ಸಿದ್ದಾಪುರ: ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Jul 15, 2022, 7:10 PM IST
ಸಿದ್ದಾಪುರ (ಉತ್ತರ ಕನ್ನಡ ): ತಾಲೂಕಿನ ಹೆಗ್ಗರಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರೇಸರದಲ್ಲಿ ಜು.14ರಂದು ಹೊಳೆಯ ನೀರಿನಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.
ನೀರಿನಲ್ಲಿ ಕೊಚ್ಚಿ ಹೋಗಿದ್ದ ಪರಮೇಶ್ವರ ಕೃಷ್ಣಪ್ಪ ಹೆಗಡೆ (62) ತಾರೇಸರ ಅವರ ಮೃತದೇಹ ಜು.15ರಂದು ಪತ್ತೆಯಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.