ಗಣರಾಜ್ಯೋತ್ಸವ ಸರಳ ಆಚರಣೆ
Team Udayavani, Jan 27, 2021, 6:59 PM IST
ಅಂಕೋಲಾ: ಗಣರಾಜ್ಯೋತ್ಸವ ತಾಲೂಕಿನಲ್ಲಿ ಸರಳವಾಗಿ ಆಚರಿಸಲಾಯಿತು. ಪುರಸಭೆ ಅಧ್ಯಕ್ಷೆ ಶಾಂತಲಾ ಅರುಣ ನಾಡಕರ್ಣಿ ಸಮಾಜ ಮಂದಿರದ ಎದುರಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ನಮ್ಮ ಸಂವಿಧಾನವನ್ನು 1950 ರ ಜ.26 ರಂದು ಇಡೀ ದೇಶಕ್ಕೆ ಏಕೈಕ ಪೌರತ್ವವನ್ನು ಉಪಬಂಧಿಸಿ, ಎಲ್ಲಾ ಪೌರರಿಗೆ ಮೂಲಭೂತ ಹಕ್ಕುಗಳನ್ನು ದಯಪಾಲಿಸಿ, ಪ್ರಜೆಗಳು ಜವಾಬ್ದಾರಿಯುತವಾಗಿ ವರ್ತಿಸಲು ಮೂಲಭೂತ ಕರ್ತವ್ಯಗಳನ್ನು ಸಹ ಸಂವಿಧಾನವು ನೀಡಿದೆ.ನಮ್ಮ ರಾಷ್ಟ್ರವನ್ನು ಇನ್ನಷ್ಟು ಅಭ್ಯುದಯದ ಪಥದಲ್ಲಿಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಕರ್ತವ್ಯವಾಗಿದೆ ಎಂದರು.
ಇದನ್ನೂ ಓದಿ:ಸಂವಿಧಾನ ದೇಶದ ಭದ್ರ ಬುನಾದಿ: ನಯನಾ
ತಾಪಂ ಅಧ್ಯಕ್ಷೆ ಸುಜಾತಾ ಗಾವಂಕರ, ತಹಶೀಲ್ದಾರ್ ಉದಯಕುಮಾರ ಕುಂಬಾರ, ಪುರಸಭೆ ಮುಖ್ಯಾಧಿಕಾರಿ ಬಿ.ಪ್ರಹ್ಲಾದ, ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯಕ, ಉಪಸ್ಥಿತರಿದ್ದರು