Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
ಅಪಘಾತದ ರಭಸಕ್ಕೆ ಹೊತ್ತಿ ಉರಿದ ದ್ವಿಚಕ್ರ ವಾಹನ
Team Udayavani, May 10, 2024, 6:05 PM IST
ದಾಂಡೇಲಿ : ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರು ಮತ್ತು ಹಳಿಯಾಳದಿಂದ ದಾಂಡೇಲಿಗೆ ಬರುತ್ತಿದ್ದ ದ್ವಿಚಕ್ರ ವಾಹನವೊಂದು ದಾಂಡೇಲಿ ತಾಲೂಕಿನ ಕರ್ಕಾ ಆಲೂರು ಮಧ್ಯ ಪರಸ್ಪರ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹಳಿಯಾಳ ತಾಲೂಕಿನ ಮದ್ನಳ್ಳಿ ದುಸಗಿ ನಿವಾಸಿ 28 ವರ್ಷ ವಯಸ್ಸಿನ ಸುನೀಲ್ ಬೋಕ್ನೆಕರ್ ಎಂಬತಾನೇ ಗಂಭೀರ ಗಾಯಗೊಂಡ ದ್ವಿಚಕ್ರವಾಹನ ಸವಾರನಾಗಿದ್ದಾನೆ.
ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುತ್ತಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸವಾರ ಸುನೀಲ್ ಬೋಕ್ನೆಕರ್ ಈತನಿಗೆ ಗಂಭೀರ ಗಾಯವಾಗಿದೆ.
ಈ ಅಪಘಾತದಿಂದಾಗಿ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಹೋಗಿದೆ.
ಗಂಭೀರ ಗಾಯಗೊಂಡ ಸುನೀಲ್ ಬೋಕ್ನೆಕರ್ ಈತನನ್ನು ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.