ಬೇಡಿಕೆ ಈಡೇರುವವರೆಗೂ ಹೋರಾಟ
Team Udayavani, Feb 4, 2019, 10:56 AM IST
ಶಿರಸಿ: ಅರಣ್ಯ ಅತಿಕ್ರಮಣದಾರರಿಗೆ ಸಂಬಂಧಿಸಿದ ಆರು ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸಲು ಆಗ್ರಹಿಸಿ ಫೆ.6 ರಂದು ಕಾರವಾರ ಚಲೋ ಸಂಘಟಿಸಲಾಗಿದ್ದು ಬೇಡಿಕೆಗೆ ಸೂಕ್ತ ಪರಿಹಾರ ಸಿಗುವವರೆಗೂ ಜಿಲ್ಲಾಧಿಕಾರಿ ಕಚೇರಿ ಆವರಣ ಬಿಟ್ಟು ಹಿಂದಿರುಗಲಾರೆವು ಎಂದು ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಹೇಳಿದ್ದಾರೆ.
ಅವರು ರವಿವಾರ ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗೆ ಬರೆದಿರುವ 6 ಪ್ರಮುಖ ಬೇಡಿಕೆಗಳ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಅರಣ್ಯ ಹಕ್ಕು ಕಾಯಿದೆಯಲ್ಲಿ ತಿರಸ್ಕರಿಸಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸಿ ಅರಣ್ಯವಾಸಿಗಳಿಗೆ ಹಕ್ಕನ್ನು ಒದಗಿಸಬೇಕು. ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ಕಾಯಿದೆ ಅಡಿ ಹಕ್ಕನ್ನು ಪಡೆಯಲು ವಿಫಲಗೊಂಡವರಿಗೆ ಬದಲೀ ವ್ಯವಸ್ಥೆ ನೀಡಬೇಕು. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಹಕ್ಕು ಪಡೆದ ಅತಿಕ್ರಮಣದಾರರ ಕಂದಾಯ ಮತ್ತು ಅರಣ್ಯ ದಾಖಲೆಯಲ್ಲಿ ಹಕ್ಕನ್ನು ನಮೂದಿಸಬೇಕು, ನಗರ ಅತಿಕ್ರಮಣಕ್ಕೆ ಸಂಬಂಧಿಸಿ ಅರಣ್ಯ ಅತಿಕ್ರಮಣದಾರರ ಅರ್ಜಿಯನ್ನು ಮಂಜೂರಿಗೆ ಶೀಘ್ರದಲ್ಲಿ ಒಳಪಡಿಸಬೇಕು. ಅರಣ್ಯಹಕ್ಕು ಕಾಯಿದೆ ಅರ್ಜಿ ಮತ್ತು ಮೇಲ್ಮನವಿ ಮಂಜೂರಿ ಪ್ರಕ್ರಿಯೆಯಲ್ಲಿ ಅಥವಾ ವಿಚಾರಣೆಯಲ್ಲಿ ಇರುವಾಗ ಕರ್ನಾಟಕ ಅರಣ್ಯ ಕಾಯಿದೆ ಕಲಂ: 64-ಎ ಅಡಿಯಲ್ಲಿ ಒಕ್ಕಲೆಬ್ಬಿಸುವ ಪ್ರಕ್ರಿಯೆ ತಕ್ಷಣದಿಂದ ಸ್ಥಗಿತಗೊಳಿಸಲು ಅರಣ್ಯಾಧಿಕಾರಿಗಳಿಗೆ ಆದೇಶಿಸಬೇಕು.
ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗೆಹರಿಸುವ ದಿಶೆಯಲ್ಲಿ ಹೋರಾಟಗಾರರ ವೇದಿಕೆಯ ಸಮಕ್ಷಮ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಜರುಗಿಸಬೇಕು ಎಂದು ಆಗ್ರಹಿಸಿದರು. ವಿವಿಧ ವಿಭಾಗದ ಸಂಚಾಲಕರಾದ ಇಬ್ರಾಹಿಂ ನಬೀಸಾಬ್, ಉದಯ ನಾಯ್ಕ, ಮಂಜುನಾಥ ಬಿ. ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ