ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಬೇಡ
Team Udayavani, May 20, 2020, 5:57 PM IST
ಜೋಯಿಡಾ: ತಾಲೂಕಿನ ಜನತೆ ದೇಶಕ್ಕೆ ಕೊಡುಗೆ ನೀಡಿದವರು. ಅವರಿಗೇ ಕುಡಿಯಲು ನೀರು ಕೊಡದ ನೀವು ಪಕ್ಕದ ಜಿಲ್ಲೆಗಳಿಗೆ ನೀರು ಕೊಡುವ ಮೂಲಕ ಮಾನವೀಯತೆ ಮರೆತಿರುವುದು ನಾಚಿಕೆಗೇಡಿನ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಹೇಳಿದರು.
ತಾಲೂಕು ಕೇಂದ್ರದ ಪಾಲಿಟೆಕ್ನಿಕ್ ಕಾಲೇಜಿನ ಸಭಾಭವನದಲ್ಲಿ ತಾಲೂಕಿನ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಕುಡಿಯುವ ನೀರಿನ ವಿಷಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದರು. ಸೂಪಾ ಜಲಾಶಯಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದಾರೆ. ಆದರೆ ಅವರ ಬದಕು ಇಂದಿಗೂ ಅತಂತ್ರವಾಗಿಯೇ ಇದೆ. ಇಂತಹ ತ್ಯಾಗ ಬದುಕಿಗೆ ಸರಕಾರದ ಸೌಲಭ್ಯ ಸಹಕಾರ ಪಡೆಯುವಲ್ಲಿ ತೊಂದರೆ ಕೊಡದಿರಿ. ಅರಣ್ಯ ವಾಸಿಗರಿಗೆ ಯಾವುದೇ ಕಿರುಕುಳ ನೀಡದೆ ತಾಲೂಕಿನ ಮುಗ್ಧ ಜನತೆಯ ಬದುಕಿಗೆ ಬೆಂಬಲಿಸಿ ಎಂದರು.
ಅರಣ್ಯ ಇಲಾಖೆ ಇನ್ನು ಮುಂದೆ ಯಾವುದೇ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಕೊಡದೆ ಸರಾಗವಾಗಿ ನಡೆಯಲು ಅವಕಾಶ ನೀಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ತಾಲೂಕಿನ ಜೋಯಿಡಾ ಕೇಂದ್ರ ಹಾಗೂ ರಾಮನಗರಗಳಿಗೆ ಕುಡಿಯುವ ನೀರಿನ ಸಮಸ್ಯೆಯಿದ್ದು, ಕೂಡಲೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾಜಿ ಶಾಸಕ ಸುನೀಲ ಹೆಗಡೆ, ಜಿ.ಪಂ. ಸದಸ್ಯ ರಮೇಶ ನಾಯ್ಕ, ತಾಲೂಕು ಬಿಜೆಪಿ ಅಧ್ಯಕ್ಷ ಸಂತೋಷ ರೆಡ್ಕರ ಮಂಗೇಶ ದೇಶಪಾಂಡೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?