ಉತ್ತರ ಕನ್ನಡಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಸಿಎಂಗೆ ಒತ್ತಾಯ


Team Udayavani, Aug 29, 2021, 1:59 PM IST

Separate Milk Union for Uttara Kannada

ಶಿರಸಿ: ಅನೇಕ ಸಮಸ್ಯೆಗಳ ನಡುವೆಯೂ ಹೈನುಗಾರಿಕೆಯಲ್ಲಿ ಪಳಗಿದ ಉತ್ತರ ಕನ್ನಡ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಧಾರಾವಾಡ ಹಾಲು ಒಕ್ಕೂಟ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಯಿತು.

ಹಾವೇರಿಯಲ್ಲಿ ಧಾರವಾಡ ಒಕ್ಕೂಟದ ನೂತನ ಘಟಕವೊಂದರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಬೊಮ್ಮಾಯಿ ಅವರನ್ನು ಅಧ್ಯಕ್ಷ ಶಂಕರ ಮುಗದ ಅವರ ಜೊತೆಯಲ್ಲಿ ಭೇಟಿ ಮಾಡಿದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಂಕರ ಹೆಗಡೆ, ಪರಮೇಶ್ವರ ನಾಯ್ಕ  ಅವರು ಬಹು ಕಾಲದ ಬೇಡಿಕೆಯಾದ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ನೆರವಾಗಬೇಕು. ಕ್ಷೀರದ ಸಾಗಾಟದ ವೆಚ್ಚ ತಗ್ಗಿಸಲೂ ಹಾಗೂ ಹೈನುಗಾರರಿಗೆ ಇನ್ನಷ್ಟು ಉತ್ತೇಜಿಸಲು ಒಕ್ಕೂಟ ಅನಿವಾರ್ಯವಾಗಿದೆ ಎಂದು ಮನವಿ ಮಾಡಿದ್ದಾರೆ.

ಕೊರತೆ ನೀಗಿಸಿ: ಜಿಲ್ಲೆಯಲ್ಲಿ 250 ಕ್ಕೂ ಅಧಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಇವೆ. ವರ್ಷದ ಎಲ್ಲ ದಿನವೂ ಕೋವಿಡ್ ಸಂಕಷ್ಟದ ಕಾಲದಲ್ಲೂ ಇವು ಬೆಳಿಗ್ಗೆ ಹಾಗೂ ಇಳಿಹೊತ್ತು ಕೆಲಸ ಮಾಡುತ್ತಿವೆ. ಆದರೆ, ಸಂಘಗಳಿಗೆ ಕಟ್ಟಡಗಳ ಕೊರತೆ ಇದೆ. ಬಾಡಿಗೆ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿವೆ ಶೇ.80ರಷ್ಟು ಸಂಘಗಳಿಗೆ ಸ್ವಂತ ಕಟ್ಟಡಗಳು ಇಲ್ಲ. ಸ್ವಂತ ಕಟ್ಟಡ ಇಲ್ಲದ ಪರಿಣಾಮ ಆಧುನಿಕ ಉಪಕರಣ ಬಳಸಿ ಗುಣಮಟ್ಟದ ಹಾಲು ಸಂಗ್ರಹಣೆಗೆ ಅಡಚಣೆ ಆಗುತ್ತವೆ. ಅವುಗಳ ಭದ್ರತೆಗೂ ಕೊರತೆ ಆಗುತ್ತದೆ ಈ ಸಮಸ್ಯೆ ನಿವಾರಣೆಗ ನೆರವಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಹಾಲು ಸಂಘಗಳ ನೂತನ ಕಟ್ಟಡ ಕಟ್ಟಲು ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಅನುದಾನ ಬಳಕೆಗೆ ಅನುಮತಿ ಈವರೆಗೆ ಇಲ್ಲ. ಇದಕ್ಕೆ ಅವಕಾಶ ನೀಡಿದರೆ ಈ ಸಮಸ್ಯೆ ನೀಗುತ್ತದೆ ಎಂದು ಒತ್ತಾಯಿಸಿರುವ ಕೆಶಿನ್ಮನೆ ನಿಯೋಗ, ಜಿಲ್ಲೆಯ ಯಲ್ಲಾಪುರ, ಮುಂಡಗೋಡ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳು ಈಗಾಗಲೇ ಗುಡ್ಡಗಾಡು ತಾಲೂಕುಗಳಾಗಿವೆ. ಇಲ್ಲಿ ಸಾರಿಗೆ ಸಂಪರ್ಕಗಳೂ ಕಷ್ಟವಾಗುತ್ತವೆ. ಹಾಲು ಸಂಘಗಳಿಗೆ ಕ್ಷೀರ ತಂದು ಕೊಡಲು ಸಮಸ್ಯೆ ಆಗುತ್ತವೆ. ಈ ಕಾರಣದಿಂದ ಆದ್ಯತೆ ವಲಯ ಎಂದು ಘೋಷಣೆ ಮಾಡಿಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

ಕೈ ಹಿಡಿಯಲು ಒತ್ತಾಯ: ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಮುಖ್ಯ ಕಾರ್ಯ ನಿರ್ವಾಹಕರಿಗೆ ಕನಿಷ್ಠ ವೇತನ ಹಾಗೂ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಸೇರಿಸಿ ಅಲ್ಲಿನ ಸೌಲಭ್ಯ ಒದಗಿಸಲು ಒತ್ತಾಯಿಸಿದ್ದಾರೆ.

ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಮುಖ್ಯ ಕಾರ್ಯ ನಿರ್ವಾಹಕರು ದಿನವೊಂದಕ್ಕೆ 100 ರೂಪಾಯಿಗೂ ಕಡಿಮೆ ದರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರಕಾರದಿಂದ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನ ಸೇರಿದಂತೆ ಉಳಿದ ಮಾಹಿತಿ ನೀಡಲು ಕನಿಷ್ಠ 6 ತಾಸುಗಳ ಕಾರ್ಯ ಅವರಿಗೆಲ್ಲ ಆಗುತ್ತವೆ. ಅವರಿಗೆ ಕನಿಷ್ಠ ವೇತನ ಸಿಗುವಂತಾಗಬೇಕು. ಕಾರ್ಮಿಕ ಇಲಾಖೆಯ ಅಡಿಯಲ್ಲಿ ಸೇರಿಸಿ ಅಲ್ಲಿನ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಸೆಂಟ್ರಲ್‌ ವಾರ್ಡ್‌ಗಳ ಚಿತ್ರಣ| ಅಭಿವೃದ್ಧಿ ಚಿತ್ರಣದೋಳ್‌ ಸಮಸ್ಯೆಗಳ ಸರಮಾಲೆ

ಮಾಹಿತಿ ಪಡೆದುಕೊಂಡಿರುವ ಸಿಎಂ ಅವರು ಹೈನುಗಾರರ ಸಮಸ್ಯೆಗೆ ನಿವಾರಣೆಗೆ ಸ್ಪಂದಿಸುವದಾಗಿ ಭರವಸೆ ನೀಡಿದ್ದಾರೆ.ಪ್ರತ್ಯೇಕ ಒಕ್ಕೂಟ, ಶಾಸಕರ ಅನುದಾನ ಬಳಕೆಗೆ ಅನುಮತಿ ಕಾರ್ಯದರ್ಶಿಗಳಿಗೆ ನೆರವು ನಮ್ಮ ಮುಖ್ಯ ಬೇಡಿಕೆ ಆಗಿದ್ದವು.

ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಒಕ್ಕೂಟ ನಿರ್ದೇಶಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.