ಕಂದಾಯ ನಿರೀಕ್ಷಕರ ಕಚೇರಿ ಸ್ಥಳಾಂತರಿಸದಿರಲು ಮನವಿ
Team Udayavani, Nov 12, 2021, 2:10 PM IST
ಭಟ್ಕಳ: ಇಲ್ಲಿನ ಸೂಸಗಡಿಯ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರ ಕಚೇರಿಯನ್ನು ಈಗಿರುವ ಪುರಸಭೆ ಕಟ್ಟಡದ ಪಕ್ಕದ ಕಚೇರಿಯಲ್ಲೇ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಇದನ್ನು ಇಲ್ಲಿಂದ ಬೇರೆ ಕಡೆ ಸ್ಥಳಾಂತರಿಸಬಾರದು ಎಂದು ಕ್ರಿಯಾಶೀಲ ಗೆಳೆಯರ ಬಳಗದಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಪಟ್ಟಣದ ಸೂಸಗಡಿಯ ಕಂದಾಯ ನಿರೀಕ್ಷಕರ ಕಛೇರಿಯು ಪಟ್ಟಣದ ಭಾಗದ ಎಲ್ಲರಿಗೂ ಅನುಕೂಲವಾಗುವಂತಹ ಸ್ಥಳವಾದ ಪುರಸಭೆ ಕಛೇರಿಯ ಪಕ್ಕದಲ್ಲಿದೆ. ಇದರಿಂದ ಪಟ್ಟಣ ಭಾಗದ ಸುತ್ತಲಿನ ಎಲ್ಲರಿಗೂ ಸರಳವಾಗಿ ಕಛೇರಿಯನ್ನು ತಲುಪಲು ಹಾಗೂ ಎಲ್ಲರಿಗೂ ಅನುಕೂಲವಾಗುವಂತೆ ಹತ್ತಿರದಲ್ಲಿರುವುದರಿಂದ ಅತೀ ಹೆಚ್ಚು ಜನರು ಸಮಯಕ್ಕೆ ಸರಿಯಾಗಿ ತಮ್ಮ ಸೇವೆಯನ್ನು ಪಡೆಯುತ್ತಿದ್ದಾರೆ. ಈಗಿರುವ ಕಛೇರಿಯನ್ನು ಜನರಿಗೆ ಓಡಾಡಲು ಅನಾನೂಕೂಲವಾಗುವಂತಹ ಅಂಜುಮಾನ್ ಕಾಲೇಜಿಗೆ ಹೋಗುವ ದಾರಿಯಲ್ಲಿರುವ ಹಳೆ ಎ ಸಿ ಕಛೇರಿಗೆ ಸ್ಥಳಾಂತರಿಸಲು ಒತ್ತಡ ಬಂದಿರುವುದಾಗಿ ಗೊತ್ತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕಂದಾಯ ನಿರೀಕ್ಷಕರ ಕಚೇರಿಯನ್ನು ಈಗಿರುವ ಸ್ಥಳದಲ್ಲೇ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಈ ಕಚೇರಿಯನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಲಾಗಿದೆ.
ಇದನ್ನೂ ಓದಿ: ಪಾರ್ಕ್ನಲ್ಲಿ ಧರೆಗುರುಳಿದ ಬೃಹತ್ ಮರಗಳು: ಕಾರ್ಗಳು ಸಂಪೂರ್ಣ ಜಖಂ
ಮನವಿ ಸ್ವೀಕರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಅವರು ಪರಿಶೀಲಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕ್ರಿಯಾಶೀಲ ಗೆಳೆಯರ ಬಳಗದ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಪ್ರಮುಖರಾದ ವೆಂಕಟೇಶ ನಾಯ್ಕ, ಪಾಂಡುರಂಗ ನಾಯ್ಕ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ