ಪಾಳು ಬಿದ್ದ ಸರ್ಕಾರಿ ಇಲಾಖೆ ಕಟ್ಟಡಗಳು
Team Udayavani, Jun 26, 2019, 11:48 AM IST
ಕುಮಟಾ: ಸರ್ಕಾರದಿಂದ ವಿವಿಧ ಇಲಾಖೆಗಳು ಯಾವುದೋ ಬಳಕೆಗಾಗಿ ಕಟ್ಟಿದ ಕಟ್ಟಡಗಳು ಹಳೆತಾಗಿ ಶಿಥಿಲವಾದಾಗ ದುರಸ್ತಿ ಮಾಡಿ ಮರುಬಳಕೆ ಮಾಡಬೇಕು ಅಥವಾ ಕೆಡವಿ ಸ್ವಚ್ಛಗೊಳಿಸಬೇಕು. ಇವೆರಡನ್ನೂ ಮಾಡದಿದ್ದರೆ ಹೇಗೆ ಅಸಹ್ಯಕರ ಪರಿಸರ ಸೃಷ್ಟಿಗೆ ಕಾರಣವಾಗುತ್ತದೆ ಎನ್ನವುದಕ್ಕೆ ಇಲ್ಲಿನ ಮಿಷನರಿ ಕಾಲನಿಯಲ್ಲಿರುವ ಕೃಷಿ ಇಲಾಖೆ ವಸತಿ ಕಟ್ಟಡಗಳು ಸಾಕ್ಷಿಯಾಗಿವೆ.
ಒಂದು ಕಾಲದಲ್ಲಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಯೋಗಕ್ಕಾಗಿ ಕಟ್ಟಿದ ವಸತಿ ಕಟ್ಟಡಗಳು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಪಾಳುಬಿದ್ದಿದ್ದರೂ ಸಂಬಂಧಪಟ್ಟ ಇಲಾಖೆಗೆ ಏನೂ ಮಾಡಲಾಗುತ್ತಿಲ್ಲ. ಸ್ಥಳೀಯ ಅತುಲ್ ಕಾಮತ್ ಎಂಬವರು ಮೂರ್ನಾಲ್ಕು ವರ್ಷದ ಹಿಂದೆಯೇ ಈ ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಅಕ್ರಮ ಹಾಗೂ ಅನೈತಿಕ ಚಟುವಟಿಕೆ ನಡೆಯುವದನ್ನು ತಡೆಗಟ್ಟಿ ಎಂದು ಕೃಷಿ ಅಧಿಕಾರಿಗಳಿಗೆ ಮನವಿಯನ್ನೂ ಮಾಡಿದ್ದರು. ಪತ್ರಿಕೆಗಳಲ್ಲೂ ಈ ಬಗ್ಗೆ ಸಾಕಷ್ಟು ಬಾರಿ ವರದಿಯಾಗಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ.
ಇಲ್ಲಿನ ವಸತಿ ಕಟ್ಟಡಗಳನ್ನು ಕೃಷಿ ಇಲಾಖೆ ಕಟ್ಟಿ ಬಳಸಿದ್ದರೂ, ಅಸಲು ಈ ಜಾಗ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ. ಈ ಬಾರಿ ಅರಣ್ಯ ಇಲಾಖೆ ಗಿಡಗಳನ್ನು ನೆಟ್ಟು ಬೇಲಿಯನ್ನೂ ಹಾಕಿದೆ. ಆದರೆ ಸ್ವಲ್ಪ ನಿರ್ಜನ ಪ್ರದೇಶದಲ್ಲಿರುವ ಈ ವಸತಿ ಕಟ್ಟಡಗಳು ಮಾತ್ರ ಎಲ್ಲ ಬಗೆಯ ಕೆಟ್ಟ ಚಟುವಟಿಕೆಗೆ ಮುಕ್ತವಾಗೇ ಉಳಿದಿದೆ. ಕೃಷಿ ಸಹಾಯಕ ನಿರ್ದೇಶಕ ಶಂಕರ ಹೆಗಡೆ ಪ್ರತಿಕ್ರಿಯಿಸಿ, ವಸತಿ ಕಟ್ಟಡಗಳು ದುರಸ್ತಿಗೂ ಬಾರದ ಸ್ಥಿತಿಯಲ್ಲಿದೆ. ಇಲಾಖೆಗೆ ಈ ವಸತಿ ಕಟ್ಟಡಗಳ ಅಗತ್ಯವೂ ಅಷ್ಟಕ್ಕಷ್ಟೇ. ಹೀಗಾಗಿ ಮೇಲಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಿದರೆ ಕಟ್ಟಡ ಕೆಡವಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಮಾತ್ರವಲ್ಲದೇ ತಾಲೂಕಿನಲ್ಲಿ ಹಲವೆಡೆ ಆರೋಗ್ಯ, ಅರಣ್ಯ ಮತ್ತಿತರ ವಿವಿಧ ಇಲಾಖೆಗಳ ಶಿಥಿಲ ಕಟ್ಟಡಗಳು ಯಥಾಸ್ಥಿತಿಯಲ್ಲಿ ಕಳೇಬರಗಳಂತೆ ನಿಂತಿವೆ. ಆದರೆ ಕಟ್ಟಡ ದುರಸ್ತಿಗೂ ಬಾರದ, ನಿಷ್ಪ್ರಯೋಜಕ ಕಟ್ಟಡಗಳನ್ನು ಕೆಡವಿ ಪರಿಸರ ಸ್ವಚ್ಛಗೊಳಿಸುವ ಪ್ರಯತ್ನ ಮಾತ್ರ ನಡೆಯುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ