ಧನಗರ ಗೌಳಿಗರ ಶಿಲ್ಲಂಗಾನ ಹಬ್ಬ 

ಗೌಳಿ ಜನಾಂಗದವರಿಂದ ಗಜ ಕುಣಿತ ಪ್ರದರ್ಶನ-ಪಾರಂಪರಿಕೆ ಪೂಜೆ ವಿಶೇಷ 

Team Udayavani, Oct 13, 2021, 8:52 PM IST

fcyghdtytr

ವರದಿ: ಮುನೇಶ ಬಿ. ತಳವಾರ

ಮುಂಡಗೋಡ: ತಾಲೂಕಿನ ಧನಗರ ಗೌಳಿ ಜನಾಂಗದವರು ನವರಾತ್ರಿ ಉತ್ಸವವನ್ನು ಬಹಳ ವಿಶೇಷ ರೀತಿಯಲ್ಲಿ ಅದ್ದೂರಿಯಾಗಿ ಆಚರಿಸುತ್ತಾ ಬರುತ್ತಿರುವುದು ಗಮನ ಸೆಳೆಯುತ್ತದೆ.

ತಾಲೂಕಿನ ಮೈನಳ್ಳಿ, ಬಡ್ಡಿಗೇರಿ, ಚಳಗೇರಿ, ಕಳಕಿಖಾರೆ, ಕುದುರೆನಾಳ ಮತ್ತು ಬ್ಯಾನಳ್ಳಿ ಸೇರಿದಂತೆ ಒಟ್ಟು 32 ಹಳ್ಳಿಗಳಲ್ಲಿ ವಾಸವಾಗಿರುವ ಧನಗರ ಗೌಳಿ ಜನಾಂಗವು ಮೂಲತಃ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದವರು. ಇವರ ಮೂಲ ಕಸುಬು ಹೈನುಗಾರಿಕೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಈ ಜನಾಂಗದ ಮೂಲ ಕಸುಬು ಹೈನುಗಾರಿಕೆ ನಶಿಸುತ್ತಾ ಬಂದಿದೆ. ಇದಕ್ಕೆ ಮುಖ್ಯ ಕಾರಣ ಹಲವಾರು. ಕೆಲ ಅರಣ್ಯ ಸಿಬ್ಬಂದಿ ಅರಣ್ಯದಲ್ಲಿ ಹಸು ಹಾಗೂ ಎಮ್ಮೆಗಳನ್ನು ಮೇಯಿಸಲು ಬಿಡದಿರುವುದು, ಮೇವು ಹಾಗೂ ನೀರಿನ ಕೊರತೆ ಇತ್ಯಾದಿ. ಈ ಹಿಂದೆ ನೂರಾರು ಎಮ್ಮೆ ಹಾಗೂ ಹಸುಗಳನ್ನು ಸಾಕುತ್ತಿದ್ದರು. ಆದರೆ ಈಗ ಇವು ಸಂಖ್ಯೆ ಕ್ಷೀಣಿಸುತ್ತಾ ಬಂದಿದೆ.

ದಸರಾ ಮುಗಿದ ಮಾರನೇ ದಿನ ಆಚರಿಸುವ ವಿಶೇಷ ಹಬ್ಬವೇ ಶಿಲ್ಲಂಗಾನ. ಇದರ ವಿಶೇಷತೆ ಎಂದರೆ ನಮ್ಮ ಊರಿಗೆ ಒಳ್ಳೆಯದಾಗಲಿ ದನಕರುಗಳಿಗೆ ರೋಗ ಬರದಂತಿರಲಿ ಎಂದು ಹರಕೆ ತೀರಿಸುವುದು. ಇದನ್ನು ಒಂದು ಊರಿನಲ್ಲಿ ಹಮ್ಮಿಕೊಂಡು ಅಕ್ಕ ಪಕ್ಕದ ಊರುಗಳಿಗೆ ತಾಂಬೂಲ ಕೊಟ್ಟು ಜನರನ್ನು ಆಮಂತ್ರಿಸಲಾಗುತ್ತದೆ. ಆಮಂತ್ರಣ ಸ್ವೀಕರಿಸಿ ನೂರಾರು ಜನ ಬೇರೆ ಬೇರೆ ಊರುಗಳಿಂದ ಬಂದಿರುತ್ತಾರೆ. ಮಹಿಳೆಯರು ಮಡಕೆಯಲ್ಲಿ ಮಜ್ಜಿಗೆ ಮತ್ತು ಅದರ ಮೇಲೊಂದು ತೆಂಗಿನಕಾಯಿ ಇಟ್ಟುಕೊಂಡು ಮತ್ತು ಪುರುಷರು ವಾದ್ಯಗಳ ಮೂಲಕ ಸ್ವಾಗತ ಮಾಡುತ್ತಾರೆ.

ಶುಭ್ರ ಶ್ವೇತ ವರ್ಣದ ಬಟ್ಟೆ ಧರಿಸಿ ತಲೆಗೆ ಪಟಗ ಸುತ್ತಿಕೊಂಡು ಗಜ ಕುಣಿತ ಕುಣಿಯುತ್ತಾ ಬನ್ನಿ ಗಿಡಕ್ಕೆ ಹೋಗಿ ಮೊದಲು ಖಡ್ಗದಿಂದ ಬನ್ನಿ ಕೊಯ್ದು ನಂತರ ಬನ್ನಿಯನ್ನು ಒಬ್ಬರಿಗೊಬ್ಬರು ವಿನಿಮಯ ಮಾಡಿಕೊಂಡು ಶುಭಾಶಯ ಕೋರುತ್ತಾರೆ. 8ನೇ ದಿನ ರಾತ್ರಿ ಇಡೀ ಜಾಗರಣೆ ಮಾಡಿ ಊರಿನವರೆಲ್ಲಾ ಸೇರಿ ಮುರಳಿ ವಾದನ, ಗಜ ನೃತ್ಯ ಮಾಡಿ ಪ್ರತಿಯೊಬ್ಬರ ಮನೆಗೆ ಹೋಗಿ ಆಯುಧ ಪೂಜೆ ಮಾಡುವರು. ಪೂಜೆ ಪಠಣಗಳೊಂದಿಗೆ ಹರಹರ ಚಾಂಗಬಲಾ (ಎಲ್ಲರಿಗೂ ಶುಭವಾಗಲಿ) ಎಂಬ ಘೋಷ ವಾಕ್ಯದೊಂದಿಗೆ ಜಯಕಾರ ಹಾಕುತ್ತಾರೆ. ಒಂದೇ ತಟ್ಟೆಯಲ್ಲಿ ಒಂದೊಂದು ತುತ್ತು ಸುಮಾರು 15 ಜನ ಸೇರಿ ಸ್ವೀಕಾರ ಮಾಡುತ್ತಾರೆ. ವಾದ್ಯಗಳೊಂದಿಗೆ ವಿವಿಧ ರೀತಿಯ ನೃತ್ಯ ಮಾಡುತ್ತಾ ಶಿಲ್ಲಂಗಾನದ ಹಲವಾರು ವಿಧಿ ವಿಧಾನಗಳನ್ನು ನೆರವೇರಿಸಿ ಊರುಗಳಿಗೆ ತೆರಳುತ್ತಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.