ಸ್ವಯಂ ಸ್ಫೂರ್ತಿಯಿಂದ ಬ್ರಹ್ಮೇತಿ ಕೆರೆ ಹೂಳೆತ್ತಿದ ಗ್ರಾಮಸ್ಥರು!

ಅಂತರ್ಜಲ ಹೆಚ್ಚಳಕ್ಕೆ ಪೂರಕ, ಸರ್ಕಾರ-ಸಂಘ-ಸಂಸ್ಥೆಗಳ ಸಹಾಯಕ್ಕೆ ಕೋರಿಕೆ 16 ಎಕರೆ ವಿಸ್ತೀರ್ಣದ ಕೆರೆ

Team Udayavani, Jun 23, 2019, 12:35 PM IST

uk-tdy-2..

ಯಲ್ಲಾಪುರ: ಬ್ರಹ್ಮೇತಿ ಕೆರೆ ಹೂಳೆತ್ತುತ್ತಿರುವುದು.

ಯಲ್ಲಾಪುರ: ಉಳ್ಳವರಿಂದ ಅತಿಕ್ರಮಣ, ಖುಲ್ಲಾಗೊಳಿಸುವುದಕ್ಕೆ ಇಲಖೆ ಹಿಂದೇಟು, ಹೀಗೆ ಹಲವು ಕಾರಣದಿಂದ ಮುಚ್ಚಿ ಹೋಗುವ ಹಂತ ತಲುಪಿದ್ದ ತಾಲೂಕಿನ ನಂದೊಳ್ಳಿ ಸಮೀಪದ ಕಾರಕುಂಕಿ ಬಳಿಯ ಇಡೀ ಊರಿಗೆ ಉಪಯೋಗವಾಗುವ ಪುರಾತನ ಬ್ರಹ್ಮೇತಿ ಕೆರೆ ಪುನರುಜ್ಜೀವನಕ್ಕೆ ಗ್ರಾಮಸ್ಥರೇ ಪಣ ತೊಟ್ಟಿದ್ದಾರೆ.

ಕಳೆದ 3-4 ವರ್ಷಗಳಿಂದ ಸ್ವಂತ ಖರ್ಚಿನಲ್ಲಿ ಕೆರೆಯ ಹೂಳೆತ್ತುವ ಮೂಲಕ ಕೆರೆ ನುಂಗಣ್ಣಗಳಿಂದ ಪಾರುಮಾಡಿ ಕೆರೆ ಜೀರ್ಣೋದ್ಧಾರ ಮಾಡುತ್ತಿದ್ದಾರೆ. ಈ ವರ್ಷವೂ ಕೆರೆಯ ಉಳಿವಿಗೆ ಅದರ ಉಪಯೋಗ ಪಡೆಯುವುದಕ್ಕೆ ಶ್ರಮಿಸಿದ್ದಾರೆ.

ನಂದೊಳ್ಳಿ ಗ್ರಾಮದ ಫಾರೆಸ್ಟ್‌ ಸ.ನಂ 108 ರಲ್ಲಿರುವ ಬ್ರಹ್ಮೇತಿ ಕೆರೆ ಶತಮಾನಗಳಷ್ಟು ಹಳೆಯದಾಗಿದ್ದು, 16 ಎಕರೆಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿದೆ. 25 ವರ್ಷಗಳ ಹಿಂದೆ ಜಿಲ್ಲಾ ಪರಿಷತ್‌ನಿಂದ ಒಡ್ಡು ನಿರ್ಮಿಸಿದ್ದು ಬಿಟ್ಟರೆ ನಂತರ ಸರ್ಕಾರದಿಂದ ಅಥವಾ ಅರಣ್ಯ ಇಲಾಖೆಯಿಂದ ಯಾವುದೇ ನಿರ್ವಹಣೆ ಕೈಗೊಂಡಿರಲ್ಲ. ಕಾರಣ ಕೆರೆಯಲ್ಲಿ ಹೂಳು ತುಂಬಿ ಮುಚ್ಚಿ ಹೋಗುವ ಸ್ಥಿತಿಯಲ್ಲಿತ್ತು. ಕೆರೆಯ ಒಂದು ಭಾಗ ಅತಿಕ್ರಮಣಕ್ಕೊಳಗಾಗಿದ್ದಲ್ಲದೇ, ಸುತ್ತಮುತ್ತ ಗಿಡ-ಗಂಟಿಗಳೆಲ್ಲ ಬೆಳೆದು ಕೆರೆಯ ಅಸ್ಥಿತ್ವವೇ ಇಲ್ಲದಂತಾಗಿದೆ. ಒಂದು ಅರ್ಥದಲ್ಲಿ ಕಾಗದಪತ್ರ ನೋಡಿಯೇ ಇದು ಕೆರೆ ಎನ್ನಬೇಕಾದ ಸ್ಥಿತಿ ಇತ್ತು.

ಸರಕಾರಕ್ಕೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ಬೇಸತ್ತ ಗ್ರಾಮಸ್ಥರು ಕೊನೆಗೆ ತಾವೇ ಕೆರೆಯ ಹೂಳೆತ್ತುವ ತೀರ್ಮಾನಕ್ಕೆ ಬಂದು ಕಳೆದ 4 ವರ್ಷಗಳಿಂದ ಬೇಸಿಗೆಯಲ್ಲಿ 15-20 ದಿನ ಶ್ರಮದಾನ ಮಾಡುತ್ತ ಬಂದಿದ್ದಾರೆ. ಈವರೆಗೆ ಹೂಳೆತ್ತಲು 12 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಲಾಗಿದ್ದು, ಎಲ್ಲವನ್ನೂ ಗ್ರಾಮಸ್ಥರೇ ಭರಿಸಿದ್ದಾರೆ. ಆದರೆ ಅಷ್ಟು ದೊಡ್ಡ ಕೆರೆಯ ಹೂಳೆತ್ತುವ ಕಾರ್ಯ ಜನರ ವಂತಿಗೆಯೊಂದರಿಂದಲೆ ಖಂಡಿತಾ ಸಾಧ್ಯವಿಲ್ಲ.

ಈ ಬಾರಿಯೂ 15 ದಿನಗಳಿಂದ ಗ್ರಾಮಸ್ಥರು ಕೆರೆ ಹೂಳೆತ್ತುತ್ತಿದ್ದು, ಲಕ್ಷಾಂತರ ರೂ. ವ್ಯಯಿಸಿದ್ದಾರೆ. ಗ್ರಾಮಸ್ಥರಾದ ಜನಾರ್ದನ ಬೆಳ್ಳಿ, ಗೋಪಾಲಕೃಷ್ಣ ಭಟ್ಟ, ಶಿವರಾಮ ಭಟ್ಟ, ನಾರಾಯಣ ಭಟ್ಟ, ನಾರಾಯಣ ಭಾಗ್ವತ, ಶ್ರೀಪಾದ ಭಟ್ಟ ಕಾರಕುಂಕಿ, ವಿಶ್ವನಾಥ ಹೆಗಡೆ, ಕೇಶವ ಹೆಗಡೆ, ನರಸಿಂಹ ಮಂಗಳಾರ್ತಿ ಇತರರು ಕಾಮಗಾರಿ ನಡೆಸಿದ್ದಾರೆ.

ಇಡೀ ಕೆರೆಯ ಹೂಳೆತ್ತಲು ಮತ್ತಷ್ಟು ಹಣದ ಅಗತ್ಯವಿದ್ದು, ಬಡ, ಮಧ್ಯಮ ವರ್ಗದ ಕೃಷಿಕರಾದ ಗ್ರಾಮಸ್ಥರಿಗೆ ಅದನ್ನು ಭರಿಸುವ ಶಕ್ತಿಯಿಲ್ಲ. ಅದಕ್ಕಾಗಿ ಸರ್ಕಾರದ ನೆರವು ಯಾಚಿಸುತ್ತಿದ್ದಾರೆ. ಶ್ರಮಿಸುತ್ತಿರುವ ಗ್ರಾಮಸ್ಥರ ಜೊತೆ ಸರ್ಕಾರ, ಸಂಘ-ಸಂಸ್ಥೆಗಳು ಕೈಜೋಡಿಸುವ ಅಗತ್ಯವಿದೆ ಎಂಬುದು ಗ್ರಾಮಸ್ಥರ ಕೋರಿಕೆಯಾಗಿದೆ.

ಶಾಸಕ ಶಿವರಾಮ ಹೆಬ್ಟಾರ್‌ ಅರಣ್ಯ ಇಲಾಖೆಯ ಕೆರೆ ಸಂಜೀವಿನಿ ಯೋಜನೆಯಡಿ 1 ಲಕ್ಷ ರೂ ನೀಡಿದ್ದರು. ನಂತರ ಎಲ್ಎಸ್‌ಎಂಪಿ ಸೊಸೈಟಿಯೂ ನೆರವು ನೀಡಿತ್ತು. ಇದೀಗ ಟಿಎಂಎಸ್‌ ಸಂಸ್ಥೆ, ತಾಲೂಕು ಪಂಚಾಯತ್‌ ಸಹ ನೆರವಿನ ಭರವಸೆ ನೀಡಿವೆ.

 

•ನರಸಿಂಹ ಸಾತೊಡ್ಡಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.