ಕೋವಿಡ್ ಸುಳ್ಳು ಸುದ್ದಿ ಮೇಲೆ ಕಿರುಚಿತ್ರ ನಿರ್ಮಾಣ: ಸಾಮಾಜಿಕ ಜಾಲತಾಣದಲ್ಲಿ ಹವಾ

ಸುಳ್ಳು ಸುದ್ದಿಯಿಂದ ಹಳ್ಳಿಗರ ತಲೆನೋವಿಗೆ ಕಾರಣವಾದ ವಿಷಯ ಮೇಲೆ ಚಿತ್ರ ನಿರ್ಮಾಣ-ಹವ್ಯಕ ಕನ್ನಡ ಸಂಭಾಷಣೆಯಲ್ಲಿ ಒಂಬ್ಬತ್ತು ನಿಮಿಷದ ಚಿತ್ರ

Team Udayavani, Jul 26, 2020, 9:33 AM IST

ಕೋವಿಡ್ ಸುಳ್ಳು ಸುದ್ದಿ ಮೇಲೆ ಕಿರುಚಿತ್ರ ನಿರ್ಮಾಣ: ಸಾಮಾಜಿಕ ಜಾಲತಾಣದಲ್ಲಿ ಹವಾ

ಶಿರಸಿ: ಕಳೆದೆರಡು ವಾರಗಳಿಂದ ಗ್ರಾಮೀಣ ಭಾಗಕ್ಕೂ ವ್ಯಾಪಿಸಿರುವ ಕೋವಿಡ್ ಸೋಂಕಿಗಿಂತ ಹೆಚ್ಚಾಗಿ ಸುಳ್ಳು ಸುದ್ದಿಗಳ ಹಾವಳಿಗಳೇ ಹಳ್ಳಿಗರ ತಲೆನೋವಿಗೆ ಕಾರಣವಾಗಿದ್ದನ್ನು ಕೇಂದ್ರೀಕರಿಸಿ ತಯಾರಾಗಿರುವ ಕಿರು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

ತಾಲೂಕಿನ ಓಣಿಕೇರಿ ಸಮೀಪದ ಜಾಡಿಮನೆಯ ಪ್ರಸಾದ ಹೆಗಡೆ ನೇತೃತ್ವದಲ್ಲಿ ತಯಾರಾದ 9 ನಿಮಿಷಗಳ ಕಿರುಚಿತ್ರ ಹವ್ಯಕ ಕನ್ನಡ ಸಂಭಾಷಣೆಯನ್ನೊಳಗೊಂಡಿದೆ. ಕೋವಿಡ್ ಅವಾಂತರ ಶೀರ್ಷಿಕೆಯ ಕಿರುಚಿತ್ರವನ್ನು ವಾರಗಳ ಅವಧಿಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ನೆಟ್ಟಿಗರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಅಶ್ವತ್ಥ ಕಟ್ಟೆ, ಡೇರಿ ಹಾಗೂ ಶಾಲೆ ಕಟ್ಟೆಗಳಲ್ಲಿ ಗ್ರಾಮಸ್ಥರು ಒಟ್ಟಾಗಿ ಕುಳಿತು ಲೋಕಾಭಿರಾಮ ಸಂಗತಿಗಳನ್ನು ಚರ್ಚಿಸುತ್ತಾರೆ. ಅದರಂತೆ ಕಳೆದೆರಡು ತಿಂಗಳುಗಳಿಂದ ಕೋವಿಡ್ ಕುರಿತ ಮಾತುಕತೆಯೆ ಹೆಚ್ಚಾಗಿದೆ. ಆದರೆ, ಈಚೆಗೆ ಗ್ರಾಮೀಣ ಪ್ರದೇಶಕ್ಕೆ ವ್ಯಾಪಿಸಿರುವ ಕೋವಿಡ್ ಸೋಂಕಿನ ಕುರಿತು ಮಾಧ್ಯಮಗಳಲ್ಲಿ ಎಲ್ಲಿಯೂ ಬಾರದ ಇಲ್ಲಸಲ್ಲದ ಸುಳ್ಳು ಸುದ್ದಿಗಳು ಎಲ್ಲೆಡೆಯಲ್ಲಿ ಕೇಳಿಬರುತ್ತಿದೆ. ನಾಲ್ಕೈದು ದಿನಗಳು ಕಳೆದ ನಂತರ ಸತ್ಯದ ಅರಿವಾಗಿ ಪೆಚ್ಚು ಮೋರೆ ಹಾಕುವ ಪರಿಸ್ಥಿತಿ ಹಳ್ಳಗಳಲ್ಲಿ ಸೃಷ್ಟಿಯಾಗಿದೆ. ಇಂತಹ ಸುಳ್ಳು ಸುದ್ದಿಗಳಿಂದ ಉಂಟಾಗುವ ತೊಂದರೆ, ಗೊಂದಲಗಳನ್ನು ಕೇಂದ್ರೀಕರಿಸಿ ಹವ್ಯಕ ಸಂಭಾಷಣೆಯೊಂದಿಗೆ ಮೊಬೈಲ್‌ ಕ್ಯಾಮೆರಾ ಮೂಲಕವೇ ಕೋವಿಡ್ ಅವಾಂತರ ಕಿರುಚಿತ್ರ ಮಾಡಲಾಗಿದೆ. ಜಾಡಿಮನೆಯ ಸುಮಾರು ಹತ್ತಕ್ಕೂ ಅಧಿಕ ಮಂದಿ ಕಿರುಚಿತ್ರದಲ್ಲಿ ದನಿಗೂಡಿಸಿದ್ದಾರೆ.

ಮೈಸೂರಿನಲ್ಲಿ ಸದ್ಯ ಮೆಕ್ಯಾನಿಕಲ್‌ ಇಂಜಿನಿಯರ್‌ ಓದುತ್ತಿರುವ ಜಾಡಿಮನೆಯ ಸುಬ್ರಾಯ ಹಾಗೂ ಲಕ್ಷ್ಮೀ ಹೆಗಡೆ ದಂಪತಿ ಪುತ್ರ ಪ್ರಸಾದ ಹೆಗಡೆ ಕೋವಿಡ್ ಪರಿಣಾಮ ನಾಲ್ಕು ತಿಂಗಳ ಹಿಂದೆಯೆ ಮನೆ ಸೇರಿದ್ದಾರೆ. ಬೇಸಿಗೆಯಲ್ಲಿ ಗಡಿ ಕೆಲಸ ಮುಗಿಸಿ ಮಳೆಗಾಲದಲ್ಲಿ ಬೇಸರ ಕಳೆಯಲೆಂದು ಕಿರುಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಒಂದು ವಾರದೊಳಗೆ ಚಿತ್ರೀಕರಣ ಮಾಡಿ ಎಡಿಟಿಂಗ್‌ ಮಾಡಲಾಗಿದ್ದು, ಪ್ರಸಾದ ಹೆಗಡೆ ಸಹೋದರ ಉತ್ತಮ ಹೆಗಡೆ ಛಾಯಾಗ್ರಹಣಕ್ಕೆ ಸಹಕರಿಸಿದ್ದಾರೆ. ಯೂಟ್ಯೂಬ್‌ ಲಿಂಕ್‌ https://youtu.be/haJKdjtneRM  ಮೂಲಕ ಕಿರುಚಿತ್ರ ನೋಡಬಹುದಾಗಿದೆ.

ಕೋವಿಡ್ ಕುರಿತ ಸುದ್ದಿಗಳನ್ನು ಮತ್ತೂಮ್ಮೆ ಪರಾಮರ್ಷಿಸಿ ಇತರರಿಗೆ ಸತ್ಯ ಸಂಗತಿಯನ್ನು ಮಾತ್ರ ತಿಳಿಸುವಂತೆ ಕಿರುಚಿತ್ರ ಹೇಳುತ್ತದೆ. ಅಂತೆ-ಕಂತೆಗಳ ಮಾತಿನಿಂದ ಉಂಟಾಗುವ ಗೊಂದಲ, ತೊಂದರೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇಂಜಿನಿಯರಿಂಗ್‌ ಆನ್‌ ಲೈನ್‌ ತರಗತಿ ಇದ್ದರೂ ನೆಟÌರ್ಕ್‌ ಸಮಸ್ಯೆಯಿಂದ ತರಗತಿಗೆ ಕೂರಲಾಗಿಲ್ಲ. ಅದಕ್ಕಾಗಿಯೇ ಕಿರುಚಿತ್ರ ನಿರ್ಮಾಣದತ್ತ ಚಿತ್ತ ಹರಿಸಿದೆ.  -ಪ್ರಸಾದ ಹೆಗಡೆ, ಜಾಡಿಮನೆ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.