ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಸಂಪರ್ಕ ಕೊರತೆಯಿಂದ ಹಿಂದುಳಿದಿದೆ ಈ ಗ್ರಾಮ
ಇಂದಿನ ಆಡಳಿತ ವ್ಯವಸ್ಥೆಗೆ ಕನ್ನಡಿ
Team Udayavani, Jun 11, 2022, 3:37 PM IST
ಶಿರಸಿ : ಅದೊಂದು ಪುಟ್ಟ ಗ್ರಾಮ, ಅಲ್ಲಿರುವದು 31 ಕುಟುಂಬ, ಒಟ್ಟು ಜನಸಂಖ್ಯೆ 100 ರಷ್ಟು. . . ಆದರೂ ಮೂಲಭೂತ ಸೌಲಭ್ಯಗಳಿಲ್ಲ! ಸ್ವಾತಂತ್ರ್ಯ ದೊರಕಿ 75 ವಸಂತಗಳಾದರೂ ಸೇತುವೆ ಸೌಲಭ್ಯ ಇಲ್ಲದ ಕಾರಣ ಹರಿಯುವ ಹೊಳೆಯಲ್ಲಿ ನೀರು ಹರಿಯುವುದರಿಂದ ವರ್ಷದ 8 ತಿಂಗಳು ಗ್ರಾಮವು ವಾಹನ ಸಂಪರ್ಕದಿಂದ ವಂಚಿತವಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ, ಶಿರಸಿ ತಾಲೂಕಿನ, ವಾನಳ್ಳಿ ಗ್ರಾಮ ಪಂಚಾಯಿತಿ, ಮುಸ್ಕಿ ಗ್ರಾಮದ ಹಗುರಮನೆ ಮತ್ತು ಮೇಲಿನ ಗದ್ದೆಯ ಸ್ಥಿತಿ ಎಂದು ಊರಿನ ಸ್ಥಿತಿಯ ಬಗ್ಗೆ ಬೆಳಕು ಚೆಲ್ಲಿದ್ದಾರೆ, ಹೋರಾಟಗಾರ ಏ. ರವೀಂದ್ರ ನಾಯ್ಕ.
ಶಿರಸಿಯಿಂದ ಈ ಗ್ರಾಮವು ಶಿರಸಿಯಿಂದ ಹುಲೆಕಲ್, ವಾನಳ್ಳಿ, ಕಕ್ಕಳ್ಳಿ ಮಾರ್ಗವಾಗಿ ಶಿರಸಗಾಂವದಿಂದ ಹಗುರಮನೆ ಮತ್ತು ಮೇಲಿನಗದ್ದೆಗೆ ಶಿರಸಿಯಿಂದ ಸುಮಾರು 35 ಕೀ.ಮೀ ದೂರದಲ್ಲಿದೆ. ವರ್ಷದಲ್ಲಿ 8 ತಿಂಗಳು ಹಾದು ಹೋಗುವ ರಸ್ತೆಗೆ ಅಡ್ಡವಾಗಿ ಬಿಳಿಹೊಳೆಗೆ ಸೇತುವೆ ಇಲ್ಲದೇ ಸಂಪರ್ಕದ ಕೊರತೆಯಲ್ಲಿಯೇ ಇಂದಿನವರೆಗೂ ಗ್ರಾಮಸ್ಥರು ಜೀವಿಸುತ್ತಿದ್ದಾರೆ.
ಅಂಧರು, ಅಂಗವಿಕಲರು ಮತ್ತು ವೃದ್ಧರು ಇರುವಂತಹ ಅತ್ಯಂತ ಹಿಂದುಳಿದ ಒಕ್ಕಲಿಗ ಸಮಾಜಕ್ಕೆ ಸೇರಿದ ರೈತಾಪಿ ಕುಟುಂಬದ ಜನವಸತಿ ಇರುವ ಈ ಗ್ರಾಮದಲ್ಲಿ ವಾಹನ ಸಂಪರ್ಕವಿಲ್ಲದೇ, ಮಳೆಗಾಲದ ಪೂರ್ವದಲ್ಲಿ ಮುಂದಿನ 8 ತಿಂಗಳಿಗೆ ಅವಶ್ಯವಾದ ಆಹಾರ ಸಾಮಗ್ರಿ, ಕೃಷಿ ಚಟುವಟಿಕೆ ಪೂರಕವಾದ ರಸಗೊಬ್ಬರ, ಆಹಾರ ಧಾನ್ಯ ಸಾಮಗ್ರಿಗಳನ್ನ ಸೇಕರಿಸಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ ಎಂದೂ ವಿವರಿಸುತ್ತಾರೆ.
ಇದನ್ನೂ ಓದಿ : ಏನಿದು ನೂಪುರ್ ವಿಡಿಯೋ ವಿವಾದ: ಬಹಿರಂಗ ಕ್ಷಮೆಯಾಚಿಸಿದ ಕಾಶ್ಮೀರಿ ಯೂಟ್ಯೂಬರ್
ಈ ಗ್ರಾಮದಿಂದ ಪ್ರಾರ್ಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ಹೋಗುವ ಸುಮಾರು 18 ಮಕ್ಕಳುಗಳಿಗೆ ರಸ್ತೆಯ ಸಂಪರ್ಕ, ಕಾಲುಶಂಕವಿಲ್ಲದೇ ಖಾಸಗಿ ಮತ್ತು ಇನ್ನೀತರ ಅತೀಕ್ರಮಣ ಕ್ಷೇತ್ರದಿಂದ ಅರಣ್ಯ ಮತ್ತು ಗಿಡ ಗಂಟಿಗಳ ಮಧ್ಯದಿಂದಲೇ ಓಡಾಡುವುದು ಅನಿವಾರ್ಯವಾಗಿದೆ. ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳ ತಾತ್ಸರ ಮನೋಭಾವನೆ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಿದೆ ಎನ್ನುತ್ತಾರೆ ರವೀಂದ್ರ.
ಸರ್ವಋತು ರಸ್ತೆಯಿಲ್ಲದಿರುವುದರಿಂದ ಅನಾರೋಗ್ಯ ಪೀಡಿತರನ್ನ ಆರೋಗ್ಯ ಕೇಂದ್ರಕ್ಕೆ ಕಂಬಳಿಯಲ್ಲಿ ಸುತ್ತಿ ಸಾಗಿಸುವ ಸಾಹಸವನ್ನ ಗ್ರಾಮಸ್ಥರು ಆಗಾಗ ಮಾಡುವ ಪ್ರಸಂಗಗಳು ಜರುಗಿದೆ.
ಹಿಂದೆ ಮಂಜೂರಿಯಾದ ಸೇತುವೆಯನ್ನ ಬೇರೆ ಸ್ಥಳಕ್ಕೆ ವರ್ಗಾಯಿಸಿರುವುದರಿಂದ ನಮ್ಮ ಗ್ರಾಮಕ್ಕೆ ಸೇತುವೆ ಇಲ್ಲದೇ, ವರ್ಷದಲ್ಲಿ 8 ತಿಂಗಳು ನಗರ ಪ್ರದೇಶದಿಂದ ವಂಚಿತರಾಗುತ್ತೇವೆ ಎನ್ನುತ್ತಾರೆ ಗ್ರಾಮಸ್ಥರು.
ಆಹಾರ ಮತ್ತು ಕೃಷಿ ಸಾಮಗ್ರಿ ಸಾಗಾಟಕ್ಕೆ ತೊಂದರೆ, ಶಾಲೆ ಮಕ್ಕಳು ಮತ್ತು ಹೆಂಗಸರಿಗೆ ಮಳೆಗಾಲದ ನಂತರ ಓಡಾಟಕ್ಕೆ ಸಾಧ್ಯವಾಗದೇ ಇರುವುದರಿಂದ ಸರಕಾರ ಅತೀ ಶೀಘ್ರದಲ್ಲಿ ಸೇತುವೆ ಮಂಜೂರಿ ಮಾಡಬೇಕೆಂದು ಗ್ರಾಮಸ್ಥರಾದ ನಾರಾಯಣ ಯಂಕು ಗೌಡ, ಗೌರಿ ಬೋಮ್ಮ ಗೌಡ ಮತ್ತು ಸವಿತಾ ಗಣಪತಿ ಗೌಡ ಸಾರ್ವತ್ರಿಕವಾಗಿ ಅಳಲನ್ನು ತೊಡಿಕೊಂಡಿದ್ದಾರೆ.
ನಿರ್ಲಕ್ಷಕ್ಕೆ ಖೇದಕರ :
ಸ್ವತಂತ್ರ ದೊರಕಿ 75 ವರ್ಷಗಳಾದರೂ ಅತ್ಯಂತ ಹಿಂದುಳಿದ ಪ್ರದೇಶದ ಮೂಲಭೂತ ಸೌಕರ್ಯದಿಂದ ಗ್ರಾಮವು ವಂಚಿತವಾಗಿರುವುದು ಖೇದಕರ. ಈ ಗ್ರಾಮದ ಸೌಕರ್ಯಕ್ಕಾಗಿ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಸಾಮಾಜಿಕ ಹೋರಾಟಗಾರರ ರವೀಂದ್ರ ನಾಯ್ಕ ಮಾಧ್ಯಮಗಳ ಮೂಲಕ ಹಕ್ಕೊತ್ತಾಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ