ದೇವತೆಗಳ ಪುನರ್ ಪ್ರತಿಷ್ಠಾಪನೆ
Team Udayavani, Apr 23, 2019, 3:02 PM IST
ಹೊನ್ನಾವರ: ತಾಲೂಕಿನ ಕೆಳಗಿನ ಇಡಗುಂಜಿ, ಮಾಳ್ಕೋಡ ಕುಮಾರರಾಮ, ಜೈನ ಜಟಗೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ ಏ.23 ರಿಂದ 25ರ ವರೆಗೆ ನಡೆಯಲಿದೆ. ಹಾಗೂ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಮಠಾಧಿಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಪುರಾತನ ಕಾಲದಿಂದಲೂ ಪ್ರಸಿದ್ಧವಾದ ದೇವಾಲಯವನ್ನು ವಾಸ್ತು ಪ್ರಕಾರ ನಿರ್ಮಿಸಲಾಗಿದೆ. ಶಿಲಾಮಯ ವಾಸ್ತು ಇರುವ ನೂತನ ದೇವಾಲಯವನ್ನು ವೇ. ಜಯರಾಮ ಅಡಿಗಳ ಅಧ್ವರ್ಯದಲ್ಲಿ ಏ.23 ರಿಂದ 25ರ ವರೆಗೆ ನೆರವೇರಿಸಲಾಗುತ್ತಿದೆ. ಏ.24 ರಂದು ಕ್ಷೇತ್ರಪಾಲ, ಜಟಗೇಶ್ವರ, ಚೌಡೇಶ್ವರಿ, ಬೀರ, ಬಾಲರಾಮ. ಕಾಳರಾಮ, ಯಕ್ಷಿ, ನಾಗ, ಕಾಳು ದೇವತೆಗಳ ಪುನರ್ ಪ್ರತಿಷ್ಠಾಪನಾ ಹಾಗೂ ಶಿಖರ ಪ್ರತಿಷ್ಠೆ, ತತ್ವನ್ಯಾಸ ಪ್ರತಿಷ್ಠಾ ಹವನ, ಶಕ್ತಿ-ತತ್ವ ಕಲಾ ಪ್ರಾಣ ಪ್ರತಿಷ್ಠಾ ನಿರೀಕ್ಷೆ ಇತ್ಯಾದಿ ನಡೆಯಲಿದೆ.
ಏ.25 ರಂದು ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವ್ವಾಮೀಜಿ ಪುರ ಪ್ರವೇಶ, ಪೂರ್ಣಾಹುತಿ, ಮಹಾಮಂಗಳಾರತಿ, ಸಾಮೂಹಿಕ ಸತ್ಯನಾರಾಯಣ ಕಲಶ ಪೂಜೆ, ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವ್ವಾಮೀಜಿಗಳ ಪಾದಪೂಜೆಯೊಂದಿಗೆ ಗುರುವಂದನಾ ಕಾರ್ಯಕ್ರಮ. ಗುರುಗಳ ಆಶೀರ್ವಚನ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 7ರಿಂದ ಮಕ್ಕಳ ಮನರಂಜನಾ ಕಾರ್ಯಕ್ರಮ, ರಾತ್ರಿ 9ರಿಂದ ಯಕ್ಷಗಾನ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಪ್ರತಿದಿನವೂ ಆಗಮಿಸಿ ತನು-ಮನ-ಧನಗಳಿಂದ ಸಹಾಯ ಸಹಕಾರ ನೀಡಿ ದೇವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗಬೇಕಾಗಿ ಸಮಿತಿ ವಿನಂತಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು