ಸಾಗರ : ಪೌರ ಕಾರ್ಮಿಕರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ; ಮಾಜಿ ಸಚಿವ ಕಾಗೋಡು ಹಾಜರಿ
Team Udayavani, Jul 2, 2022, 5:11 PM IST
ಸಾಗರ: ನಗರಸಭೆಯಲ್ಲಿ ಪೌರಸೇವೆ ಮಾಡುತ್ತಿರುವ ನೇರಪಾವತಿ ಪೌರ ಕಾರ್ಮಿಕರು ಮತ್ತು ಹೊರಗುತ್ತಿಗೆ ವಿಭಾಗದ ನೌಕರರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ಇಲ್ಲಿನ ನಗರಸಭೆ ಆವರಣದಲ್ಲಿ ನೌಕರಿ ಖಾಯಂಗೊಳಿಸಲು ಒತ್ತಾಯಿಸಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ನೇರಪಾವತಿ ಪೌರಕಾರ್ಮಿಕರು ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆ ನ್ಯಾಯಸಮ್ಮತವಾಗಿದೆ. ಅನೇಕ ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವವರ ನೌಕರಿಯನ್ನು ಖಾಯಂಗೊಳಿಸುವತ್ತ ಸರ್ಕಾರ ಗಮನ ಹರಿಸಬೇಕು. ಪೌರ ಕಾರ್ಮಿಕರ ಸೇವೆ ಅತ್ಯಂತ ಶ್ರೇಷ್ಟವಾದದ್ದು. ಈ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಿರುವ ನೌಕರರ ನೌಕರಿಯನ್ನು ಸರ್ಕಾರ ತಕ್ಷಣ ಖಾಯಂಗೊಳಿಸುವ ಮೂಲಕ ಅವರಿಗೆ ಜೀವನ ಭದ್ರತೆ ಮತ್ತು ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ವಿಟ್ಲ: ಅಕ್ರಮವಾಗಿ ಮಾದಕ ವಸ್ತು ಸಾಗಾಟ; ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳ ಬಂಧನ
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಮಾತನಾಡಿ, ಗುತ್ತಿಗೆ ಪೌರ ಕಾರ್ಮಿಕರು ಅನೇಕ ವರ್ಷಗಳಿಂದ ತಮ್ಮ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸುತ್ತಾ ಬಂದಿದ್ದಾರೆ. ಸರ್ಕಾರ ನೌಕರಿಯನ್ನು ಖಾಯಂಗೊಳಿಸುವತ್ತ ಗಮನ ಹರಿಸಬೇಕು. ಚಳುವಳಿಗೆ ಕುಳಿತವರನ್ನು ಕೆಲಸದಿಂದ ತೆಗೆದು ಹಾಕುವ ಪ್ರಯತ್ನ ಸಾಗರ ನಗರಸಭೆಯಲ್ಲಿ ನಡೆಯುತ್ತಿರುವುದನ್ನು ಖಂಡಿಸುತ್ತಿದ್ದೇವೆ. ಈ ಊರಿನಲ್ಲಿ ಅಂತಹದ್ದಕ್ಕೆ ಅವಕಾಶವಿಲ್ಲ. ಅಂತಹದ್ದು ಮಾಡಿದರೆ ಗುತ್ತಿಗೆದಾರನ ವಿರುದ್ಧ ಉಗ್ರವಾದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗುತ್ತದೆ. ಆಡಳಿತ ಧರಣಿ ಕುಳಿತ ಪೌರ ಕಾರ್ಮಿಕರ ಪರ ನಿಲ್ಲಬೇಕು. ಧರಣಿ ಕುಳಿತ ಒಬ್ಬರಿಗೆ ತೊಂದರೆ ಕೊಟ್ಟರೂ ನಗರಸಭೆಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಗರಸಭೆ ಸದಸ್ಯೆ ಮಧು ಮಾಲತಿ, ಸಂಘದ ಪ್ರಮುಖರಾದ ಕಾಮರಾಜ್, ಎಂ.ನಾಗರಾಜ್, ತಂಗರಾಜ್, ದೇವರಾಜ್, ನಾಗರಾಜ್ ವಿ., ವೀರಾ ಆರ್., ಸಿ.ಮೂರ್ತಿ, ರಾಜೇಂದ್ರ, ಮಹೇಶ್ ಎಂ., ತಂಗರಾಜ್, ಸಿ.ಮಣಿಕಂಠ, ರಾಘವೇಂದ್ರ, ಸತೀಶ್, ಮುರುಗೇಶ್, ಆನಂದ್ ಬಾಳೆಕೊಪ್ಪ, ಸುರೇಶ್, ಚೆಲುವಿ, ಸುಲೋಚನಾ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು