ಅಘನಾಶಿನಿ ನದಿಗೆ ಅಡ್ಡಗಟ್ಟಿದ ಮಣ್ಣು ತೆರವಿಗೆ ಮನವಿ


Team Udayavani, May 11, 2019, 3:41 PM IST

uk-tdy-3..

ಕುಮಟಾ: ವಿವಿಧ ಮೀನುಗಾರ ಹಾಗೂ ಮೀನುಗಾರಿಕೆ ಸಂಘಟನೆಗಳು ಉಪವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್ರಿಗೆ ಮನವಿ ಸಲ್ಲಿಸಿದರು.

ಕುಮಟಾ: ತಾಲೂಕಿನ ಐಗಳಕುರ್ವೆ ಸೇತುವೆ ನಿರ್ಮಾಣ ಕಾಮಗಾರಿಗಾಗಿ ಅಘನಾಶಿನಿ ನದಿಗೆ ಕೆಂಪುಮಣ್ಣು ತುಂಬಿ ತಡೆಕಟ್ಟಿರುವುದರಿಂದ ಮೀನುಗಾರಿಕೆಯಿಂದ ಜೀವನ ನಡೆಸುವವರಿಗೆ ಸಮಸ್ಯೆಯಾಗಿದೆ ಹಾಗೂ ನದಿಯ ಸಹಜ ಪ್ರಕೃತಿಗೆ ಅಪಾಯ ಎದುರಾಗಿದೆ ಎಂದು ತಾಲೂಕಿನ ವಿವಿಧ ಮೀನುಗಾರ ಸಂಘಟನೆಗಳು, ಬೋಟ್ ಹಾಗೂ ದೋಣಿ ಸಂಘಟನೆಗಳ ವತಿಯಿಂದ ಶುಕ್ರವಾರ ಉಪವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್ರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ ಅಘನಾಶಿನಿ ನದಿಯನ್ನೇ ನಂಬಿ ಬದುಕುವ 30 ಸಾವಿರಕ್ಕೂ ಹೆಚ್ಚು ಕುಟುಂಬಗಳಿವೆ. ಅಘನಾಶಿನಿ ಜೀವನದಿಯಾಗಿದ್ದು, ವಿಶಿಷ್ಟತೆ, ವಿಶೇಷತೆಗಳ ಆಗರವಾಗಿದೆ. ಇಂತಹ ನದಿಯನ್ನು ಅವೈಜ್ಞಾನಿಕ ಕಾಮಗಾರಿಯಿಂದ ಹಾಳುಗೆಡಹುವುದು ಹಾಗೂ ನದಿಯನ್ನೇ ನಂಬಿರುವ ಜನರ ಬದುಕಿಗೆ ಶಾಶ್ವತ ಬರೆ ಎಳೆಯುವುದು ಸರಿಯಲ್ಲ. ಅಘನಾಶಿನಿ ನದಿಯಲ್ಲಿ ಕೆಂಪುಮಣ್ಣು ಸುರಿದು ನೀರಿನ ಹರಿವಿಗೆ ಮಾತ್ರವಲ್ಲದೇ ದೋಣಿಗಳ ಸುಗಮ ಸಂಚಾರಕ್ಕೂ ಅಡ್ಡಿಪಡಿಸಿರುವುದು ತುರ್ತು ಸಮಸ್ಯೆ ಮಾತ್ರವಲ್ಲದೇ ಹಲವಾರು ದೂರಗಾಮಿ ಸಮಸ್ಯೆಗಳಿಗೂ ಕಾರಣವಾಗಲಿದೆ. ಈ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರೂ, ಪ್ರತಿಭಟನೆಗಳನ್ನು ಮಾಡಿದ್ದರೂ ಸಮಸ್ಯೆ ಬಗೆಹರಿಸುವ ಭರವಸೆ ಮಾತ್ರ ಈಡೇರಿಲ್ಲ. ದೋಣಿಗಳನ್ನು ಕ್ರೇನ್‌ ಮೂಲಕ ದಾಟಿಸುವ ವಿಧಾನವೂ ಸುರಕ್ಷಿತ ಹಾಗೂ ಸಮರ್ಪಕ ಕ್ರಮವಲ್ಲ.

ಆದ್ದರಿಂದ ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕೊಳ್ಳಲು ಮುಂದಾಗಲಿದ್ದೇವೆ. ಮೇ 14 ರೊಳಗೆ ಹೊಳೆಗೆ ಅಡ್ಡಗಟ್ಟಿದ ಮಣ್ಣು ತೆಗೆಯದೇ ಇದ್ದಲ್ಲಿ ಮೇ 15ರಂದು ಪಾತಿ ದೋಣಿಗಳ ಮೂಲಕ ಸೇತುವೆ ಕಾಮಗಾರಿಗಾಗಿ ಮಣ್ಣು ಸುರಿದ ಜಾಗಕ್ಕೆ ತೆರಳಿ ನಮಗೆ ಅವಶ್ಯಕ ಇರುವಷ್ಟು ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗುತ್ತೇವೆ. ನಮ್ಮ ಈ ಕಾರ್ಯವನ್ನು ತಡೆದರೆ ಅಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧರಿದ್ದೇವೆ. ಈ ಸಂದರ್ಭದಲ್ಲಿ ಉಂಟಾಗುವ ಅನಾಹುತಗಳಿಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೇ ಜವಾಬ್ದಾರರು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.

ಗಣೇಶ ಅಂಬಿಗ, ರಾಮಚಂದ್ರ ಅಂಬಿಗ, ಗೋಪಾಲ ಅಂಬಿಗ, ಸುಮಂತ್‌ ಅಂಬಿಗ, ನಾಡದೋಣಿ ಹಾಗೂ ಸದಾನಂದ ಹರಿಕಂತ್ರ, ಪರ್ಶಿನ್‌-ಟ್ರಾಲ್ ಇನ್ನಿತರ ಬೋಟ್ ಯೂನಿಯನ್‌ ಹಾಗೂ ಹರಿಕಂತ್ರ ಸಮಾಜ ಮತ್ತಿತರ ಸಂಘಟನೆಗಳಿಂದ ಗೋಪಾಲ ಹೊಸ್ಕಟ್ಟಾ, ಸುಧಾಕರ ತಾರಿ, ಸುರೇಶ ಹರಿಕಂತ್ರ ಹೊರಭಾಗ, ಉದಯ ಹರಿಕಂತ್ರ, ಜಗದೀಶ ಹರಿಕಂತ್ರ, ಉಸ್ಮಾನ್‌ ಸಾಬ್‌, ನಾಗಪ್ಪ ಹರಿಕಂತ್ರ, ವೀರಪ್ಪ ಹರಿಕಂತ್ರ ಇನ್ನಿತರರು ಮನವಿ ಸಲ್ಲಿಸುವ ನಿಯೋಗದಲ್ಲಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.