ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ: ಶಾಸಕಿ ರೂಪಾಲಿ ನಾಯ್ಕ


Team Udayavani, Mar 28, 2023, 9:45 PM IST

ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ: ಶಾಸಕಿ ರೂಪಾಲಿ ನಾಯ್ಕ

ಕಾರವಾರ: ಭವಿಷ್ಯದಲ್ಲಿ ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ನಗರೋತ್ಥಾನ 3 ಹಾಗೂ 4 ಹಂತ ಮತ್ತು ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಮಂಗಳವಾರ ರಾತ್ರಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೆಎಚ್‌ಬಿ ಕಾಲೋನಿಯ ಎಲ್ಲಾ ರಸ್ತೆಗಳ ನಿರ್ಮಾಣಕ್ಕೆ 1.50 ಕೋಟಿ ಅನುದಾನವನ್ನು ಒದಗಿಸಲಾಗಿದೆ. ಈ ಮೂಲಕ ಎಲ್ಲ ರಸ್ತೆ ಚರಂಡಿಗಳು ನಿರ್ಮಾಣವಾಗಲಿದೆ. ಮಳೆಗಾಲದ ಸಂದರ್ಭದಲ್ಲಿ ಕೆಎಚ್‌ಬಿ ಕಾಲೋನಿಯಲ್ಲಿ ರಸ್ತೆಯ ಮೇಲೆ ನೀರು ನಿಂತಿರುತ್ತಿತ್ತು. ಈಗ ಚರಂಡಿ ನಿರ್ಮಾಣಕ್ಕೆ ಮೊದಲು ಆದ್ಯತೆ ನೀಡಲಾಗುತ್ತಿದ್ದು, ರಸ್ತೆಯೂ ಸಹ ನಿರ್ಮಾಣ ಮಾಡಲಾಗುವುದು ಎಂದರು.

ಕೆಎಚ್‌ಬಿ ಅವರೇ ರಸ್ತೆ ಹಾಗೂ ಚರಂಡಿಯ ನಿರ್ವಹಣೆಯನ್ನು ಮಾಡಬೇಕು. ಅದಕ್ಕೆ ನಾವು ಅನುದಾನವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಆದರೆ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿ ಕೆಎಚ್‌ಬಿ ರಸ್ತೆ ಚರಂಡಿ ನಿರ್ಮಾಣಕ್ಕೆ ನೇರವಾಗಿ ಅನುದಾನ ಒದಗಿಸುವಂತೆ ವಿನಂತಿಸಿಕೊಂಡಾಗ ಅನುದಾನವನ್ನು ನೀಡಿದ್ದಾರೆ ಎಂದು ಹೇಳಿದರು.

ನಮ್ಮ ಜನರು ತುಂಬಾ ಕಷ್ಟ ಅನುಭವಿಸುತ್ತಿದ್ದರು. ಮುಂದಿನ ದಿನದಲ್ಲಿ ಅವೆಲ್ಲವೂ ನಿವಾರಣೆಯಾಗಲಿದೆ. ನಿಮ್ಮೊಂದಿನೆ ನಾನು ಸದಾ ಇರುತ್ತೇನೆ.ನಗರದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಇಲ್ಲದೆ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದರು. ಮಳೆಗಾಲದಲ್ಲಿ ಚರಂಡಿ ಇಲ್ಲದೆ ರಸ್ತೆಯ ಮೇಲೆ ನೀರು ಹರಿದು ಹೋಗುತ್ತಿತ್ತು. ಅದಕ್ಕಾಗಿ ಅವೆಲ್ಲ ಸಮಸ್ಯೆಗಳನ್ನು ಕಂಡು ಎಲ್ಲ ವಾರ್ಡ್‌ಗಳಿಗೆ ರಸ್ತೆ ನಿರ್ಮಾಣಕ್ಕೆ ಅನುದಾನವನ್ನು ಹಂಚಿಕೆ ಮಾಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹದಗೆಟ್ಟ ರಸ್ತೆಗಳ ಸುಧಾರಣೆಗೂ ಅನುದಾನ ಒದಗಿಸಲಾಗಿದೆ.

ಮುಂದಿನ ದಿನದಲ್ಲಿ ರಸ್ತೆಗಳು ನಿರ್ಮಾಣವಾಗಲಿವೆ. ಚರಂಡಿಗಳು ನಿರ್ಮಾಣವಾಗಲಿವೆ. ಕಾರವಾರ ನಗರ ಮುಂದಿನ ದಿನದಲ್ಲಿ ಇನ್ನೂ ಬೃಹತ್ತಾಗಿ ಬೆಳೆಯಲಿದೆ. ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದರು.

ಈ ಸಂದರ್ಭದಲ್ಲಿ, ಕಾರವಾರ ನಗರಸಭೆ ಅಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಮುಖಂಡರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: 55 ಯೋಜನೆಗಳ 3451.24 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ

ಟಾಪ್ ನ್ಯೂಸ್

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.