ನಿಯಮ ಉಲ್ಲಂಘನೆ: ವ್ಯಾಪಾರಿ ತರಾಟೆಗೆ
Team Udayavani, Apr 29, 2020, 7:08 PM IST
ಸಾಂದರ್ಭಿಕ ಚಿತ್ರ
ಅಂಕೋಲಾ: ಲಾಕ್ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಸರಕಾರ ಅನುವು ಮಾಡಿರುವ ಸಂದರ್ಭದಲ್ಲಿ ಪಟ್ಟಣದ ಕೆಲವು ಬಟ್ಟೆ ಅಂಗಡಿಗಳು ಬಾಗಿಲು ತೆರೆದು ವ್ಯಾಪಾರ ನಡೆಸುತ್ತದ್ದ ವೇಳೆ ಪುರಸಭೆ ಮುಖ್ಯಾಧಿಕಾರಿ ಬಿ.ಪ್ರಹ್ಲಾದ ದಾಳಿ ನಡೆಸಿ ಅಂಗಡಿ ಮಾಲೀಕರನ್ನು ತರಾಟೆಗೆ ತೆಗದುಕೊಂಡು ಅಂಗಡಿ ಬಂದ್ ಮಾಡಿಸಿದ್ದಾರೆ.
ಲಾಕ್ಡೌನ್ ಇದ್ದರೂ ಪಟ್ಟಣದಲ್ಲಿ ಅಗತ್ಯ ವಸ್ತು ಪೂರೈಕೆ ಮಾಡುವ ಹೊರತು ಇನ್ನಿತರ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಕದ್ದುಮುಚ್ಚಿ ನಡೆಯುತ್ತಿತ್ತು. ಈ ಕುರಿತು ಮಾಹಿತಿಯನ್ನು ಪಡೆದುಕೊಂಡಿರುವ ಅಂಕೋಲಾ ಪುರಸಭೆ ಮುಖ್ಯಾಧಿಕಾರಿ ಬಿ.ಪ್ರಹ್ಲಾದ ಮಂಗಳವಾರ ಪಟ್ಟಣದಲ್ಲಿ ಅಂತಹ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ಕೆಲವು ಬಟ್ಟೆ ಅಂಗಡಿಯವರು ಗ್ರಾಹಕರನ್ನು ಒಳಗಡೆ ಕರೆದುಕೊಂಡು ಬಾಗಿಲು ಬಂದ್ ಮಾಡಿ ವ್ಯಾಪಾರ ನಡೆಸುತ್ತಿರುವುದು ಈ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಅಂತಹ ಅಂಗಡಿ ಮಾಲೀಕರನ್ನು ತರಾಟೆ ತೆಗೆದುಕೊಂಡಿದ್ದರಲ್ಲದೆ. ಮತ್ತೂಮ್ಮೆ ಹೀಗೆ ಮಾಡಿದರೆ ಅಂಗಡಿಯನ್ನು ಸೀಜ್ ಮಾಡಲಾಗುವುದು ಎಂದು ತಿಳಸಿದ್ದಾರೆ.
ಪಟ್ಟಣದ ವ್ಯಾಪ್ತಿಯಲ್ಲಿ ಹಾರ್ಡ್ ವೇರ್ ಮತ್ತು ಅಗತ್ಯ ವಸ್ತುಗಳ ಪೂರೈಕೆ ಮಾಡುವ ಅಂಗಡಿಗಳಿಗೆ ಮಾತ್ರ ಅವಕಾಶ ಇರುತ್ತದೆ. ಹೊಟೇಲ್ಗಳಲ್ಲಿ ಪಾರ್ಸಲ್ ವ್ಯವಸ್ಥೆಗೆ ಅನುವು ಮಾಡಲಾಗಿದೆ. ಇದಲ್ಲದೆ ಕಾಸ್ಮೆಟಿಕ್, ಬಟ್ಟೆ, ಇನ್ನಿತರ ಅಂಗಡಿಗಳು ಬಾಗಿಲು ತೆರೆದರೆ ಸೂಕ್ತ ಕ್ರಮ ಜರುಗಿಸಲಾಗುತ್ತದೆ. -ಬಿ.ಪ್ರಹ್ಲಾದ, ಅಂಕೋಲಾ ಪುರಸಭೆ ಮುಖ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು