ದಲಿತ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಲು ಮನವಿ


Team Udayavani, Sep 28, 2018, 5:29 PM IST

28-sepctember-20.gif

ಕಾರವಾರ: ದಲಿತ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಹಾಸ್ಟೆಲ್‌ ವ್ಯವಸ್ಥೆ ನೀಡುವಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮುಂದಿದೆ. ಆದರೆ ಕಳೆದ ಆಗಸ್ಟ್‌ 2018ರಲ್ಲಿ ಸಮಾಜ ಕಲ್ಯಾಣ ಇಲಾಖೆ ಹೊರಡಿಸಿದ ಆದೇಶ ದಲಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಪಾಲಿಗೆ ಮರಣಶಾಸನದಂತಿದೆ. ತಕ್ಷಣ ಈ ಆದೇಶ ರದ್ದು ಮಾಡಿ, ಮೊದಲಿನಿಂತೆ ಹಾಸ್ಟೆಲ್‌ನಲ್ಲಿ ಉಳಿಯಲು ಬಯಸುವ ಎಲ್ಲ ದಲಿತ ವಿದ್ಯಾರ್ಥಿಗಳಿಗೆ ವಸತಿ ಹಾಸ್ಟೆಲ್‌ ಮತ್ತು ಶಿಕ್ಷಣ ನೀಡಿ ಎಂದು ರಾಜ್ಯದ ಮುಖ್ಯಮಂತ್ರಿ ಎಚ್‌ .ಡಿ. ಕುಮಾರಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದವರು ಜಿಲ್ಲಾಧಿಕಾರಿಗಳ ಮೂಲಕ ಮನವಿ ಮಾಡಿದರು.

ಜಿಲ್ಲಾ ಸಂಚಾಲಕ ಶಿವಾನಿ ಬನವಾಸಿ, ರಾಮಚಂದ್ರ ಇಳಸೂರು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ ಮಾಡಿದ ಕರಾದಸಂಸ, ದಲಿತ ಜನಾಂಗದ ಯಾವುದೇ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವಾಸ ನಿರಾಕರಿಸಬಾರದು ಎಂಬ ಪ್ರಮುಖ ಬೇಡಿಕೆ ಇಟ್ಟಿತು. ಹಾಸ್ಟೆಲ್‌ ಮತ್ತು ಶಿಕ್ಷಣಕ್ಕೆ ಅರ್ಜಿ ಹಾಕಿದ ಯಾವುದೇ ವಿದ್ಯಾರ್ಥಿಗೆ ವಸತಿ ಮತ್ತು ಶಿಕ್ಷಣ ನಿರಾಕರಿಸಬೇಡಿ ಎಂದ ದಲಿತ ಮುಖಂಡರು, ಭೂಮಿ ಒಡೆತನಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಫಲಾನುಭವಿಗಳಿಗೆ ಭೂಮಿ ನೀಡಬೇಕು. ದಲಿತರಿಗೆ ಇರುವ ಯೋಜನೆಗಳ ಜಾರಿಗೆ ಏಕಗವಾಕ್ಷಿ ನೀತಿ ಜಾರಿಗೆ ತರಬೇಕು. ಆಯಾ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದ ಸಮಿತಿ ಇದ್ದು, ಇದು ದಲಿತರ ಯೋಜನೆ ಜಾರಿಗೆ ಅಡ್ಡಿಯಾಗಿದೆ. ಇಂತಹ ಶಾಸಕರ ನೇತೃತ್ವದ ಸಮಿತಿಗಳನ್ನು ರದ್ದು ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ಅಡಿ ಬರುವ ಎಲ್ಲ ನಿಗಮ ಮಂಡಳಿಗಳಲ್ಲಿ ದಲಿತರು, ಹಿಂದುಳಿದವರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಅಂಥರಿಗೆ ಸಾಲ ಮಂಜೂರು ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ಸರ್ಕಾರ ಕಾಯಂ ಮಾಡಬೇಕೆಂಬ ಬೇಡಿಕೆಯನ್ನು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಮೂಲಕ ಸಲ್ಲಿಸಲಾಯಿತು.

ಇಳಸೂರು ಜಮೀನು ಮಂಜೂರಿ ಮಾಡಲು ಮನವಿ: ಶಿರಸಿ ಬಳಿ ಇಳಸೂರಿನಲ್ಲಿ ಆರು ಎಕರೆ ಭೂಮಿಯನ್ನು ದಲಿತರ ನಿವೇಶನಕ್ಕೆ ಮೀಸಲಿಡಲಾಗಿದೆ. ಕಳೆದ ಹತ್ತು ವರ್ಷಗಳಿಂದ ಈ ಭೂಮಿಯನ್ನು ದಲಿತರಿಗೆ ನೀಡದೇ ಸತಾಯಿಸಲಾಗುತ್ತಿದೆ. ದಲಿತರಿಗೆ ವಸತಿಗಾಗಿ ಭೂಮಿ ನೀಡುವುದಾಗಿ ಜಿಲ್ಲಾಡಳಿತ, ಸರ್ಕಾರವೇ ಮೊದಲು ಪ್ರಕಟಿಸಿತ್ತು. ಈ ಭೂಮಿ ಒತ್ತುವರಿಯಾಗದಂತೆ ದಲಿತ ಸಂಘರ್ಷ ಸಮಿತಿ ಕಾಯ್ದುಕೊಂಡು ಬಂದಿದೆ. ಈಗಲಾದರೂ ಇಳಸೂರು ಬಳಿ ಕಂದಾಯ ಭೂಮಿಯನ್ನು ದಲಿತರಿಗೆ ನಿವೇಶನ ಕಟ್ಟಿಕೊಳ್ಳಲು ನೀಡಬೇಕೆಂದು ಕರಾದ ಸಂಸ ಜಿಲ್ಲಾ ಸಂಚಾಲಕ ಶಿವಾಜಿ ಬನವಾಸಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು. ತಿಂಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಜಿಲ್ಲಾಧಿಕಾರಿಗಳ ಕಡೆಯಿಂದ ಬಂದಿದೆ ಎಂದು ಕರಾದಸಂಸ ತಿಳಿಸಿತು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.