ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ನಾಂದಿ ಹಾಡಿದ ರೂಪಾಲಿ


Team Udayavani, Jul 3, 2022, 12:00 PM IST

ad – ankola 2

ಸಂಕಟದಲ್ಲಿ ಸಿಲುಕಿದವರಿಗೆ ಆಪದ್ಬಾಂಧವರು, ಸಂತ್ರಸ್ತರು-ಹಸಿದವರಿಗೆ ಅನ್ನಪೂರ್ಣೆ, ದೀನ-ದಲಿತರಿಗೆ ಅಭಯ ನೀಡುವ ತಾಯಿ, ಬಡವರು-ನೊಂದವರಿಗೆ ಮಹಾಮಾತೆಯಾಗಿದ್ದಾರೆ ಕಾರವಾರ-ಅಂಕೋಲಾ ವಿಧಾನಸಭೆ ಕ್ಷೇತ್ರದ ಸದಸ್ಯೆ ರೂಪಾಲಿ ನಾಯ್ಕ.

ಕಾರವಾರ ಕ್ಷೇತ್ರದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿ ಕೊಟ್ಟ ನಾಯಕಿ ರೂಪಾಲಿ ನಾಯ್ಕ. ಸಮಾಜ ಅಭಿವೃದ್ಧಿ ಹಾಗೂ ಪಕ್ಷದ ಬೆಳವಣಿಗೆಗೆ ದಣಿವರಿಯದೆ ದುಡಿಯುತ್ತಿದ್ದಾರೆ.

ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡಿರುವ ರೂಪಾಲಿ ನಾಯ್ಕ ಪಕ್ಷ ನೀಡುವ ಯಾವುದೆ ಜವಾಬ್ದಾರಿ ಇರಲಿ ಅಚ್ಚುಕಟ್ಟುತನದಿಂದ ನಿರ್ವಹಿಸುತ್ತಾರೆ. ಶಾಸಕರಾಗಿ ಆಯ್ಕೆಯಾದ ನಾಲ್ಕು ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ದುಡಿದಿದ್ದಾರೆ. ಸುಮಾರು 800 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ತಂದಿದ್ದಾರೆ. ರಸ್ತೆ, ಸೇತುವೆ, ಕಟ್ಟಡ ಹೀಗೆ ಅಭಿವೃದ್ಧಿ ವೇಗವಾಗಿ ನಡೆಯುತ್ತಿದೆ.

ಕೋವಿಡ್‌-19 ಕಾಯಿಲೆ ದಾಳಿ ಇಟ್ಟು ಲಾಕ್‌ಡೌನ್‌ ಆದಾಗ ಶಾಸಕಿ ರೂಪಾಲಿ ನಾಯ್ಕ ಜನತೆಯ ಸಂಕಷ್ಟಕ್ಕೆ ಓಗೊಟ್ಟರು. ಸ್ವಂತ ಖರ್ಚಿನಲ್ಲಿ 30 ಸಾವಿರಕ್ಕೂ ಹೆಚ್ಚು ಕುಟುಂಬಕ್ಕೆ ಆಹಾರ ಸಾಮಗ್ರಿ ಕಿಟ್‌ಗಳನ್ನು ವಿತರಿಸಿದರು. ಹಳ್ಳಿ ಹಳ್ಳಿಗೆ ಹೋಗಿ ಜನರ ಅಹವಾಲಿಗೆ ಸ್ಪಂದಿಸಿದರು,ನೆರವು ನೀಡಿದರು. ಜನತೆಯ ಆರೋಗ್ಯದ ಬಗ್ಗೆ ಅಪಾರ ಕಾಳಜಿ ವಹಿಸಿದ ಅವರು, ಲಾಕ್‌ಡೌನ್‌ ನಿಯಮ ಪಾಲಿಸುವಂತೆ, ಮನೆಯಿಂದ ಹೊರಗೆ ಬರದಂತೆ ಜನರ ಮನವೊಲಿಸಿದರು. ಸರ್ಕಾರದಿಂದ ದೊರೆಯಬೇಕಾದ ನೆರವು ಕೊಡಿಸಿದರು.

ಇನ್ನೊಂದೆಡೆ ಪ್ರವಾಹದಿಂದ ಕೆಟ್ಟು ಹೋದ ರಸ್ತೆಗಳ ನವೀಕರಣ, ನೀರು ಪಾಲಾದ ಸೇತುವೆಗಳ ಪುನರ್‌ ನಿರ್ಮಾಣ, ಕಟ್ಟಡಗಳ ನಿರ್ಮಾಣ ಹೀಗೆ ನೂರಾರು ಕೋಟಿ ರೂ.ಗಳ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶಾಸಕರಾಗಿ ಆಯ್ಕೆಗೊಂಡ ಕೆಲವೇ ಸಮಯದಲ್ಲಿ ಹಿಂದೆ ಕಂಡರಿಯದ ಪ್ರವಾಹ ಬಂತು. ಕಾರವಾರ ಅಂಕೋಲಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಕಾಳಿ, ಗಂಗಾವಳಿ ನದಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಜನತೆ ನಿರಾಶ್ರಿತರಾದರು. ಮನೆಗಳು ಉರುಳಿದವು. ಆದರೆ ಶಾಸಕಿ ರೂಪಾಲಿ ನಾಯ್ಕ ಹಗಲು ರಾತ್ರಿಯೆನ್ನದೆ ಪ್ರವಾಹ ಪೀಡಿತರ ನೆರವಿಗೆ ಧಾವಿಸಿದರು. 20 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಧಾನ್ಯ, ಅಗತ್ಯ ವಸ್ತುಗಳ ಕಿಟ್‌ ವಿತರಿಸುವ ಮೂಲಕ ಅವರ ಬದುಕಲ್ಲಿ ಭರವಸೆ ತುಂಬಿದರು.

ಅರಬ್ಬಿ ಸಮುದ್ರದಲ್ಲಿನ ಕೂರ್ಮಗಡ ದ್ವೀಪದ ನರಸಿಂಹ ದೇವರ ಜಾತ್ರೆಯಂದು ನಡೆದ ದುರಂತದಲ್ಲಿ ನೀರು ಪಾಲಾಗುತ್ತಿದ್ದವರನ್ನು ಶಾಸಕರು ಸ್ವತಃ ರಕ್ಷಿಸಿದರು. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಹೀಗೆ ಯಾವುದೆ ಸಮಸ್ಯೆ ಇರಲಿ, ಅವಘಡ ಇರಲಿ ಶಾಸಕಿ ರೂಪಾಲಿ ನಾಯ್ಕ ಧೈರ್ಯದಿಂದ ಎದುರಿಸುತ್ತಾರೆ. ಕಾರವಾರ-ಅಂಕೋಲಾ ತಾಲೂಕಿನಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ್ದಾರೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.