ಕಲಾವಿದರ ನೆರವಿಗೆ ಸಂಕಷ್ಟ ಪರಿಹಾರ ನಿಧಿ


Team Udayavani, Apr 25, 2020, 6:37 PM IST

ಕಲಾವಿದರ ನೆರವಿಗೆ ಸಂಕಷ್ಟ  ಪರಿಹಾರ ನಿಧಿ

ಸಾಂದರ್ಭಿಕ ಚಿತ್ರ

ಶಿರಸಿ: ವೃತ್ತಿಪರ ಬಡ ಕಲಾವಿದರ ಸಂಕಷ್ಟಕ್ಕೆ ನೆರವಾಗುವ ನಿಧಿ ಸ್ಥಾಪಿಸಲು ಯಕ್ಷಗಾನ ಅಕಾಡೆಮಿ ಯೋಜಿಸಿದೆ. ಅಪಘಾತದಲ್ಲಿ ಗಾಯಗೊಂಡವರು, ರಂಗಭೂಮಿಯಲ್ಲಿ ಸೇವೆ ಸಲ್ಲಿಸಲಾಗದೇ ಅವಘಡದಲ್ಲಿ ನೊಂದವರು, ಕೋವಿಡ್ 19 ಸಂಕಷ್ಟದಲ್ಲಿ ಸಿಲುಕಿದವರ ತುರ್ತು ನೆರವಿಗೆ ಈ ನಿಧಿ ಬಳಕೆಗೆ ಅವಕಾಶ ಕಲ್ಪಿಸಲು ಚಿಂತಿಸಲಾಗಿದೆ.

ಏನಿದು ಯೋಜನೆ?: ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋವಿಡ್ 19 ಸಂಕಷ್ಟದಲ್ಲಿ ಅರ್ಹ ಕಲಾವಿದರಿಗೆ 2 ಸಾವಿರ ರೂ. ನೀಡಲು ಯೋಜಿಸಿದೆ. ಆದರೆ, ಯಕ್ಷಗಾನ ಅಕಾಡೆಮಿ ದೀರ್ಘ‌ಕಾಲಿಕ ಸಂಕಷ್ಟ ನಿಧಿ ಸ್ಥಾಪನೆಗೆ ಚಿಂತಿಸಿದ್ದು, ಕೋವಿಡ್ 19 ಬಳಿಕವೂ ಉಳಿದ ಹಣದಲ್ಲಿ ಸಂಕಷ್ಟದಲ್ಲಿರುವ ಕಲಾವಿದರ ಬದುಕಿಗೆ ಬೆಳಕಾಗಲು ಬಯಸಿದೆ.

ಕಳೆದ ಬಜೆಟ್‌ ಪೂರ್ವದಲ್ಲೇ ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌ ಸಂಕಷ್ಟ ಪರಿಹಾರ ನಿಧಿ  ಸ್ಥಾಪನೆಗೆ ಕ್ರಿಯಾಯೋಜನೆ ಸಲ್ಲಿಸಿ ಅನುಮತಿ ಪಡೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹಾಸಿಗೆ ಹಿಡಿದವರಿಗೆ, ಮರಳಿ ರಂಗ ಏರದೇ ಇರುವವರಿಗೆ ನೆರವಾಗುವ ನಿಟ್ಟಿನಲ್ಲಿ ಈ ಪ್ರಸ್ತಾಪ ಮಾಡಲಾಗಿತ್ತು.

ಆರ್ಥಿಕ ಮೂಲ ಏನು?: ಅಕಾಡೆಮಿ ಸಾರ್ವಜನಿಕರ ಸಹಭಾಗಿತ್ವವನ್ನೂ ಬಯಸಿದೆ. ಅಧ್ಯಕ್ಷ, ರಜಿಸ್ಟ್ರಾರ್‌ ಅವರ ಜಂಟಿ ಖಾತೆಯನ್ನು ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿ ತೆರೆದು ಅಲ್ಲಿಗೇ ನೇರವಾಗಿ ದಾನಿಗಳು ನೆರವನ್ನು ಜಮಾ ಮಾಡಬಹುದಾಗಿದೆ. ನಿಗದಿತ ಸಮಯದಲ್ಲಿ ಜಮಾಗೊಂಡ ಹಣ ಪರಿಶೀಲಿಸಿ ಸಂಕಷ್ಟದಲ್ಲಿರುವ ಕಲಾವಿದರಿಗೆ ನೀಡಲು ಚಿಂತಿಸಲಾಗಿದೆ.

ವೃತ್ತಿಪರ ಕಲಾವಿದರ ಕಷ್ಟ: ಮೂಡಲ ಪಾಯ, ಘಟ್ಟದ ಕೋರೆ, ಬಡಾಬಡಗು, ಬಡಗು, ತೆಂಕು ಸೇರಿದಂತೆ ಯಕ್ಷಗಾನ ಅಕಾಡೆಮಿಗೆ ಅನೇಕ ಕಲಾ ಪ್ರಕಾರಗಳು ಬರಲಿವೆ. ಇದರಲ್ಲಿ ಅನೇಕ ವೃತ್ತಿ ಕಲಾವಿದರು ಈಗ ಕೋವಿಡ್ 19 ಸಂಕಷ್ಟದಲ್ಲಿದ್ದಾರೆ. ಅವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಸಂಗ್ರಹಿಸಿದ ಮಾಹಿತಿ ಆಧರಿಸಿ ಲಭ್ಯ ನಿಧಿ  ಬಳಸಿ ನೆರವಾಗುವುದು ಆಶಯವಾಗಿದೆ.

ಹಾಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು ಶಿರಸಿಯಲ್ಲಿದ್ದಾರೆ. ಅವರು ಬೆಂಗಳೂರಿಗೆ ತೆರಳಿ ರಜಿಸ್ಟ್ರಾರ್‌ ಜೊತೆ ಬ್ಯಾಂಕ್‌ ಖಾತೆ ತೆರೆಯಬೇಕು. ಆದರೆ, ಶಿರಸಿಯಿಂದ ಬೆಂಗಳೂರಿಗೆ ತೆರಳಲು ಅನುಮತಿ ಲಭ್ಯವಾಗದೇ ಲಾಕ್‌ಡೌನ್‌ ತೆರೆಯುವ ತನಕ ಕಾಯುವಂತಾಗಿದೆ.

ಯಕ್ಷಗಾನ ಅಕಾಡೆಮಿ ಬಡ ಅರ್ಹ ವೃತ್ತಿಪರ ಕಲಾವಿದರ ನೆರವಿಗೆ ನಿಧಿ ಸ್ಥಾಪಿಸಲು ಯೋಜಿಸಿದೆ. ಸಾರ್ವಜನಿಕರ, ದಾನಿಗಳ ಸಹಕಾರ ಅಗತ್ಯವಾಗಿದೆ. ಪ್ರೊ| ಎಂ.ಎ. ಹೆಗಡೆ ದಂಟ್ಕಲ್‌, ಯಕ್ಷಗಾನ ಅಕಾಡೆಮಿ ಅಧ್ಯಕ್ಷ

ಇದೊಂದು ನೆರವಾಗುವ ಯೋಜನೆ. ಶಾಶ್ವತ ನಿಧಿ  ಸ್ಥಾಪನೆ ಮೂಲಕ ನಿರಂತರವಾಗಿ ಕಲಾವಿದರ ಕೈ ಹಿಡಿಯುವಂತಾಗಲಿ. –ವಿಘ್ನೇಶ್ವರ ಗೌಡ ಕೆಸರಕೊಪ್ಪ, ಯಕ್ಷಗಾನ ಕಲಾವಿದ

 

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.