ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ : ಯುವಕನ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ
Team Udayavani, Feb 22, 2022, 4:02 PM IST
ಶಿರಸಿ : ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನೋರ್ವನ ಸಮಯ ಪ್ರಜ್ಞೆಯಿಂದ ಜೀವ ಉಳಿದ ಘಟನೆ ಮಂಗಳವಾರ ನಡೆದಿದೆ.
ಬರ್ತಾ ಫರ್ನಾಂಡಿಸ್ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದಾರೆ.
ಅನಾರೋಗ್ಯ ಮತ್ತು ಮಾನಸಿಕವಾಗಿ ನೊಂದ ವೃದ್ದೆ ಶಿರಸಿಯ ಪಶುಸಂಗೋಪನಾ ಇಲಾಖೆಗೆ ಸೇರಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಇದನ್ನು ಗಮನಿಸಿದ ಅಸ್ಪತ್ರೆ ಸಿಬ್ಬಂದಿ ಮತ್ತು ರಸ್ತೆಯಲ್ಲಿ ಸಾಗುತ್ತಿದ್ದ ಸಂಗೀತಾ ಮೊಬೈಲ್ ಶಾಪ್ ಸಿಬ್ಬಂದಿ ಸಚ್ಚಿನ್ ಶಿವಕುಮಾರ ಮತ್ತು ನಿತಿನ್
ಅವರ ಸಮಯಪ್ರಜ್ಞೆಯಿಂದ ಮಹಿಳೆ ಬದುಕುಳಿಯಲು ಸಾಧ್ಯವಾಗಿದೆ.
ಬರ್ತಾ ಫರ್ನಾಂಡಿಸ್ 15 ಅಡಿ ನೀರು ಇರುವ ಬಾವಿಯಿಗೆ ಬಿದ್ದರೂ ಬದುಕುಳಿದಿದ್ದುಅಚ್ಚರಿಯಾಗಿದೆ. ಗಣೇಶ ನಗರದ ದಿನೇಶ ಸಾರ್ವಜನಿಕರ ಸಹಕಾರದಿಂದ ಬಾವಿಗಿಳಿದು ಮಹಿಳೆ ಮೇಲೆತ್ತಲು ಸಹಕರಿಸಿದರು. ನಗರಠಾಣೆ ಪಿ ಎಸ್ ಐ ಮತ್ತು ಸಿಬ್ಬಂದಿ, 112 ಸಿಬ್ಬಂದಿ, ಈ ಸಂದರ್ಭದಲ್ಲಿದ್ದು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ ಅಲ್ಲದೆ ಅಗ್ನಿಶಾಮಕ ಸಿಬ್ಬಂದಿ ಮಹಿಳೆ ರಕ್ಷಣೆಗೆ ನೆರವಾದರು.
ಇದನ್ನೂ ಓದಿ : ಗಲಭೆಗೆ ಪ್ರಚೋದನೆ: SFJ ಸಂಘಟನೆ ಜತೆ ಸಂಪರ್ಕ ಹೊಂದಿದ Apps, ವೆಬ್ ಸೈಟ್ ಗೆ ಕೇಂದ್ರ ನಿರ್ಬಂಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ