ಬತ್ತುತ್ತಿದೆ ಗಂಗಾವಳಿ ನದಿ; ಗೋಕರ್ಣ-ಕುಮಟಾಕ್ಕೆ ಹೆಚ್ಚುತ್ತಿದೆ ಜಲಕ್ಷಾಮ ಭೀತಿ…


Team Udayavani, Mar 30, 2024, 5:37 PM IST

ಬತ್ತುತ್ತಿದೆ ಗಂಗಾವಳಿ ನದಿ; ಹೆಚ್ಚುತ್ತಿದೆ ಜಲಕ್ಷಾಮ ಭೀತಿ

ಉದಯವಾಣಿ ಸಮಾಚಾರ
ಗೋಕರ್ಣ: ದಿನೇ ದಿನೇ ಬಿಸಿಲು ಹೆಚ್ಚುತ್ತಿದ್ದು ನದಿಗಳಲ್ಲೂ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ. ಇಲ್ಲಿಯ
ಗಂಗಾವಳಿ ನದಿಯಿಂದ (ಮರಾಕಲ್‌ ಯೋಜನೆ) ಗೋಕರ್ಣದ ಹಲವು ಗ್ರಾಮ ಪಂಚಾಯತ್ ಹಾಗೂ ಕುಮಟಾಕ್ಕೆ ನೀರು ಪೂರೈಕೆಯಾಗುತ್ತಿದ್ದು ಈಗ ಗಂಗಾವಳಿ ನದಿ ನೀರಿನ ಮಟ್ಟ ಅಧಿಕ ಪ್ರಮಾಣದಲ್ಲಿ ತಗ್ಗಿದ್ದರಿಂದಾಗಿ ನೀರು ಪೂರೈಕೆ ಕಷ್ಟವಾಗಿದೆ. ಹೀಗಾಗಿ ಸಹಜವಾಗಿಯೇ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ತಲೆದೋರಿದೆ.

ಮರಾಕಲ್‌ ಯೋಜನೆ ಮೂಲಕ ಗೋಕರ್ಣ, ಹನೇಹಳ್ಳಿ, ನಾಡುಮಾಸ್ಕೇರಿ, ತೊರ್ಕೆ, ಸಗಡಗೇರಿ ಗ್ರಾ.ಪಂ.ವ್ಯಾಪ್ತಿಯ ಮನೆ ಮನೆಗಳಿಗೆ ನಲ್ಲಿ ನಿರ್ಮಿಸಲಾಗಿದ್ದು, ಇಲ್ಲಿ ನೀರು ಹರಿಸುವುದರ ಜತೆಗೆ ಕುಮಟಾಕ್ಕೂ ಇಲ್ಲಿಂದಲೇ ನೀರು ಪೂರೈಸಲಾಗುತ್ತಿತ್ತು . ಆದರೆ ಗಂಗಾವಳಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಕಡಿಮೆಯಾಗಿದ್ದು ಜಲಕ್ಷಾಮ ಆವರಿಸಿದೆ.

ಒಂದೆಡೆ ನೀರು ಸರಿಯಾಗಿ ಸರಬರಾಜು ಮಾಡಲಾಗುತ್ತಿಲ್ಲ. ಮತ್ತೊಂದೆಡೆ ನೀರು ಹರಿಸಲು ಅಳವಡಿಸಲಾದ ಪೈಪ್‌
ಗಳು ಕೂಡ ಒಡೆದು ನೀರು ಸೋರಿಕೆಯಾಗುತ್ತಿದೆ. ಸಾವಿರಾರು ಮನೆಗಳಿಗೆ ಈ ಯೋಜನೆ ಮೂಲಕ ನೀರನ್ನು ಸಾಗಿಸಲಾಗುತ್ತಿದೆ. ಆದರೆ ಅವಧಿಗೂ ಮುನ್ನವೇ ನೀರಿನ ಕ್ಷಾಮ ಉಂಟಾಗಿದ್ದರಿಂದ ಜನ ಆತಂಕಗೊಂಡಿದ್ದಾರೆ.ಏಪ್ರಿಲ್‌, ಮೇ ತಿಂಗಳಲ್ಲಿ ಕುಡಿಯುವ ನೀರಿಗಾಗಿ ಹರಸಾಹಸ ಪಡಬೇಕಾದ ದಿನ ದೂರ ಇಲ್ಲ ಎಂಬ ಸ್ಥಿತಿ ಉಂಟಾಗಿದೆ.

ಅಕ್ರಮ ಬಂಡ್‌-ಪಂಪ್‌: ಗಂಗಾವಳಿ ನದಿ ನೀರು ಒಂದೆಡೆ ತೀವ್ರ ಕೆಳಮಟ್ಟಕ್ಕೆ ಕುಸಿದಿದ್ದರೆ, ನದಿ ನೀರನ್ನು ಆಶ್ರಯಿಸಿ ತೋಟ ಗದ್ದೆ ಮಾಡಿದವರು ಅನಿವಾರ್ಯವಾಗಿ ಉಸುಕಿನ ಚೀಲ ಹಾಕಿ ಬಂಡ್‌ ನಿರ್ಮಿಸಿ ನೀರನ್ನು ಹಳ್ಳದಲ್ಲಿಯೇ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಇನ್ನು ಕೆಲವೆಡೆ ಅನಧಿಕೃತವಾಗಿ ಪಂಪ್‌ಗಳನ್ನು ನದಿಗೆ ಅಳವಡಿಸಿ ನೀರನ್ನು ಮೇಲೆತ್ತಲಾಗುತ್ತಿದ್ದು ನದಿ ಒಡಲು ಬರಿದಾಗುತ್ತಿದೆ.

ಇಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸ್ಥಳೀಯರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರ ಶಿವರಾಮ ನಾಯ್ಕ ಅವರ ಗಮನಕ್ಕೆ ತಂದಿದ್ದು, ಅವರು ಕೂಡ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನೀರಿನ ಕೊರತೆ ಎಲ್ಲೆಡೆ ಕಂಡುಬರುತ್ತಿದ್ದು, ಗಂಗಾವಳಿ ನದಿಯನ್ನೇ ನಂಬಿ ತೋಟ ಮಾಡಿದವರ ಪರಿಸ್ಥಿತಿ ನಿಜಕ್ಕೂ ದುಸ್ತರವಾಗಿದೆ.

ಗಂಗಾವಳಿ ನದಿ ಬತ್ತುತ್ತಿರುವುದರಿಂದ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯವಾಗುತ್ತಿದೆ. ಅಲ್ಲದೇ ಅಳಿದುಳಿದ ನೀರನ್ನು ತಡೆದು ಉಸುಕಿನ ಚೀಲ ಮತ್ತು ಅಳವಡಿಸಲಾದ ಪಂಪ್‌ ಅನ್ನು ತೆರವುಗೊಳಿಸಲು ಈಗಾಗಲೇ ಸಂಬಂಧಪಟ್ಟ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಲಾಗಿದೆ.
*ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ ಕಾರವಾರ

*ನಾಗರಾಜ ಎಂ.

ಟಾಪ್ ನ್ಯೂಸ್

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.