ಸಾಗರ: ಶಾಲೆಗೆ ಹೋಗುತ್ತೇನೆಂದು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ
Team Udayavani, May 17, 2022, 4:13 PM IST
ಸಾಗರ: ಇಲ್ಲಿನ ಜಂಬಗಾರು ವಾಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ರಕ್ಷಿತಾ (16) ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ.
ಶಿವಲಿಂಗಪ್ಪ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ರಕ್ಷಿತಾ ಸೋಮವಾರ ಬೆಳಿಗ್ಗೆ ತಿಂಡಿ ತಿಂದು ಶಾಲೆಗೆ ಹೋಗುವುದಾಗಿ ಪೋಷಕರಿಗೆ ತಿಳಿಸಿ ಹೋಗಿದ್ದಳು. ರಾತ್ರಿ ಎಷ್ಟು ಹೊತ್ತಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಮಂಗಳವಾರ ಬೆಳಿಗ್ಗೆ ಗಣಪತಿ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದ್ದು, ಸೋಮವಾರ ರಾತ್ರಿಯೇ ರಕ್ಷಿತಾ ಗಣಪತಿ ಕೆರೆಗೆ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ.
ಮೃತ ರಕ್ಷಿತಾ ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ತೀವ್ರವಾಗಿ ಆತಂಕಗೊಂಡಿದ್ದಳು. ಮನೆಯಲ್ಲಿ ಸಹ ಅಪ್ಪಅಮ್ಮನ ಬಳಿ ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂದು ಹೇಳಿಕೊಂಡಿದ್ದಳು. ತಂದೆ ತಾಯಿಯರು, ಹೆದರಬೇಡ. ಧೈರ್ಯವಾಗಿರು ಎಂದು ಬುದ್ದಿ ಹೇಳಿದ್ದರು ಎನ್ನಲಾಗಿದೆ. ಆದರೂ ಧೈರ್ಯ ತಂದು ಕೊಳ್ಳದ ರಕ್ಷಿತಾ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಮಾವತಿ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂಧನ ಇಲಾಖೆಗೆ ಆಯ್ಕೆಗೊಂಡ 1385 ಅಭ್ಯರ್ಥಿಗಳಿಗೆ ಆದೇಶ ಪತ್ರ : ಸಚಿವ ಸುನೀಲ್ ಕುಮಾರ್
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ಭ್ರಷ್ಟಾಚಾರ ಆರೋಪಿಸಿ ಕಾರವಾರ ಪೌರಾಯುಕ್ತರ ಕೊಠಡಿಯಲ್ಲಿ ಮಾಜಿ ಶಾಸಕ ಸೈಲ್ ಧರಣಿ
ಸಾಗರ : 6 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣ : ಹಾಲಪ್ಪ
ಅನಧಿಕೃತ ಸಮಿತಿಯಿಂದ ಮಾರಿಕಾಂಬಾ ದೇವಸ್ಥಾನ ನಿರ್ವಹಣೆ ; ಎಂ.ನಾಗರಾಜ್ ಆರೋಪ
MUST WATCH
ಹೊಸ ಸೇರ್ಪಡೆ
ಇಂಧನ ಇಲಾಖೆಗೆ ಆಯ್ಕೆಗೊಂಡ 1385 ಅಭ್ಯರ್ಥಿಗಳಿಗೆ ಆದೇಶ ಪತ್ರ : ಸಚಿವ ಸುನೀಲ್ ಕುಮಾರ್
ಮಂಗಳೂರು : ಪ್ರಖ್ಯಾತ ಉದ್ಯಮಿ ಎಂ. ಅಣ್ಣಪ್ಪ ಪೈ ನಿಧನ
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನ : ಸಿಎಂ ಸ್ಥಾನಕ್ಕೆ ಉದ್ಧವ್ ರಾಜೀನಾಮೆ
ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ