ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ

ಲಕ್ಷ ರೂ. ವೆಚ್ಚದ ಹೂಗಳಿಂದ ಸರ್ವಧರ್ಮ ಸಮನ್ವಯತೆ ಸಾರುವ ಕಮಲ್‌ ಮಹಲ್‌ ಮಾದರಿ ನಿರ್ಮಾಣ

Team Udayavani, Jan 30, 2020, 4:49 PM IST

30-January-23

ಶಿರಸಿ: ಜಿಲ್ಲಾ ಮಟ್ಟದ 12ನೇ ಫಲಪುಷ್ಪ ಪ್ರದರ್ಶನಕ್ಕೆ ಇಲ್ಲಿಯ ತೋಟಗಾರಿಕಾ ಇಲಾಖೆ ಆವಾರ ಸಜ್ಜುಗೊಳ್ಳುತ್ತಿದೆ. ಫೆ.1ರಿಂದ 3ರವರೆಗೆ ನಡೆಯುವ ಪ್ರದರ್ಶನಕ್ಕೆ ಸಹಸ್ರಾರು ಫಲ-ಪುಷ್ಪಗಳು ಅರಳತೊಡಗಿವೆ.

ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಮಹಾವಿದ್ಯಾಲಯ, ಆತ್ಮ ಯೋಜನೆ ಸಹಯೋಗದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದ ವಿವರಣೆಯನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸತೀಶ ಹೆಗಡೆ ನೀಡಿದರು.

ಈ ಬಾರಿ ವಿಶೇಷವಾಗಿ ಸರ್ವಧರ್ಮ ಸಮನ್ವಯತೆ ಸಾರುವ ಕಮಲ್‌ ಮಹಲ್‌ ಮಾದರಿಯನ್ನು ಸುಮಾರು 1ಲಕ್ಷ ರು. ಮೊತ್ತದ ಹೂವುಗಳಿಂದ ಸಿದ್ಧಪಡಿಸಲಾಗುತ್ತದೆ. ಹಾಗೇ ಅಡಕೆ, ಅನಾನಸ್‌ ಮಂಟಪ, ಜಿಲ್ಲೆಯಲ್ಲಿರುವ ಪಕ್ಷಿ ಸಂಕುಲಗಳನ್ನು ಹೂವಿನಿಂದ ತಯಾರಿಸಲಾಗುತ್ತದೆ. ಚಂದ್ರಯಾನ-3 ರಾಕೆಟ್‌ ಹೂವಿನಿಂದ ಸಿದ್ಧಪಡಿಸುತ್ತೇವೆ. ವರ್ಟಿಕಲ್‌ ಗಾರ್ಡನ್‌ ಮಾದರಿಗಳು, ತರಕಾರಿ ಕೆತ್ತನೆ, ಮಾದರಿ ತರಕಾರಿ ಪ್ರಾತ್ಯಕ್ಷಿಕೆಗಳು, ವಿವಿಧ ಉದ್ಯಾನವನ ಮಾದರಿ, ವಿವಿಧ ಜಾತಿ ಹೂವುಗಳ ಜೋಡಣೆ ವಿಶೇಷತೆ ಫಲಪುಷ್ಪ ಪ್ರದರ್ಶನ ಒಳಗೊಂಡಿದೆ ಎಂದು ವಿವರಿಸಿದರು.

20ಅಡಿ ಉದ್ದ ಹಾಗೂ 20ಅಡಿ ಅಗಲದ ಪುಷ್ಪ ರಂಗೋಲಿ ಅನಾವರಗೊಳ್ಳಲಿದೆ. ಮುಖ್ಯವಾಗಿ ರಂಗೋಲಿಯಲ್ಲಿ ಅರಳಿಸುವ ಮೂಲಕ ಪೇಜಾವರ ಮಠದ ದಿ| ವಿಶ್ವೇಶತೀರ್ಥ ಸ್ವಾಮೀಜಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ ಎಂದರು.

ಪ್ರದರ್ಶನಕ್ಕೆ 12.87ಲಕ್ಷ ರೂ. ಅಂದಾಜಿಸಲಾಗಿದೆ. ಜಿಪಂ, ರಾಜ್ಯವಲಯ ಹಾಗೂ ಕೇಂದ್ರ ವಲಯದಿಂದ ಅನುದಾನ ದೊರೆಯಲಿದೆ. ಕೃಷಿ ಇಲಾಖೆ ಆತ್ಮ ಯೋಜನೆಯಡಿ ಅನುದಾನ ನಿರೀಕ್ಷೆಯಲ್ಲಿದ್ದೇವೆ ಎಂದರು.

ಪ್ರದರ್ಶನದಲ್ಲಿ 70ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ.
ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ಉಪಯೋಗವಾಗುವ ಯಂತ್ರೋಪಕರಣಗಳ ಪ್ರದರ್ಶನ, ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಸಾವಯವ ಉತ್ಪನ್ನಗಳ ಬಳಕೆ, ಸಸ್ಯಾಗಾರಗಳ ಮಳಿಗೆ, ಸಂಸ್ಕರಿಸಿದ ಪದಾರ್ಥಗಳ ಮಳಿಗೆ, ಕೃಷಿ ಸಂಬಂಧಿತ ಇಲಾಖೆಗಳ ಪ್ರದರ್ಶನ ಮಳಿಗೆಗಳಲ್ಲಿ ಪ್ರದರ್ಶಿಕೆಗಳನ್ನು ಪ್ರದರ್ಶಿಸಿ ರೈತರಿಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ ಎಂದರು. ಉದ್ಘಾಟನೆ: ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು ವಿವಿಧ ಜಾತಿ ಹೂವುಗಳು ಪಾಟ್‌ಗಳಲ್ಲಿ, ಮಡಿಗಳಲ್ಲಿ ಅರಳುತ್ತಿವೆ. ಹಾಗೇ ತರಕಾರಿ ಗಿಡಗಳು ಫಲ ನೀಡಿ ನಳನಳಿಸುತ್ತಿವೆ. ಹೂವಿನಿಂದ ಇನ್ನಷ್ಟು ಕಲಾಕೃತಿ ಜೋಡಿಸುವ ಕಾರ್ಯಕ್ಕೆ ಅಣಿಯಾಗಲಾಗಿದೆ.

ಫೆ.1 ರಂದು ಬೆಳಗ್ಗೆ 11ಕ್ಕೆ ಉದ್ಘಾಟನೆಗೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ್‌ ಹೆಬ್ಟಾರ್‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವಿ.ಎಂ. ಹೆಗಡೆ, ಮಧುಕರ ನಾಯ್ಕ, ಶಿವಕುಮಾರ್‌, ಪ್ರಶಾಂತ ಹೆಗಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.