ಇಡೀ ಜಗದಲ್ಲಿ ಗೋವಿನ ಸೇವೆ ನಡೆಯಲಿ

ಗೋಪಾಲ ಗೌರವ ಪ್ರಶಸ್ತಿ ಗೋವುಗಳ ಸಂರಕ್ಷಣೆಗೆ ಪ್ರೇರಣೆಯಾಗಲಿ

Team Udayavani, May 10, 2022, 4:52 PM IST

20

ಸಿದ್ದಾಪುರ: ಈ ಜಗತ್ತನ್ನು ಉಳಿಸಿರುವ ಸಪ್ತ ತತ್ವಗಳಲ್ಲಿ ಮೊದಲ ಸ್ತಂಭವೇ ಗೋವು. ಇಂತಹ ಗೋವಿನ ಸೇವೆ ಈ ಜಗದಲ್ಲಿ ನಡೆಯಬೇಕು ಎಂದು ರಾಮಚಂದ್ರಾಪುರಮಠದ ರಾಘವೇಶ್ವರಭಾರತೀ ಶ್ರೀಗಳು ಹೇಳಿದರು.

ತಾಲೂಕಿನ ಭಾನ್ಕುಳಿ ಶ್ರೀರಾಮದೇವ ಮಠ-ಗೋಸ್ವರ್ಗದಲ್ಲಿ ಜರುಗಿದ ಶಂಕರಪಂಚಮೀ ಉತ್ಸವದಲ್ಲಿ ಶ್ರೀಮಠದ ಕಾಮದುಘಾ ಟ್ರಸ್ಟ್‌ ಹಾಗೂ ದಿನೇಶ ಶಹ್ರಾ ಫೌಂಡೇಶನ್‌ ಮುಂಬೈ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಿದ್ದ ಕಾರ್ಯಕ್ರಮದಲ್ಲಿ ಗೋವಿನ ಸಂರಕ್ಷಣೆಯಲ್ಲಿ ಹತ್ತಾರು ರೀತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಾಡಿನ ವಿವಿಧ ಭಾಗಗಳ ಐವರು ಸಾಧಕರಿಗೆ ಗೋಪಾಲ ಗೌರವ-2022 ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.

ಗೋಪಾಲ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡುವ ಮೂಲಕ ಗೋಸಂರಕ್ಷಣೆಯಲ್ಲಿ ಉಳಿದವರಿಗೂ ಆಸಕ್ತಿ ಹೆಚ್ಚಲಿ ಎಂಬ ಉದ್ದೇಶವೂ ಅಡಗಿದೆ. ಇಂದು ಇಂಧನದ ಕೊರತೆ ತಲೆದೋರುತ್ತಿದ್ದು 20 ಕಿ.ಮಿ.ವರೆಗಿನ ದೂರ ಕ್ರಮಿಸಲು ಹಿಂದಿನಂತೆ ಎತ್ತಿನ ಗಾಡಿ ಬಳಸುವುದು ಸೂಕ್ತ. ಇದರಿಂದ ಪರಿಸರಕ್ಕೂ ಹಾನಿಯಾಗುವುದಿಲ್ಲ ಎಂದರು.

ಗೋಸ್ವರ್ಗ ನಮ್ಮೆಲ್ಲರ ಸಂಪತ್ತು. ದೇಶಕ್ಕೇ ಗೋವುಗಳನ್ನು ಸಾಕಲು ಪ್ರೇರೇಪಣೆ ನೀಡುವ ತಾಣ ಗೋಸ್ವರ್ಗ. ಇಂತಹ ಗೋಸ್ವರ್ಗಗಳು ಜಿಲ್ಲೆ ಜಿಲ್ಲೆಗಳಲ್ಲೂ ತಲೆಯೆತ್ತುವಂತಾಗಲಿ. ಗೋ ಸಂತತಿಯಿಂದ ದೇಶಕ್ಕೆ ಸುಭಿಕ್ಷ ಲಭಿಸಲಿ ಎಂದರು.

ಈ ಸಂದರ್ಭದಲ್ಲಿ ಗೋಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ತುಮಕೂರು ಜಿಲ್ಲೆ ತಿಪಟೂರಿನ ವಿನಯ ಮಡೆನೂರು, ಗೋ ಆಧಾರಿತ ಕೃಷಿಯಲ್ಲಿ ಸಾಧನೆ ಮಾಡಿರುವ ಮಂಗಳೂರ ಜಿಲ್ಲೆ ಪುತ್ತೂರಿನ ಪ್ರವೀಣ ಸರಳಾಯ, ಪಾರಂಪರಿಕ ಗೋಸಾಕಣೆ ಮಾಡುತ್ತಿರುವ ಚಿತ್ರದುರ್ಗ ಜಿಲ್ಲೆ ಸೂರಮ್ಮನಹಳ್ಳಿಯ ಕಿಲಾರಿ ಎತ್ತಿನ ಸಣ್ಣೊಬಯ್ಯ, ಗೋತಳಿ ಸಂವರ್ಧನೆ ಮಾಡುತ್ತಿರುವ ಮಂಡ್ಯದ ರವಿ ಪಟೇಲ, ಗೋ ಆಧಾರಿತ ಉದ್ಯಮವನ್ನು ಯಶಸ್ವಿಯಾಗಿ ನಡೆಸುತ್ತಿರುವ ಮೈಸೂರ ಕೆ.ಆರ್‌.ನಗರದ ದೇಸಿರಿ ಸಂಸ್ಥೆಗೆ ರಾಘವೇಶ್ವರ ಭಾರತೀ ಶ್ರೀಗಳು ಗೋಪಾಲ ಗೌರವ ಪ್ರಶಸ್ತಿ ಅನುಗ್ರಹಿಸಿದರು.

ಮುಂಬೈನ ದಿನೇಶ ಶಹ್ರಾ ಫೌಂಡೇಶನ್‌ನ ಮುಖ್ಯಸ್ಥ ದಿನೇಶ ಶಹ್ರಾ, ಕಾಮದುಘಾ ಟ್ರಸ್ಟಿನ ಡಾ|ವೈ.ವಿ. ಕೃಷ್ಣಮೂರ್ತಿ ಪಾಲ್ಗೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ ಕುಮಾರ ಕೊಡ್ಗಿ, ಚೆನ್ನೈನ ಎಸ್ಕೈ ಹೋಂ ಕ್ರಾಫ್ಟ್ಸ ಪಾಲುದಾರ ಎಸ್‌.ವಿಜಯರಾಘವನ್‌, ಯುಎಇಯ ಎಕ್ಸಪೋವೈಡ್‌ ಗ್ಲೋಬಲ್‌ ಟ್ರೇಡಿಂಗ್‌ ನಿರ್ದೇಶಕ ಶ್ರೀನಾಥ ವೆಂಕಟರಮಣನ್‌, ಚೆನ್ನೈನ ಎಸ್ಕೈ ಕಾರ್ಟ್ಟೋನ್ಸ ನಿರ್ದೇಶಕ ಎ.ಗಣೇಶನ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಗೋಪಾಲ ಗೌರವ ಸ್ವೀಕರಿಸಿದ ವಿನಯ ಮಡೆನೂರ ಮಾತನಾಡಿದರು.

ಭಾಗ್ಯಶ್ರೀ ಭಟ್ಟ ಪ್ರಶಸ್ತಿ ಪತ್ರ ವಾಚಿಸಿದರು. ಮಂಡಲ ಅಧ್ಯಕ್ಷ ಮಹೇಶ ಭಟ್ಟ ಚಟ್ನಳ್ಳಿ ಇತರರು ನಿರ್ವಹಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.