ಉಪ್ಪಿನ ಸತ್ಯಾಗ್ರಹಕ್ಕೆ 88 ವರ್ಷ


Team Udayavani, Apr 14, 2019, 5:21 PM IST

Udayavani Kannada Newspaper
ಅಂಕೋಲಾ: ಉಪ್ಪಿನ ಸತ್ಯಾಗ್ರಹದ ಸಂದರ್ಭದಲ್ಲಿ ಚಿಕ್ಕ ಹುಡುಗನಾಗಿದ್ದೆ. ಆವಾಗ ನಮಗೆ ವಿವಿಧ ಸ್ಥಳಗಳಲ್ಲಿ ಗುಪ್ತ ಚೀಟಿ ಕೊಟ್ಟು ಬರಲು ಹೇಳುತ್ತಿದ್ದರು. ಸೈಕಲ್‌ ಕೂಡ ಅಪರೂಪ ಎಂಬಂತಹ ಸಂದರ್ಭದಲ್ಲಿ ಇದಕ್ಕಾಗಿಯೇ ನನಗೆ ಸೈಕಲ್‌ ನೀಡುತ್ತಿದ್ದರು. ಹಿಗಾಗಿ ನಾನು ಚೀಟಿ ಕೊಟ್ಟು ಬರುವ ಕೆಲಸ ಮಾಡುತ್ತಿದ್ದೆ. ಆದರೆ ನನಗೆ ಅದರೊಳಗೆ ಏನು ಬರೆದಿದ್ದಾರೆ, ಯಾವ ಹೋರಾಟ, ಏನೂ ತಿಳಿದಿರಲಿಲ್ಲ ಎಂದು ಕವಿ ಶಿವಬಾಬಾ ನಾಯ್ಕ ಹೇಳಿದರು.
ಅಂಕೋಲಾದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ 88ನೇ ವರ್ಷದ ನಿಮಿತ್ತ ಶನಿವಾರ ಕಡಲು ಪ್ರಕಾಶನದವರು ಹಮ್ಮಿಕೊಂಡ ತಾಲೂಕಿನ ಪೂಜಗೇರಿ ಹಳ್ಳಕ್ಕೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಬ್ರಿಟೀಷರ ವಿರುದ್ಧ ನಾನು ಹೀಗೆ ಕೆಲಸ ಮಾಡಿದ್ದೇನೆ ಎನ್ನುವುದೇ ನನ್ನ ಗಮನಕ್ಕೆ ಬಂದಿರಲಿಲ್ಲ. ಆದರೆ ಈ ಎಲ್ಲಾ ಚಳವಳಿಗಳನ್ನು ನಾನು ನೋಡಿದ್ದೇನೆ. ನನ್ನ ಕೈಯಿಂದ ಬಾಗಿನ ಅರ್ಪಿಸುವ ಸೌಭಾಗ್ಯ ಬಂದಿರುವುದು ಮರೆಯಲಾಗದ ಸಂಗತಿ ಎಂದರು.
ಕನ್ನಡ ಚಂದ್ರಮದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಮಾತನಾಡಿ, ಇತಿಹಾಸ ತಿಳಿಯದೇ ಹೋದರೆ ನಮ್ಮ ಹಿರಿಯರನ್ನು ನಾವು ಕಡೆಗಣಿಸಿದಂತೆ. ಹೀಗಾಗಿ ಇಂತಹ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ದೊರಕಿಸಿಕೊಡಲು ಕಾರಣೀಕರ್ತರಾದ ಸೇನಾನಿಗಳ ನೆನಪು ಮರುಕಳಿಸಿದಂತಾಗುತ್ತದೆ ಎಂದರು.
ಕಸಾಪ ಮಾಜಿ ಅಧ್ಯಕ್ಷ ಕಾಂತ ಮಾಸ್ತರ ಮಾತನಾಡಿ, ಉಪ್ಪಿಗೆ ತೆರಿಗೆ ವಿಧಿಸಿದ್ದನ್ನು ವಿರೋಧಿಸಿ ಬ್ರಿಟೀಷ್‌ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಪೂಜಗೇರಿ ಹಳ್ಳದ ನೀರನ್ನು ತೆಗೆದುಕೊಂಡು ಹೋಗಿ ತಹಶೀಲ್ದಾರ ಕಚೇರಿ ಎದುರು ಉಪ್ಪನ್ನು ತಯಾರಿಸಲಾಯಿತು. ಅದನ್ನು ಹರಾಜು ಮಾಡಿದಾಗ ಒಂದು ಚೀಲ ಉಪ್ಪಿಗೆ ಅಂದಿನ ಕಾಲದಲ್ಲಿಯೇ ರೇವು ನಾಯ್ಕ ಎನ್ನುವವರು 30 ರೂ. ನೀಡಿ ಖರೀದಿಸಿರುವುದು ದೇಶಪ್ರೇಮದ ಕೆಚ್ಚೆದೆ ತೋರಿಸುತ್ತದೆ ಎಂದರು.
ಚಿನ್ನದಗರಿ ಯುವಕ ಸಂಘದ ಗೌರವಾಧ್ಯಕ್ಷ ಹಾಗೂ ವರದಿಗಾರ ವಿಲಾಸ ನಾಯಕ ಪುಟ್ಟು ಮಾತನಾಡಿ, ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಬೇಕಾದ ಕರ್ತವ್ಯ ಪ್ರತಿಯೊಬ್ಬರ ಮೇಲಿದೆ. ಕಳೆದ ಕೆಲ ವರ್ಷಗಳಿಂದ ನಾವೆಲ್ಲರೂ ಸೇರಿ ಹಳ್ಳಕ್ಕೆ ಬಾಗಿನ ಅರ್ಪಿಸುವ ಸಂಸ್ಕೃತಿಯನ್ನು ಹುಟ್ಟುಹಾಕಲಾಗಿದೆ ಎಂದರು.
ನಿವೃತ್ತ ಗ್ರಂಥಪಾಲಕ ಮಹಾಂತೇಶ ರೇವಡಿ, ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆ ಸಂಚಾಲಕ ಉಮೇಶ ಎನ್‌. ನಾಯ್ಕ, ವರದಿಗಾರ ವಿದ್ಯಾಧರ ಮೊರಬಾ, ಹಿರಿಯ ಕವಿ ನಾಗೇಂದ್ರ ನಾಯಕ ತೊರ್ಕೆ, ತಾಲೂಕು ಯುವ ಒಕ್ಕೂಟದ ಗೌರವಾಧ್ಯಕ್ಷ ಸಂದೀಪ ಬಂಟ ಮಾತನಾಡಿದರು.
ಕಡಲು ಪ್ರಕಾಶನದ ಸಂಚಾಲಕ ನಾಗರಾಜ ಮಂಜಗುಣಿ ಮಾತನಾಡಿ, ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ಮುಟ್ಟಿಸುವುದಕ್ಕಾಗಿ 2016ರಲ್ಲಿ 85ನೇ ವರ್ಷದ ನಿಮಿತ್ತ ಪ್ರಥಮ ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಠuಲ ಶೆಟ್ಟಿ, 2017ರಲ್ಲಿ ನಾಡೋಜ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಸುಕ್ರಿ ಗೌಡ, 2018ರಲ್ಲಿ ಕರ್ನಾಟಕ ರಾಜ್ಯೋತ್ಸವ
ಪ್ರಶಸ್ತಿ ಪುರಸ್ಕೃತ ನಾಟಿ ವೈದ್ಯ ಹನುಮಂತ ಗೌಡ ಅವರಿಂದ ಬಾಗಿನ ಅರ್ಪಿಸಲಾಗಿತ್ತು. 88ನೇ ವರ್ಷದ ನೆನಪಿಗಾಗಿ ಶಿವಬಾಬಾ ನಾಯ್ಕರಿಂದ ಬಾಗಿನ ಅರ್ಪಿಸಲಾಗಿದೆ. ಇದು ಮುಂದೆಯೂ ನಿರಂತರವಾಗಿ ನಡೆಯಲಿದೆ ಎಂದರು.
ರಮೇಶ ನಾಯ್ಕ, ಗೌರೀಶ ನಾಯ್ಕ, ವಿನೋದ ಗಾಂವಕರ, ಅಕ್ಷಯ ಗಾಂವಕರ, ಮಹಾದೇವ ಗೌಡ, ಮಣಿಕಂಠ ನಾಯ್ಕ ಮಂಜಗುಣಿ ಇತರರು ಉಪಸ್ಥಿತರಿದ್ದರು. ಚಿನ್ನದಗರಿ ಯುವಕ ಸಂಘದ ಅಧ್ಯಕ್ಷ ಕಾರ್ತಿಕ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.