Bhatkala: ಪ್ರತ್ಯೇಕ ಪ್ರಕರಣ: ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದುರ್ಮರಣ
Team Udayavani, Oct 24, 2023, 2:15 PM IST
ಸಾಂದರ್ಭಿಕ ಚಿತ್ರ
ಭಟ್ಕಳ: ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿರುವ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಇಬ್ಬರು ಕೂಡ ಬಾಗಲಕೋಟೆ ಜಿಲ್ಲೆಯವರೆಂದು ತಿಳಿದು ಬಂದಿದೆ. ಅವರಲ್ಲಿ ಓರ್ವ ಮಂಜುನಾಥ ರಮೇಶ ಹಡಪದ(25) ಬಾಗಲಕೋಟೆ ಜಿಲ್ಲೆಯ ನೀರ ಬೂದಿಹಾಳನವನಾಗಿದ್ದು, ಹಾಲಿ ನವನಗರದಲ್ಲಿ ವಾಸವಾಗಿದ್ದನು. ಈತ ತನ್ನ ಕುಟುಂಬದವರೊಂದಿಗೆ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ವೇಳೆ ಕುಟುಂಬ ಸದಸ್ಯರೊಂದಿಗೆ ಸಮುದ್ರದಲ್ಲಿ ಈಜುತ್ತಿದ್ದ ಸಂದರ್ಭ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಇನ್ನೋರ್ವ ಕೃಷ್ಣಪ್ಪ ಕರಿಯಪ್ಪ ಹರಕಂಗಿ (18) ಬಾಗಲಕೋಟೆ ಜಿಲ್ಲೆಯ ಲೋಕಾಪುರ ನಿವಾಸಿ. ಈತ ತನ್ನ ಧಾರವಾಡ ಮೂಲದ ನಾಲ್ಕು ಜನ ಸ್ನೇಹಿತರೊಂದಿಗೆ ಮುರುಡೇಶ್ವ ಪ್ರವಾಸಕ್ಕೆ ಬಂದಿದ್ದ. ಮೊದಲು ಈ ಗುಂಪು ದೇವಸ್ಥಾನದ ಎಡ ಬದಿಯ ಸಮುದ್ರದಲ್ಲಿ ಆಟವಾಡುತ್ತಿದ್ದವರು ನಂತರ ದೇವಸ್ಥಾನದ ಎಡ ಬದಿಯ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಕೃಷ್ಣಪ್ಪ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ.
ಸಾಲು ಸಾಲು ರಜೆದ ಹಿನ್ನೆಲೆ ಮುಡೇಶ್ವರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಎಷ್ಟು ಬಾರಿ ಸೂಚಿಸಿದರೂ ಇದನ್ನು ಧಿಕ್ಕರಿಸಿ ಸಮುದ್ರ ಇಳಿದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಕುರಿತು ಮುರುಡೇಶ್ವ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ