರುವುದು ಹೀಗೆ ವಿವಿಧ ರೋಗಗಳ ಜತೆಯಲ್ಲಿ ತುಂಬೆ ಹುಳು, ಮಂಗನ ಕಾಟ ಕೂಡ ರೈತರನ್ನು ನಿದ್ದೆಗೆಡಿಸಿದೆ.

ಈ ಬಾರಿಯ ಬರದಿಂದಾಗಿ ರೈತರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಸುಲಿದ ಒಂದು ಕೆ.ಜಿ. ತೆಂಗಿನ ಕಾಯಿಗೆ 37 ರೂ. ಇದ್ದು, ಪ್ರಸ್ತುತ 23 ರೂ.ಗೆ ಕುಸಿದಿದೆ. ಹೀಗಾಗಿ ರೈತರು ಅನಿವಾರ್ಯವಾಗಿ ಮಾರಾಟ ಮಾಡಬೇಕಾಗಿದೆ.

ಗೋಕರ್ಣ ಸಮೀಪದ ಬರ್ಗಿ ಗ್ರಾಮದ ವಿನಾಯಕ ಗುನಗಾ ಅವರು ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ನೇರವಾಗಿ ವಾರಕ್ಕೆ ಸುಮಾರು 20 ಸಾವಿರ ತೆಂಗಿನ ಕಾಯಿ ಖರೀದಿಸುತ್ತಾರೆ. ಸ್ಥಳದಲ್ಲಿಯೇ ತೂಕ ಮಾಡಿ ಹಣ ನೀಡುತ್ತಾರೆ. ತಾವು ಖರೀದಿಸಿದ ತೆಂಗಿನ ಕಾಯಿಯನ್ನು ತುಮಕೂರು ಜಿಲ್ಲೆಯ ತಿಪಟೂರಿಗೆ ಕಳುಹಿಸುತ್ತಾರೆ.

ಬೆಲೆ ಕುಸಿತಕ್ಕೆ ಕಾರಣ: ಸ್ಥಳೀಯವಾಗಿ ಅಡುಗೆ ಮತ್ತು ವಿವಿಧ ಖಾದ್ಯಗಳಿಗೆ ಕೊಬ್ಬರಿ ಬಳಸಲಾಗುತ್ತದೆ. ಆದರೆ ತಿಪಟೂರಿನಲ್ಲಿ ಈ ಕೊಬ್ಬರಿಯನ್ನು ಪೌಡರ್‌ ಮಾಡಿ ರಾಜ್ಯ ಹಾಗೂ ಹೊರರಾಜ್ಯಗಳಿಗೆ ಮಾರಾಟ ಮಾಡಲಾಗುತ್ತದೆ.

ಅಲ್ಲಿ ಸಾಕಷ್ಟು ಕಂಪನಿಗಳಿದ್ದು, ಅವೆಲ್ಲವೂ ತೆಂಗಿನ ಕಾಯಿಯನ್ನು ಪೌಡರ್‌ ಮಾಡಿ ಸರಬರಾಜು ಮಾಡುತ್ತಿದ್ದವು. ಬ್ರೆಡ್‌, ಪೇಡಾ ಸೇರಿದಂತೆ ಹಲವು ಸಿಹಿ ತಿಂಡಿ ಮತ್ತು ಆಹಾರಗಳಿಗೆ ಪೌಡರ್‌ ಕೊಬ್ಬರಿಯನ್ನೇ ಬಳಸುತ್ತಾರೆ. ಆದರೆ ಈಗ ಅದರ ಬೇಡಿಕೆ ಕುಗ್ಗಿದ್ದರಿಂದಾಗಿ ತಿಪಟೂರಿನಲ್ಲಿ ಖರೀದಿಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅವರು 37 ರೂ.ದಿಂದ 23ಕ್ಕೆ ಇಳಿಸಿದ್ದಾರೆ. ಇದರಿಂದಾಗಿ ಬೆಲೆ ಇಳಿಕೆಗೆ ಕಾರಣವಾಗಿದೆ.

ತೆಂಗು ಬೆಳೆಯನ್ನೇ ನಂಬಿಕೊಂಡು ಜೀವನ ಸಾಗಿಸಲಾಗುತ್ತಿತ್ತು. ಇನ್ನು ಕೂಲಿಯಾಳುಗಳ ಸಮಸ್ಯೆ ಕೂಡ ಸಾಕಷ್ಟಿದೆ. ಒಂದು ಮರ ಹತ್ತಿದರೆ 50 ರೂ. ಪಡೆಯುತ್ತಾರೆ. ಇದರ ಜತೆಗೆ ಕೆಜಿಯೊಂದರ ಮೇಲೆ 14 ರೂ. ಕಡಿಮೆಯಾಗಿದ್ದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ.
*ಲಕ್ಷ್ಮಣ ಗೌಡ, ತೆಂಗು ಬೆಳೆಗಾರ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.