ಯುವ ಮತದಾರರಿಗೆ ಸ್ಕೂಬಾ ಡೈವಿಂಗ್‌


Team Udayavani, Apr 13, 2019, 4:02 PM IST

nc-1
ಕಾರವಾರ: ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಮೂಲಸೌಲಭ್ಯ ಕಲ್ಪಿಸಿರುವುದೂ ಸೇರಿದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಮತಗಟ್ಟೆಗಳಿಗೆ ಕನಿಷ್ಠ ಮೂಲ ಸೌಲಭ್ಯ, ದಿವ್ಯಾಂಗ ಮತದಾರರಿಗೆ ನೆರವು ಸೇರಿದಂತೆ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವಂತೆ ಏ.23 ರಂದು ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಹೇಳಿದರು.
ವ್ಯವಸ್ಥಿತ ಮತದಾನದ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತದಾರರಿಗೆ ವಿವಿಧ ಹಂತದಲ್ಲಿ ಜಾಗೃತಿ ಮೂಡಿಸಲಾಗಿದೆ. ಯುವ ಮತದಾರರನ್ನು ಪ್ರೋತ್ಸಾಹಿಸಲು ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮತದಾನದ ದಿನ ಮತ್ತು ಮತ ಎಣಿಕೆಗೆ ಅಗತ್ಯವಿರುವ ಎಲ್ಲ ಪೂರ್ವ ತಯಾರಿ ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಅವರು ಹೇಳಿದರು.
ಮತದಾರರ ಅನುಕೂಲಕ್ಕಾಗಿ ಬಿಎಲ್‌ಒಗಳ ಮೂಲಕ ಮತಗಟ್ಟೆಯಲ್ಲಿ ಸಹಾಯ ಕೇಂದ್ರ ಇರಲಿದೆ. ಪ್ರತಿ ಮತದಾರರಿಗೂ ಮತದಾರರ ಚೀಟಿ ಹಾಗೂ ಮತದಾರರ ಮಾರ್ಗಸೂಚಿ ಮಡಿಕೆಪತ್ರವನ್ನು ಅವರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮತದಾರರಿಗೆ ಮತಗಟ್ಟೆಯಲ್ಲಿನ ಸೌಲಭ್ಯ ಹಾಗೂ ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಲಿದೆ ಎಂದರು.
ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈಗಾಗಲೇ 30 ಸಂಯುಕ್ತ ಚೆಕ್‌ಪೋಸ್ಟ ಗಳನ್ನು ರಚಿಸಲಾಗಿದೆ. 36 ಸಂಚಾರಿ ತನಿಖಾ ತಂಡಗಳನ್ನು ರಚಿಸಲಾಗಿದ್ದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ತಡೆಯುವ ನಿಟ್ಟಿನಲ್ಲಿ ಈ ತಂಡಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದರು.
ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ವಿಧಾನಸಭಾ ಕ್ಷೇತ್ರವಾರು ತರಬೇತಿ ನೀಡಲಾಗಿದೆ. ಮತ್ತೂಂದು ತರಬೇತಿಗೆ ದಿನಾಂಕ ನಿಗದಿಯಾಗಿದ್ದು ಮತಗಟ್ಟೆಗೆ ತೆರಳುವ ಮತ್ತು ಮತದಾನ ನಂತರದ ಡಿ-ಮಸ್ಟರಿಂಗ್‌ಗೆ ತರಬೇತಿ ನೀಡಲಾಗುವುದು. ಆಯೋಗದ ಮಾರ್ಗಸೂಚಿಯಂತೆ ಮತ ಎಣಿಕೆಗೆ ಕುಮಟಾ ಎ.ವಿ. ಬಳಿಗಾ ಕಾಲೇಜಿನಲ್ಲಿ ಭದ್ರತಾ
ಕೊಠಡಿಯೂ ಸಿದ್ಧಗೊಂಡಿದೆ. ಚುನಾವಣಾ ವೀಕ್ಷಕರು ಉತ್ತರ ಕನ್ನಡ ಜಿಲ್ಲೆಯ ಚುನಾವಣಾ ಸಿದ್ಧತೆಗಳಿಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಎಂ.ರೋಷನ್‌ ಮಾತನಾಡಿ, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತಗಟ್ಟೆಯಲ್ಲಿ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಪ್ರತಿ ತಾಲೂಕಿಗೆ ಒಂದರಂತೆ ಮಹಿಳೆಯರನ್ನು ಪ್ರೋತ್ಸಾಹಿಸುವ 11 ಸಖೀ ಮತಗಟ್ಟೆಗಳು ಇರಲಿವೆ. ಇಲ್ಲಿ ಎಲ್ಲ ಸಿಬ್ಬಂದಿ ಮಹಿಳೆಯರೇ ಇರಲಿದ್ದಾರೆ. ಅಲ್ಲದೆ ಗಿರಿಜನರನ್ನು ಮತದಾನಕ್ಕೆ ಪ್ರೋತ್ಸಾಹಿಸಲು 2 ಮತಗಟ್ಟೆಗಳನ್ನು ಗಿರಿಜನರ ಗುಡಿಸಲಿನ ಮಾದರಿಯಲ್ಲಿ ರೂಪಿಸಲಾಗುವುದು ಮತ್ತು 2 ದಿವ್ಯಾಂಗರ ಮತಗಟ್ಟೆಗಳನ್ನು ರೂಪಿಸಲಿದ್ದು ಈ ಮತಗಟ್ಟೆಗಳಲ್ಲಿ ದಿವ್ಯಾಂಗ ಸಿಬ್ಬಂದಿ ಇದೇ ಮೊದಲ ಬಾರಿಗೆ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ವಿಕಲಚೇತನರಿಗೆ ಪ್ಯಾರಾ ಮೋಟಾರ್‌ ಗ್ಲೆಡಿಂಗ್‌ -ಯುವ ಮತದಾರರಿಗೆ ಸ್ಕೂಬಾ ಡೈವಿಂಗ್‌; ಮತದಾರರನ್ನು ಪ್ರೋತ್ಸಾಹಿಸಲು ಈಗಾಗಲೇ ಎಲ್ಲ ರೀತಿಯ ಚಟುವಟಿಕೆಗಳನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಡಲಾಗಿದೆ. ಎಲ್ಲೆಡೆ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದ್ದು ವಿಕಲಚೇತನ ಮತದಾರರಿಗಾಗಿ ಪ್ಯಾರಾ ಮೋಟಾರ್‌ ಗ್ಲೆಡಿಂಗ್‌ ಹಾಗೂ ಯುವ ಮತದಾರರಿಗಾಗಿ ಸ್ಕೂಬಾ ಡೈವಿಂಗ್‌ ಚಟುವಟಿಕೆಯನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ದಿವ್ಯಾಂಗ ಮತದಾರರ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ನೆರವು ತಂತ್ರಾಂಶವನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಿದ್ಧಪಡಿಸಿ ಪ್ರತಿ ಮತದಾರರೂ ಮತ ಚಲಾಯಿಸಲು ಕ್ರಮ ವಹಿಸಲಾಗಿದೆ. ಈ ತಂತ್ರಾಂಶವನ್ನು ಗೂಗಲ್‌ ನೊಂದಿಗೆ ಜೋಡಿಸಿರುವುದರಿಂದ ಮ್ಯಾಪ್‌ ನಲ್ಲಿ ಈಗಾಗಲೇ ಗುರುತಿಸಿರುವ ದಿವ್ಯಾಂಗ ಮತದಾರರನ್ನು ಹಸಿರು ವೃತ್ತದಲ್ಲಿ ಗೋಚರಿಸಿ ಮತದಾನವಾದ ಬಳಿಕ ಅದು ನೀಲಿ ಬಣ್ಣಕ್ಕೆ ಕಾಣಸಿಗುತ್ತದೆ. ಇದರಿಂದ ಎಷ್ಟು ಮಂದಿ ಮತ ಚಲಾಯಿಸಿದ್ದಾರೆ ಎಂಬುದು ತಿಳಿಯುತ್ತದೆ. ಜಿಲ್ಲಾಡಳಿತದ ಈ ಸಾಧನೆಗೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.
ಅಲ್ಲದೆ ದಿವ್ಯಾಂಗ ಮತದಾರರನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಗಳಲ್ಲಿ ಭೂತಗನ್ನಡಿ, ವೀಲ್‌ಚೇರ್‌, ಅವಕಾಶವಿರುವೆಡೆ ನಿರೀಕ್ಷಣಾ ಕೊಠಡಿ ಮತ್ತು ಪ್ರತಿ ಮತಗಟ್ಟೆಯಲ್ಲಿ ಅಂಧ ಮತದಾರರ ಅನುಕೂಲಕ್ಕಾಗಿ ಬ್ರೆ„ಲ್‌ಲಿಪಿಯಲ್ಲಿ ಬ್ಯಾಲೆಟ್‌ ಶೀಟನ್ನು ಗೋಡೆಯ ಮೇಲೆ ಅಂಟಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಅಂಧ ಮತದಾರರು ಯಾವ ನಂಬರಿನಲ್ಲಿ ಯಾವ ಅಭ್ಯರ್ಥಿ ಮತ್ತು ಗುರುತು ಇದೆ ಎಂದು ತಿಳಿಯಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ್‌ ಸಿಂಗ್ರೇರ್‌, ಐಎಎಸ್‌ ಪ್ರಭಾರಿ ದಿಲೀಶ್‌ ಸಸಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.