ನಗರೋತ್ಥಾನ ಸಮರ್ಪಕ ಬಳಕೆ

1.70 ಕೋಟಿ ರೂ.ದಲ್ಲಿ ಕುಡಿಯುವ ನೀರು-ರಸ್ತೆ ಕೆಲಸ

Team Udayavani, Mar 11, 2020, 4:13 PM IST

11-March-19

ಸಿದ್ದಾಪುರ: ಸ್ಥಳೀಯ ಪಪಂ ವ್ಯಾಪ್ತಿಯಲ್ಲಿ ಈ ಮೊದಲಿನ ನಗರೋತ್ಥಾನ- ಹಂತ 3ರಲ್ಲಿ ಒಟ್ಟೂ 1.70 ಕೋಟಿ ರೂ.ಗಳ ಮಂಜೂರಾತಿ ದೊರಕಿದ್ದು 2 ಕುಡಿಯುವ ನೀರಿನ ಕಾಮಗಾರಿಗಳು, 4 ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರ ಕಾಮಗಾರಿಗಳು ಅನುಷ್ಠಾನಗೊಂಡಿವೆ.

ಕೊಂಡ್ಲಿ ಭೂ ಮಟ್ಟದ ಜಲಗಾರದಿಂದ ಹಾಳತಕಟ್ಟಾ ವಾಜಪೇಯಿ ವಸತಿ ನಿವೇಶನಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಪೈಪ್‌ಲೈನ್‌ ಅಳವಡಿಕೆಗೆ 25 ಲಕ್ಷ ರೂ., ಅರೆಂದೂರು ಜಲಾಗಾರದ ಜಾಕ್‌ವೆಲ್‌ ಬಳಿ ನಿರ್ಮಿಸಿರುವ ಪಿಕ್‌ಅಪ್‌ ಡ್ಯಾಂ ಸುಧಾರಣೆಗೆ 25 ಲಕ್ಷ ರೂ., ಪರಿಶಿಷ್ಟರು ವಾಸಿಸುವ ಕಾಳಿದಾಸ ಗಲ್ಲಿ ರಸ್ತೆ ಕಾಂಕ್ರೀಟಕರಣಕ್ಕೆ 30 ಲಕ್ಷ ರೂ., ಹೊಸೂರು ಕಾನಕೇರಿ ರಸ್ತೆ ಡಾಂಬರೀಕರಣ, ಹೊಸೂರು ಎಲ್‌.ಬಿ. ನಗರದಲ್ಲಿ ರಸ್ತೆ ಡಾಂಬರೀಕರಣಗಳಿಗೆ ಒಟ್ಟೂ 30 ಲಕ್ಷ ರೂ., ರವೀಂದ್ರನಗರದ ಕೆಳಭಾಗದ ಹೊನ್ನೆಗುಂಡಿ ರಸ್ತೆ ಡಾಂಬರೀಕರಣ, ಹೊನ್ನೆಗುಂಡಿ ವಾಸ್ತವ್ಯದ ಮನೆಗಳ ಹಿಂಭಾಗದಲ್ಲಿ ಮಣ್ಣಿನ ಮುಖ್ಯ ಕಾಲುವೆಗೆ ಆರ್‌ ಸಿಸಿ ಗಟಾರ ನಿರ್ಮಾಣ ಕಾಮಗಾರಿಗೆ 30 ಲಕ್ಷ ರೂ., ಸೊರಬ ಮುಖ್ಯ ರಸ್ತೆಯ ಹಾಳತಕಟ್ಟಾ ನಾಕಾದಿಂದ ಬಿಡಿಓ ಕ್ವಾರ್ಟರ್ಸ್‌ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ 30 ಲಕ್ಷ ರೂ.ನಂತೆ ಕಾಮಗಾರಿಗಳನ್ನು ಎತ್ತಿಕೊಂಡಿದ್ದು ಅವೆಲ್ಲವೂ ಪೂರ್ಣಗೊಂಡಿವೆ.

ನಗರೋತ್ಥಾನ ಕಾಮಗಾರಿಗೆ ಸಂಬಂಧಿಸಿದ ಯಾವುದೇ ಕಾಮಗಾರಿ ಅರೆಬರೆಯಾಗಿಲ್ಲ. ಈ ಪಪಂನಲ್ಲಿ ಈ ಯೋಜನೆ ಮಾತ್ರವಲ್ಲ, ಬಹುತೇಕ ಎಲ್ಲ ಯೋಜನೆಗಳು ಸಂಪೂರ್ಣವಾಗಿ ಅನುಷ್ಠಾನಗೊಳ್ಳುವುದು ಇಲ್ಲಿನ ವೈಶಿಷ್ಟ್ಯತೆ. ಈ ಸಣ್ಣ ಪಪಂ ಆಗಿರುವ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ದೊರೆಯುವುದು ಕಡಿಮೆಯಾಗಿರುವುದಕ್ಕೆ ದೊರೆತ ಅನುದಾನದ ಸದ್ಬಳಕೆ ಮಾಡಿಕೊಳ್ಳುವುದು ಒಂದು ಕಾರಣವಾದರೆ ತಮ್ಮ ವಾರ್ಡ್‌ಗಳ ಸಮಸ್ಯೆಗಳನ್ನು ಅರಿತ ಸದಸ್ಯರು ಕಾಮಗಾರಿಗಳ ಕುರಿತು ನಿಗಾ ವಹಿಸುವುದು ದೊರೆತ ಅನುದಾನ ವಾಪಸ್‌ ಆಗದಿರುವುದಕ್ಕೆ ಇನ್ನೊಂದು ಕಾರಣ. ಈ ಕಾಮಗಾರಿಗಳು ಗುಣಮಟ್ಟದ ದೃಷ್ಟಿಯಿಂದ ಸಾಕಷ್ಟು ಉತ್ತಮವಾಗಿವೆ.

ನಗರೋತ್ಥಾನ ಕಾಮಗಾರಿಗಳ ಅನುದಾನ ದೊರೆತಿರುವುದು ಈ ಪಪಂಗೆ ಸಾಕಷ್ಟು ಅನುಕೂಲವಾಗಿದೆ. ಆಡಳಿತದ ದೃಷ್ಟಿಯಿಂದ ಹೇಳುವದಾದರೆ ಪಟ್ಟಣದ ಎಲ್ಲ ವಾರ್ಡ್‌ಗಳ ಮೂಲಸೌಕರ್ಯ ಒದಗಿಸುವಲ್ಲಿ ಎದುರಾಗಬಹುದಾದ ಅನುದಾನದ ಕೊರತೆಯನ್ನು ನಗರೋತ್ಥಾನ ಕಾಮಗಾರಿಯ ಅನುದಾನ ಸ್ವಲ್ಪಮಟ್ಟಿಗೆ ನಿವಾರಿಸಿದೆ. ಅಲ್ಲದೇ ಆಯಾ ಸ್ಥಳದಲ್ಲಿನ ಸ್ಥಿತಿ ಅರಿತ ಅಧಿಕಾರಿಗಳು, ಸದಸ್ಯರು ಅಲ್ಲಿಗೆ ಹೊಂದುವ ರೀತಿಯಲ್ಲಿ ಕಾಮಗಾರಿಗಳನ್ನು ಸಂಯೋಜಿಸುವದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆ. ಇದರಿಂದ ಮಾಡುವ ಕೆಲಸ ಸಾಕಷ್ಟು ಗುಣಮಟ್ಟದ್ದು ಆಗಿದೆ.

ನಗರೋತ್ಥಾನ-ಹಂತ 3ರ ಕಾಮಗಾರಿ ಅನುಷ್ಠಾನಗೊಂಡು ಸುಮಾರು 3-4 ವರ್ಷಗಳು ಕಳೆಯುತ್ತ ಬಂದಿವೆ. ಇನ್ನು ಹಂತ 4ನೇಯದು ಮಂಜೂರಾಗಬೇಕಿದೆ. ಕಾಲಕಾಲಕ್ಕೆ ವ್ಯವಸ್ಥಿತವಾದ ರೀತಿಯಲ್ಲಿ ಅನುದಾನ ದೊರೆತರೆ ಪಟ್ಟಣದ ಮೂಲ ಸೌಕರ್ಯವನ್ನು ಬಹುಮಟ್ಟಿಗೆ ಒದಗಿಸಲು ಸಾಧ್ಯ.

ನಗರೋತ್ಥಾನ-ಹಂತ 3 ಕಾರ್ಯಗತಗೊಳ್ಳುವಾಗ ಪಟ್ಟಣ ವ್ಯಾಪ್ತಿಯಲ್ಲಿ 12 ವಾರ್ಡ್‌ಗಳಿದ್ದವು. ಅವು ಈಗ 13ಕ್ಕೆ ಏರಿದೆ. ಇದರಿಂದ ಅನುದಾನದ ಮೊತ್ತವೂ ಹೆಚ್ಚಾಗಬೇಕಾಗುತ್ತದೆ ಎನ್ನುವುದು ಬಹುತೇಕ ನಗರವಾಸಿಗಳ ಅಭಿಪ್ರಾಯ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.