ಮಾರಿಕಾಂಬೆ ಊರಿನಲ್ಲಿ ಅಬ್ಬರಕ್ಕೇರಿದ ಚುನಾವಣೆ


Team Udayavani, May 6, 2018, 6:55 AM IST

sirsi-assembly-constituency.jpg

ಕರ್ನಾಟಕದ ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನ, ಜಲಪಾತಗಳ ಕ್ಷೇತ್ರ ಎಂದೇ ಹೆಸರಾದ ಶಿರಸಿ- ಸಿದ್ದಾಪುರ ಕ್ಷೇತ್ರದಲ್ಲಿ ಜಲಪಾತದ ಭೋರ್ಗರೆತ ಕಡಿಮೆ ಆದರೂ ಚುನಾವಣಾ ಕಾವು ಹೆಚ್ಚುತ್ತಿದೆ.
 
6ನೇ ಬಾರಿ ವಿಧಾನಸಭೆ ಮೆಟ್ಟಿಲೇರುವ ಉಮೇದಿನಲ್ಲಿರುವ ಶಾಸಕ, ಮಾಜಿ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾಂಗ್ರೆಸ್‌, ಜೆಡಿಎಸ್‌ ಬಲಾಬಲದ ಸ್ಪ‌ರ್ಧೆ ಒಡ್ಡಿವೆ. 8 ವರ್ಷಗಳ ಕಾಲ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿರುವ, ಮಾಜಿ ಸಿಎಂ ಬಂಗಾರಪ್ಪ ಗರಡಿಯಲ್ಲಿ ಪಳಗಿದ ಭೀಮಣ್ಣ ನಾಯ್ಕ, ರಾಮಕೃಷ್ಣ ಹೆಗಡೆ ದೊಡ್ಮನೆ ಅವರ ಕುಟುಂಬದ ಶಶಿಭೂಷಣ ಹೆಗಡೆ ಪ್ರಬಲ ಪೈಪೋಟಿ ನೀಡಿದ್ದಾರೆ. ಕಾಗೇರಿ ಅವರಿಗೆ ಗೆಲುವು ಸುಲಭದಲ್ಲಿಲ್ಲ ಎಂಬಷ್ಟು ನಿಚ್ಚಳವಾಗುತ್ತಿದೆ ಪೈಪೋಟಿ.ಇನ್ನೂ ಮೂವರು ಕಣದಲ್ಲಿದ್ದರೂ ಅಷ್ಟಾಗಿ ಪರಿಣಾಮ ವಾಗುವುದಿಲ್ಲ. ಇಲ್ಲಿ ನಾಮಧಾರಿ, ಹವ್ಯಕರ ಮತಗಳೇ ಹೆಚ್ಚು. ಈ ಬಾರಿ ಕೂಡ ಹವ್ಯಕ ಸಮುದಾಯದ ಇಬ್ಬರು ಕಣದಲ್ಲಿದ್ದಾರೆ. ಇನ್ನೊಬ್ಬರು ನಾಮಧಾರಿ ಸಮುದಾಯ ದವರಾಗಿದ್ದಾರೆ. 

ಮೂರೂ ಪಕ್ಷಗಳ ಅಧ್ಯಕ್ಷರೂ ನಾಮಧಾರಿ ಸಮುದಾಯಕ್ಕೆ ಸೇರಿದವರು. ಅದರಲ್ಲಿ ಒಬ್ಬರು ಕಾಂಗ್ರೆಸ್‌ ಅಭ್ಯರ್ಥಿ. ಇನ್ನೂ ವಿಶೇಷ ಎಂದರೆ ಈ ಮೂವರೂ ಇದೇ ಕ್ಷೇತ್ರದ ಮತದಾರರೇ. ಈ ಕಾರಣದಿಂದಲೂ ಮತಗಳು ಯಾರಿಗೆ ಎಷ್ಟು ಒಡೆದು ಹೋಗುತ್ತವೆ ಎಂಬ ಚರ್ಚೆಗಳು ನಡೆದಿವೆ. ಯಾರದ್ದೇ ಗೆಲುವಾ ದರೂ ಅದರ ಅಂತರ ಕಡಿಮೆಯೇ ಎಂಬುದು ಮೇಲ್ನೋಟಕ್ಕೂ  ಕಾಣುವ ಸಂಗತಿಯಾಗಿದೆ!

ನಿರ್ಣಾಯಕ ಅಂಶವೇನು?: ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭಿವೃದ್ಧಿಗಾಗಿ ಬೆಂಬಲಿಸಿ ಎಂದಿದ್ದರೆ, ಮೌಲ್ಯಾ ಧಾ ರಿತ ರಾಜಕಾರಣಿ ಹಾಗೂ ಹೆಗಡೆ ಕುಟುಂಬದ ಕುಡಿ, ಕುಮಾರಸ್ವಾಮಿ ಬೆಂಬಲಿಸಲು ಮತ ಕೊಡಿ ಎಂದು ಜೆಡಿಎಸ್‌ ಮತ ಕೇಳುತ್ತಿದೆ. ಸರಕಾರ ಬಿಜೆಪಿಯದ್ದೇ, ಕ್ಷೇತ್ರಕ್ಕೆ ಅನುಭವ ಇದ್ದವರು ಜನಪ್ರತಿನಿಧಿ ಯಾದರೆ ಅಭಿವೃದ್ಧಿಗೆ ಹೆಚ್ಚು ಅನುದಾನ ತರಬಹುದು ಎಂದು ಬಿಜೆಪಿ ಮತ ಕೇಳುತ್ತಿದೆ. ಈ ಮಧ್ಯೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸ್ವ ಕ್ಷೇತ್ರವೂ ಇದೇ ಆಗಿದ್ದರಿಂದ ಕ್ಷೇತ್ರದ ಗೆಲುವು ಹೆಗಡೆ ವರ್ಚಸ್ಸಿಗೂ ಕನ್ನಡಿ ಎಂಬ ಮಾತುಗಳೂ ಇವೆ. ಭೀಮಣ್ಣ ಗೆಲ್ಲಿಸಲು ದೇಶಪಾಂಡೆ ಸಾರಥ್ಯ ವಹಿಸಿದ್ದರೆ, ಶಶಿಭೂಷಣ ಗೆಲ್ಲಿಸಲು ಕುಮಾರಸ್ವಾಮಿ, ಮಧು ಬಂಗಾರಪ್ಪ ಬೆನ್ನೆಲುಬಾಗಿ ನಿಂತಿದ್ದಾರೆ. ಮಧು ಅವರ ಸಹೋದರ ಮಾವ ಭೀಮಣ್ಣ. ಅವರು ಕಾಂಗ್ರೆಸ್‌ ಅಭ್ಯರ್ಥಿ!

ರಾಜ್ಯದಲ್ಲೂ ಬಿಜೆಪಿ ಬಂದಾಗ ಅಭಿವೃದ್ಧಿಗೆ ವೇಗ. ಜತೆಗೆ  ಕ್ಷೇತ್ರದ ಅಭಿವೃದ್ಧಿಯೂ ಸಾಧ್ಯ. ಹೀಗಾಗಿ ಕ್ಷೇತ್ರದ ಹಿತಕ್ಕಾಗಿ ನನ್ನ ಸ್ಪರ್ಧೆ.
– ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಅಭ್ಯರ್ಥಿ

ಹಲವು ಆಶಯಗಳ ಜತೆ ಸ್ಪರ್ಧಿಸಿದ್ದೇನೆ. ಕಾಂಗ್ರೆಸ್‌ಗೆ ಮಾತ್ರ ಜನತೆಗೆ ನೆಮ್ಮದಿ ಕೊಡಲು ಸಾಧ್ಯ. ರಾಜ್ಯಕ್ಕೇ ಮಾದರಿ ಕ್ಷೇತ್ರವಾಗಿಸಬೇಕೆಂಬ ಬಯಕೆಯಿದೆ.
– ಭೀಮಣ್ಣ ನಾಯ್ಕ, ಕಾಂಗ್ರೆಸ್‌ ಅಭ್ಯರ್ಥಿ

ಸ್ಪಷ್ಟ ಗುರಿಯ ಕ್ರಿಯಾಯೋಜನೆ ಜತೆ ಕೆಲಸ ಮಾಡುವ ಇಂಗಿತವಿದೆ. ಮೂಲ ಭೂತ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಲ್ಲಿ ಪ್ರಯತ್ನ ನಡೆಸುತ್ತೇನೆ.
– ಡಾ.ಶಶಿಭೂಷಣ ಹೆಗಡೆ , ಜೆಡಿಎಸ್‌ ಅಭ್ಯರ್ಥಿ

ಕ್ಷೇತ್ರದ ಒಟ್ಟು ಮತದಾರರು: 1,90,741
ಪುರುಷರು: 96,765
ಮಹಿಳೆಯರು: 93,974
ಇತರೆ:02

– ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.