ಸಿದ್ದಿ ಸಮುದಾಯವನ್ನು ಮೂಲನಿವಾಸಿಗಳೆಂದು ಘೋಷಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆ
Team Udayavani, Dec 23, 2019, 1:44 PM IST
ಕಾರವಾರ: ಸಿದ್ದಿ ಸಮುದಾಯವನ್ನು ಮೂಲನಿವಾಸಿಗಳೆಂದು ಘೋಷಿಸಬೇಕು. ಬೆಳಗಾವಿ, ಧಾರವಾಡ ಜಿಲ್ಲೆಯ ಸಿದ್ದಿಗಳನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಕಾರವಾರದಲ್ಲಿ ಸೋಮವಾರ ಮಧ್ಯಾಹ್ನ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ದಿಯೋಗ ಸಿದ್ದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಭೂಮಿ ಹಕ್ಕು ನೀಡಬೇಕು. ಅರಣ್ಯ ಅತಿಕ್ರಮಣಗಳನ್ನು ಸಕ್ರಮ ಮಾಡಬೇಕು. ಉತ್ತರ ಕನ್ನಡ ಜಿಲ್ಲೆಯನ್ನು ಗುಡ್ಡಗಾಡು ಜಿಲ್ಲೆಯಾಗಿ ಘೋಷಿಸಬೇಕೆಂದು ದಿಯೋಗ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಉತ್ತರ ಕನ್ನಡದ ಮೂಲ ಬುಡಕಟ್ಟು ಜನಾಂಗ ಎಂದು ಘೋಷಿಸಬೇಕೆಂದು ಒತ್ತಾಯಿಸಿದರು. ಹಿಂದಿನ ಸರ್ಕಾರ ಬಿಪಿಎಲ್ ಕಾರ್ಡದಾರರಿಗೆ ನೀಡುತ್ತಿದ್ದ ಅಕ್ಕಿ ಬೇಳೆ,ಬೆಲ್ಲ ಕೊಡಲು ಆಗ್ರಹಿಸಿದರು