ಲಸಿಕೆ ಹಾಕುವ ಸ್ಥಳ ಬದಲಾವಣೆಗೆ ಆಗ್ರಹ

ಸರಕಾರಿ ಆಸ್ಪತ್ರೆ ಮುಂಭಾಗದಲ್ಲಿ ಹೆಚ್ಚಿದ ದಟ್ಟನೆ­ನಿರೋಗಿಗಳಿಗೂ ಸೋಂಕು ತಗುಲುವ ಆತಂಕ

Team Udayavani, Apr 30, 2021, 8:00 PM IST

hfuyt

ಶಿರಸಿ: ಇಲ್ಲಿನ ಸರಕಾರಿ ಪಂಡಿತ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್‌ ತಪಾಸಣೆ ಹಾಗೂ ಇನ್ನೊಂದು ಪಾರ್ಶ್ವದಲ್ಲಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವವರ ಕ್ಯೂ ಇದ್ದು, ಇದರಿಂದ ನಿರೋಗಿಗಳಿಗೂ ಸೋಂಕು ತಗುಲುವ ಆತಂಕ ನಿರ್ಮಾಣ ಆಗಿದೆ.

ಈ ಮೊದಲು ಕೋವಿಡ್‌ ತಾಪಸಣೆ ಮಾಡಿಸಿಕೊಳ್ಳುವವರ ಹಾಗೂ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಕೂಡ ಕಡಿಮೆ ಇತ್ತು. ಆದರೆ, ಈಗ ಸೋಂಕು ದ್ವಿಗುಣ ಆಗುತ್ತಿರುವುದರಿಂದ ತಪಾಸಣೆ ಹಾಗೂ ಲಸಿಕೆ ಹಾಕಿಸಿಕೊಳ್ಳುವರರ ಸಂಖ್ಯೆ ಅಧಿ ಕವಾಗುತ್ತಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೋವಿಡ್‌ ಲಸಿಕೆ ಹಾಕಲಾಗುತ್ತದೆ. ಎರಡನೇ ಅವಧಿಗೂ ಲಸಿಕೆ ಹಾಕಿಸಿಕೊಳ್ಳಲು ಬರುವವರೂ ಇದ್ದಾರೆ. ಇದರಿಂದ ಆಸ್ಪತ್ರೆ ಮುಂಭಾಗದಲ್ಲಿ ಸಹಜ ಒತ್ತಡ ನಿರ್ಮಾಣ ಆಗುತ್ತಿದೆ. ಸಹಜ ಒತ್ತಡದ ಕಾರಣದಿಂದ, ವಯಸ್ಸಾದವರೂ ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ಬರುವುದರಿಂದ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೂ ಕಠಿಣವಾಗುತ್ತಿದೆ. ಹಾಗಾಗಿ ಕೋವಿಡ್‌ ಸೋಂಕು ಹೆಚ್ಚೋ ಭೀತಿ ಉಂಟಾಗಿದೆ.

ಗುರುವಾರ ಕೂಡ ಸಾಕಷ್ಟು ಜನ ಸರತಿಯಲ್ಲಿ ನಿಂತು ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದು ಸಾಮಾಜಿಕ ಅಂತರ ಪಾಲನೆ ಆಗುತ್ತಿಲ್ಲ ಎಂಬ ಆಪಾದನೆ ಕೇಳಿ ಬಂದಿದೆ. ಈ ಮಧ್ಯೆ ಸರಕಾರಿ ಪಂಡಿತ್‌ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲೇ ಇರುವ ಸರಕಾರಿ ರಾಯಪ್ಪ ಹುಲೇಕಲ್‌ ಶಾಲೆಯನ್ನೂ ಬಳಸಿ ಲಸಿಕೆ ಹಾಕಬಹುದು ಎಂಬುದು ನಾಗರಿಕರ ಒತ್ತಾಯವಾಗಿದೆ. ಮೇ 1ರಿಂದ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಕೂಡ ದ್ವಿಗುಣ ಆಗುವುದರಿಂದ ಸಹಜ ಒತ್ತಡ ಕೂಡ ನಿರ್ಮಾಣ ಆಗಲಿದೆ. ಇದನ್ನು ತಪ್ಪಿಸಲು ತಾಲೂಕು ಆಡಳಿತ ತಾಲೂಕು ಆಸ್ಪತ್ರೆಯಲ್ಲಿನ ವ್ಯವಸ್ಥೆ ಬದಲಾಯಿಸಬೇಕು ಎಂದು ಆಗ್ರಹಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ಕೇಳಲು ತಾಲೂಕು ಆಸ್ಪತ್ರೆ ವೈದ್ಯಾಧಿ  ಕಾರಿ ಡಾ| ಗಜಾನನ ಭಟ್ಟ ಫೋನ್‌ ಸ್ವೀಕರಿಸಲಿಲ್ಲ. ನೋಟಿಸ್‌ ನೀಡಿದ್ದೇವೆ: ಶಿರಸಿ ಪಂಡಿತ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಕೋವಿಡ್‌ ಸೋಂಕಿತನ ತಲೆಯಿಂದ ರಕ್ತ ಸೋರುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ತಾಲೂಕು ದಂಡಾಧಿಕಾರಿ ಎಂ.ಆರ್‌. ಕುಲಕರ್ಣಿ ಆಸ್ಪತ್ರೆ ವೈದ್ಯಾಧಿಕಾರಿಗೆ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ. ಈ ವಿಷಯ ದೃಢಪಡಿಸಿದ ತಹಶೀಲ್ದಾರರು, ಆಸ್ಪತ್ರೆ ವೈದ್ಯಾಧಿ ಕಾರಿಗಳ ಪ್ರತಿಕ್ರಿಯೆ ಬಳಿಕ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ. ಮಂಜು ದ್ಯಾವ ಪಟಗಾರ ಎಂಬವರು ಮೃತರಾಗಿದ್ದು, ಅವರು ಕೋವಿಡ್‌ ಸೋಂಕಿತರಾಗಿದ್ದರು. ಆದರೆ, ಅವರ ಕಳೇಬರಹ ಸುಡುವ ವೇಳೆ ತಲೆಯಿಂದ ರಕ್ತ ಕಂಡು ಪಿಪಿಕಿಟ್‌ ತೆರೆದಾಗ ಗಾಯವಾಗಿದ್ದು ಕಂಡು ಬಂದ ವೀಡಿಯೋ ವೈರಲ್‌ ಆಗಿತ್ತು. ಆಸ್ಪತ್ರೆಯ ಮೂಲ ಬಾತರೂಮಿನಲ್ಲಿ ಕಾಲು ಜಾರಿ ಬಿದ್ದಿದ್ದರು ಅವರು ಎಂದು ಹೇಳಿಕೆ ನೀಡಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.