ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ


Team Udayavani, Jan 18, 2022, 4:13 PM IST

ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ

ಸಾಂದರ್ಭಿಕ ಚಿತ್ರ

ಶಿರಸಿ: ಪ್ರಗತಿಗೆ ಅಗತ್ಯವಾದ ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ಕಣ್ಮುಚ್ಚಿ‌ ಕುಳಿತಿದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಅಸಮಧಾನ ವ್ಯಕ್ತಡಿಸಿದ ಸಂಘದ ಜಿಲ್ಲಾ ಅಧ್ಯಕ್ಷ ಶ್ಯಾಂಸುಂದರ ಭಟ್ಟ, ಕಟ್ಟಡ, ರಸ್ತೆ, ಸೇತುವೆ, ಮೋರಿ ಸೇರಿದಂತೆ ಎಲ್ಲ ಅಭಿವೃದ್ದಿಗಳಿಗೆ ಅಗತ್ಯವಾದ ಮರಳು ಲಭ್ಯವಾಗದೇ ಪ್ರಗತಿ ಕುಂಠಿತವಾಗಿದೆ.

ಮಳೆಗಾಲ ಮುಗಿದು ಮೂರು ತಿಂಗಳಾದರೂ ಮರಳು  ತೆಗೆಯಲು ಅನುಮತಿ ನೀಡದೇ ಜಿಲ್ಲಾಡಳಿತವು ಕಣ್ಣುಮುಚ್ಚಿ  ಕುಳಿತಿರುವುದನ್ನು ನೋಡಿದರೆ ಜಿಲ್ಲಾಡಳಿತಕ್ಕೇ ಕರೋನಾ ತಗಲಿರುವಂತೆ ಕಂಡು ಬರುತ್ತದೆ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಮರಳು ತೆಗೆಯುವುದನ್ನು  ನಿಲ್ಲಿಸಲಾಗಿತ್ತು. ಸಪ್ಟೆಂಬರ ಅಥವಾ ಅಕ್ಟೋಬರದಲ್ಲಿ ಮರಳು  ತೆಗೆಯಲು ಅನುಮತಿ ನೀಡುವ ನಿರೀಕ್ಷೆ ಇತ್ತು. ಆದರೆ ಜನವರಿ ತಿಂಗಳು ಮುಗಿಯುತ್ತ ಬಂದರೂ ಇನ್ನೂ ಆ ಬಗ್ಗೆ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಜಿಲ್ಲಾಡಳಿತವು ಜಿಲ್ಲಾ ಅಭಿವೃದ್ಧಿಗೆ  ವಂಚಿಸುತ್ತಿದೆ. ಈ ವಿಚಾರದಲ್ಲಿ ಜಿಲ್ಲಾಡಳಿತಕ್ಕೆ ತಕ್ಕ ಮಾರ್ಗದರ್ಶನ ನೀಡುವಲ್ಲಿ ಜಿಲ್ಲಾ ಉಸ್ತುವಾರಿ  ಸಚಿವರು, ಶಾಸಕರು, ಮರೆತಂತೆ ಕಾಣುತ್ತಿದ್ದು ಬೇಸರ  ತರಿಸುತ್ತಿದೆ. ಈ ವರ್ಷ ಹೆಚ್ಚಿನ ಮಳೆಯಾಗಿರುವುದರಿಂದ ನದಿಗಳಲ್ಲಿ  ಮರಳಿನ ಕೊರತೆ ಇಲ್ಲ. ಯಾಕೆಂದರೆ ಗುತ್ತಿಗೆದಾರರೊಬ್ಬರು  ಶರಾವತಿ ನದಿಯಲ್ಲಿ ಬ್ರಿಜ್ ಮಾಡಲು ಅಡಿಪಾಯಕ್ಕೆ ತೆಗೆಯಲು  ಹೋದಾಗ 15 ಮೀ ಆಳದವರೆಗೆ ರೇತಿ ಇರುವುದು ಕಂಡು ಬಂದಿದೆ ಎಂದಿದ್ದಾರೆ.

ಕರಾವಳಿ ಭಾಗದಲ್ಲಿ ಕೆಲವು ಅಧಿಕಾರಿಗಳನ್ನು ತೃಪ್ತಿಪಡಿಸಿ  ಅನಧಿಕೃತ ಮರಳು ತೆಗೆದು ಸಣ್ಣ ವಾಹನಗಳಲ್ಲಿ ಸಾಗಾಣಿಕೆ  ಮಾಡುತ್ತಿದ್ದು ಇದರಿಂದ ಸರಕಾರದ ಬೊಕ್ಕಸಕ್ಕೂ  ನಷ್ಟವಾಗುತ್ತಿದೆ. ಈ ಸಂಗತಿ ಜನ ಪ್ರತಿನಿಧಿಗಳಿಗೂ  ತಿಳಿದಿದೆ. ಆದರೂ ಜಿಲ್ಲೆಯಲ್ಲಿ ಸರಕಾರಿ ಕಾಮಗಾರಿಗಳಿಗೆ,  ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳ ಕಟ್ಟಡಗಳಿಗೆ ಮರಳು ಸಿಗಲು  ಇನ್ನೂ ಪ್ರಯತ್ನಿಸದಿರುವು ಹಾಗೂ ನಿರ್ದಿಷ್ಟ ಸೂಚನೆ ನೀಡಿ ಮರಳು ತೆಗೆಯಲು ಮತ್ತು ಸಾಗಾಟಕ್ಕೆ ಅನುಮತಿ ನೀಡಲು  ಕ್ರಮವಾಗದಿರುವುದು ಬೇಸರ ತಂದಿದೆ ಎಂದಿದ್ದಾರೆ.

ಜಿಲ್ಲೆಯ ಎಲ್ಲ ನದಿಗಳಲ್ಲಿ ಮರಳು ತೆಗೆಯಲು  ಮತ್ತು ಸಾಗಾಟಕ್ಕೆ ಈ ಕೂಡಲೇ ಪರವಾನಿಗೆ ನೀಡಲು ಜಿಲ್ಲಾ  ಗುತ್ತಿಗೆದಾರರ ಸಂಘವು ಜಿಲ್ಲಾಡಳಿತಕ್ಕೆ ಮನವಿ ಮಾಡುತ್ತದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೂಡಲೇ ಮರಳು ತೆಗೆಯಲು ಅನುಮತಿ ನೀಡಬೇಕು. ವರ್ಷ ಪೂರ್ತಿ ಮರಳು ಸಿಗಲು ಪ್ರತಿ ತಾಲೂಕಿನಲ್ಲಿ ದಾಸ್ತಾನು  ಯಾರ್ಡಗಳನ್ನು ನಿರ್ಮಿಸಿ ರಾಜಧನ ಸಹಿತ ದರ ನಿಗದಿಪಡಿಸಬೇಕು. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಇದರಿಂದ ಮರಳು ಮಾಫಿಯಾ ನಿಲ್ಲುತ್ತದೆ. ಈ ವಿಚಾರದಲ್ಲಿ  ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ತುರ್ತಾಗಿ ಕ್ರಮ  ಕೈಗೊಳ್ಳಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಮರಳು ಸಮಸ್ಯೆ ಕೇವಲ  ಗುತ್ತಿಗೆದಾರರದ್ದಲ್ಲ.‌ಜನ ಸಾಮಾನ್ಯರದ್ದೂ ಹೌದು. ಈ ಬಗ್ಗೆ ಸಾರ್ವಜನಿಕರು ಧ್ವನಿ ಎತ್ತಬೇಕಾಗಿದೆ. – ಶ್ಯಾಂಸುಂದರ ಭಟ್ಟ, ಜಿಲ್ಲಾ ಅಧ್ಯಕ್ಷ, ಗುತ್ತಿಗೆದಾರ ಸಂಘ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.