ಹಾಲಿನ ವ್ಯಾಪಾರದಲ್ಲಿ ಯಶಸ್ಸು ಕಂಡ ಸ್ನಾತಕೋತ್ತರ ಪದವೀಧರ


Team Udayavani, Dec 1, 2021, 10:13 AM IST

ಸುಧೀರ್‌ ಶೆಟ್ಟಿ

ದಾಂಡೇಲಿ : ಅವರು ಸ್ನಾತಕೋತ್ತರ ಪದವಿಯನ್ನು ಪಡೆದ ಯುವಕ. ಬಹಳಷ್ಟು ಉದ್ಯೋಗದ ಅವಕಾಶಗಳು ಬಂದಿತ್ತಾದರೂ, ಅದನ್ನು ನಯವಾಗಿ ತಿರಸ್ಕರಿಸಿ, ಇದ್ದೂರಿನಲ್ಲಿದ್ದುಕೊಂಡೆ ಬದುಕು ಕಟ್ಟಿಕೊಳ್ಳಬೇಕೆಂದು ಬಯಸಿ, ಸ್ವ ಉದ್ಯೋಗದ ಮೂಲಕ ಸ್ವತಂತ್ರ ಸ್ವಾವಲಂಭಿಯಾಗಿ ಯಶಸ್ಸಿನೆಡೆಗೆ ಹೆಜ್ಜೆಯಿಟ್ಟ ಶ್ರಮಸಾಧಕನನ್ನು ಪರಿಚಯಿಸುವ ಸಣ್ಣ ಪ್ರಯತ್ನ.

ಈ ಶ್ರಮ ಸಾಧಕ ಬೇರೆ ಯಾರು ಅಲ್ಲ. ವಿದ್ಯಾರ್ಥಿ ದೆಸೆಯಲ್ಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಹಲವಾರು ಸಾಮಾಜಿಕ ಹೋರಾಟ, ಚಳುವಳಿಗಳನ್ನು ಹಮ್ಮಿಕೊಂಡು ಸಮಾಜಮುಖಿಯಾಗಿ ಬೆಳೆದಿರುವ ಹಾಗೂ ಸೇವಾ ಸಂಕಲ್ಪ ತಂಡದ ಮೂಲಕ ಕೊರೊನಾ ಸಂಕಷ್ಟದ ಸಮಯದಲ್ಲಿ ಸದ್ದಿಲ್ಲದೆ ಸೇವಾ ಕೈಂಕರ್ಯವನ್ನು ನಡೆಸಿದ ಈಗಲೂ ಸೇವೆಗಾಗಿಯೆ ಹಾತೊರೆಯುವ ಯುವಕ. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿರುವ ಸುಧೀರ ಶೆಟ್ಟಿಯವರೆ ಸ್ವಾವಲಂಬಿ ಬದುಕು ನಡೆಸಲು ಹೆಜ್ಜೆಯಿಟ್ಟು ಯಶಸ್ಸಿನೆಡೆಗೆ ಸಾಗುತ್ತಿರುವ ನಗುಮೊಗದ ಗಟ್ಟಿಧೈರ್ಯದ ಸಾಹಸಿ ಯುವಕ.

ದಾಂಡೇಲಿ ನಗರದ ಸಮೀಪದ ಕೋಗಿಲಬನ ಗ್ರಾಮದ ನಿವಾಸಿಯಾಗಿರುವ ಸುಧೀರ ಶೆಟ್ಟಿಯವರು ಪ್ರವಾಸೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ, ಇದ್ದೂರಲ್ಲೆ ಇದ್ದು, ಏನನ್ನಾದರೂ ಸಾಧಿಸಬೇಕು, ಸಮಾಜಕ್ಕೆ ಒಳಿತನ್ನು ಮಾಡಬೇಕೆಂದು ಬಯಸಿ 2013 ರಲ್ಲಿ ಶುರವಚ್ಚಿಕೊಂಡಿದ್ದೆ ಹಾಲಿನ ವ್ಯಾಪಾರ.

ಹಾಲಿನ ವ್ಯಾಪಾರ ಮಾಡಲು ಶುರವಚ್ಚಿಕೊಂಡಾಗ ಅಪಹಾಸ್ಯಕ್ಕೂ ಈಡಾಗಿದ್ದೂ ಇದೆ. ಹಾಲು ಮಾರ್ಲಿಕ್ಕೂ ಸ್ನಾತಕೋತ್ತರ ಪದವಿಯವರೆಗೆ ಓದಬೇಕೆ? ಎಂದು ಪ್ರಶ್ನಿಸಿದವರು ಇದ್ದಾರೆ.

ಹಾಗೆಂದು ಅವೆಲ್ಲವುಗಳನ್ನು ಮನಸ್ಸಿನೊಳಗಿನ ಸಹಿಸುವ ಚೀಲದಲ್ಲಿ ಮುಚ್ಚಿಟ್ಟು ಯಾರು ಏನೆ ಅಂದರೂ ತನ್ನ ಪಾಡಿಗೆ ವ್ಯವಹಾರವನ್ನು ಮುನ್ನಡೆಸುತ್ತಾ, ಇದೀಗ ದಾಂಡೇಲಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಹಾಲು ವಿತರಣೆ ಮಾಡುವವರಲ್ಲಿ ಅಗ್ರ ಹೆಸರನ್ನು ಸಂಪಾದಿಸಿಕೊಂಡಿದ್ದಾರೆ ಸುಧೀರ ಶೆಟ್ಟಿಯವರು.  ಶ್ರಮವಹಿಸಿ ದುಡಿದಾಗ ಫಲ ಸಾಧ್ಯ ಎನ್ನುವುದನ್ನು ತೋರಿಸಿಕೊಟ್ಟ ಸುಧೀರ ಶೆಟ್ಟಿಗೆ ಅಂದು ಚೇಷ್ಟೆ ಮಾಡಿದವರೂ ಇಂದು ಸುಧೀರ ಶೆಟ್ಟಿಯವರ ಶ್ರಮಸಾಧನೆಯನ್ನು ನೋಡಿ ಬೆರಗಾಗಿದ್ದಾರೆ.

ಮನಸ್ಸಿದ್ದರೇ ಮಾರ್ಗ, ಶಿಕ್ಷಣ ಪಡೆದ ಮೇಲೆ ಇನ್ನೊಂದು ಕಡೆ ಉದ್ಯೋಗ ಮಾಡಬೇಕೆಂದಿಲ್ಲ, ಅಚಲವಾದ ಗುರಿ, ಕೆಲಸದಲ್ಲಿ ಶ್ರದ್ದೆ ಮತ್ತು ಬದ್ದತೆ ಇದ್ದಲ್ಲಿ ಯಶಸ್ಸನ್ನು ಪಡೆಯಬಹುದು ಎನ್ನುವುದಕ್ಕೆ ಸುಧೀರ ಶೆಟ್ಟಿ ಸೂಕ್ತ ಉದಾಹರಣೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.