ಶಿರಸಿ: ಕೆಡಿಸಿಸಿ ಬ್ಯಾಂಕ್ ನಿಂದ ದಿ. ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿ ಪ್ರದಾನ
Team Udayavani, Dec 18, 2021, 5:21 PM IST
ಶಿರಸಿ: ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೊ ಆಪರೇಟಿವ್ ( ಕೆಡಿಸಿಸಿ) ಬ್ಯಾಂಕ್ ಜಿಲ್ಲೆಯ ಉತ್ತಮ ಸಹಕಾರಿಗೆ ನೀಡುವ ದಿ. ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿಯನ್ನು ಅಂಕೋಲಾದ ಸಹಕಾರಿ ರಮಾನಂದ ನಾಯಕ ಹಾಗೂ ಸಹಕಾರಿ ನೌಕರ ಸುಬ್ರಾಯ ರೇವಣಕರ ಅವರಿಗೆ ಪ್ರದಾನ ಮಾಡಲಾಯಿತು.
ನಗರದ ಕೆಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಅಧ್ಯಕ್ಷ ಶಿವರಾಮ ಹೆಬ್ಬಾರ, ಉಪಾಧ್ಯಕ್ಷ ಮೋಹನದಾಸ ನಾಯಕ ಇತರರು ಪ್ರಶಸ್ತಿ ಪ್ರದಾನ ಮಾಡಿದರು.
ಸುಂದರ ರಾವ್ ಪಂಡಿತ ಪ್ರಶಸ್ತಿಗೆ ತ್ಯಾಗಲಿ ಸೇವಾ ಸಹಕಾರಿ ಸಂಘ ನಾಣಿಕಟ್ಟಾದ ಅಧ್ಯಕ್ಷ ಎನ್.ಬಿ.ಹೆಗಡೆ ಮತ್ತೀಹಳ್ಳಿ ಹಾಗೂ ಕಾರ್ಯದರ್ಶಿ ಸುಧಾಕರ ಹೆಗಡೆ ಅವರಿಗೆ ಪ್ರದಾನ ಮಾಡಲಾಯಿತು.
ಜಿಲ್ಲೆಯ 11 ಸಂಘಗಳಿಗೆ ತಾಲೂಕಾ ಮಟ್ಟದ ಉತ್ತಮ ಪ್ರಾಥಮಿಕ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಹಾಗೂ ನೂರರ ಸಾಲ ವಸೂಲಿ ಮಾಡಿದ 5 ಸಂಘಗಳು, 7 ಕೃಷಿಯೇತರ ಸಹಕಾರಿ ಸಂಘಗಳನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?