ಬಸ್‌ಗಾಗಿ ಶಾಲಾ-ಕಾಲೇಜ್‌ ಮಕ್ಕಳ ಪರದಾಟ


Team Udayavani, Jun 28, 2022, 4:54 PM IST

17

ಜೋಯಿಡಾ: ರಾಮನಗರದ ಬಸ್‌ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್‌ ಹತ್ತುತ್ತಿರುವಾಗಲೇ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಬಸ್‌ ಚಲಯಿಸಿ ಮಕ್ಕಳನ್ನು ಬಿಟ್ಟು ಹೋದ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ.

ರಾಮನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಶಾಲಾ ಕಾಲೇಜು ಮಕ್ಕಳನ್ನು ಬಸ್‌ನಲ್ಲಿ ಹತ್ತಿಸಿಕೊಳ್ಳದೇ ಇರುವುದರಿಂದ ಮಕ್ಕಳಿಗೆ ಶಾಲೆ ಬಿಟ್ಟ ನಂತರ ಮನೆ ಸೇರುವುದೇ ಕಷ್ಟವಾಗಿದೆ.

ಜೋಯಿಡಾ ತಾಲೂಕಿನಾದ್ಯಂತ ಮೊದಲೇ ಕೆಎಸ್‌ಆರ್‌ಟಿಸಿ ಬಸ್‌ಗಳು ಓಡಾಡುವುದು ಕಡಿಮೆ. ಅದರಲ್ಲೂ ಸಮಯಕ್ಕೆ ಸರಿಯಾಗಿ ಯಾವ ಹಳ್ಳಿಗಳಿಗೂ ಬಸ್‌ಗಳು ಸಾಗುವುದಿಲ್ಲ. ಅಂತದ್ದರಲ್ಲಿ ಬರುವ ಬಸ್‌ಗಳೂ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಮಕ್ಕಳ ಸಮಸ್ಯೆಗೆ ಸ್ಪಂದಿಸುತ್ತಿಲ್ಲ, ರಾಮನಗರ ಬಸ್‌ ನಿಲ್ದಾಣಕ್ಕೆ ಬರುವ ಬೆಳಗಾವಿ- ದಾಂಡೇಲಿ ಬಸ್‌ ಹಾಗೂ ಸೇರಿದಂತೆ ಇನ್ನೂ ಕೆಲವು ಬಸ್‌ಗಳು ರಾಮನಗರ ಬಸ್‌ ನಿಲ್ದಾಣದಲ್ಲಿ ನಿಂತರು ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳುತ್ತಿಲ್ಲ, ಶಾಲಾ ಮಕ್ಕಳು ಪಾಸ್‌ ತೆಗೆದುಕೊಂಡು ಹೋಗುವ ಕಾರಣಕ್ಕೆ ಬಸ್‌ ಹತ್ತಿಸಿಕೊಳ್ಳುತ್ತಿಲ್ಲ ಎಂಬುದು ಕೆಎಸ್‌ಆರ್‌ಟಿಸಿಯವರ ಗೋಳಾಗಿದ್ದು ಮಕ್ಕಳ ಭವಿಷ್ಯ ನೀರು ಪಾಲಾದರು ಇವರಿಗೇನು ಚಿಂತೆಯಿಲ್ಲ ಎಂಬತಾಗಿದೆ.

ಜೋಯಿಡಾ ತಾಲೂಕು ಹಳ್ಳಿಗಳಿಂದ ಮತ್ತು ದಟ್ಟವಾದ ಕಾಡಿನಿಂದ ಶಾಲೆಗೆ ಬರುವ ಮಕ್ಕಳು ಹತ್ತಾರು ಕಿಮೀ ನಡೆದೇ ಬರಬೇಕು. ಅಂತದ್ದರಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಡೈವರ್‌, ಕಂಡೆಕ್ಟರ್‌ಗಳು ಶಾಲಾ ಮಕ್ಕಳನ್ನು ಬಸ್‌ನೊಳಗೆ ಹತ್ತಿಸಿಕೊಳ್ಳದೆ ದರ್ಪ ತೋರುತ್ತಿರುವುದು ಬೇಸರದ ಸಂಗತಿಯಾಗಿದೆ.

ಜೋಯಿಡಾ ತಾಲೂಕು ಸಮಸ್ಯೆಗಳಿಂದಲೇ ಕೂಡಿದ್ದು ಅದರಲ್ಲೂ ರಾಮನಗರ ಭಾಗದಲ್ಲಿ ರಸ್ತೆಗಳು ಸರಿಯಿಲ್ಲದ ಕಾರಣ ನಡೆದುಕೊಂಡೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ತಾಲೂಕಿನ ಅಧಿಕಾರಿಗಳು, ಶಾಸಕರು ಗಮನಹರಿಸಿ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿಯು ಮಕ್ಕಳಿಗೆ ಅವಕಾಶ ನೀಡಬೇಕಾಗಿರುವುದು ಅನಿವಾರ್ಯವಾಗಿದೆ.

ಶಾಲಾ ಮಕ್ಕಳು ಬಸ್‌ ಏರುತ್ತಿರುವಾಗಲೇ ಬಸ್‌ ಚಲಾಯಿಸುತ್ತಾರೆ. ಏನಾದರು ಅನಾಹುತವಾದರೆ ಯಾರು ಹೊಣೆ. ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಶಾಲಾ ಮಕ್ಕಳಿಗೆ ಅವಕಾಶ ಸಿಗಬೇಕು. ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು. –ರಾಮ್‌ ದೇಸಾಯಿ, ರಾಮನಗರ ಸ್ಥಳೀಯ.

ಶಾಲಾ ಮಕ್ಕಳನ್ನು ಬಸ್‌ ಹತ್ತಿಸಿಕೊಳ್ಳದೇ ಇರುವುದು ತೀರಾ ತಪ್ಪು. ಈ ಬಗ್ಗೆ ಕೂಡಲೇ ಎಚ್ಚರವಹಿಸಿ ಜೋಯಿಡಾ ರಾಮನಗರ ಭಾಗದಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ. –ಕೆ.ಎಸ್‌. ರಾಥೋಡ, ಡಿಪೋ ಮೆನೇಜರ್‌ ದಾಂಡೇಲಿ.

ಈ ಬಗ್ಗೆ ಕೂಡಲೇ ಗಮನ ಹರಿಸಿ ಶಾಲಾ ಮಕ್ಕಳಿಗೆ ಯಾವುದೇ ಸಮಸ್ಯೆ ಆಗದಂತೆ ಹಾಗೂ ಕೆಎಸ್‌ಆರ್‌ಟಿಸಿಯವರಿಗೆ ಎಚ್ಚರಿಕೆ ನೀಡಲಾಗುವುದು. -ಸಂಜಯ ಕಾಂಬಳೆ, ತಹಶೀಲ್ದಾರ್‌ ಜೋಯಿಡಾ.

„ಸಂದೇಶ ದೇಸಾಯಿ

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.