Sirsi: ಶ್ರೀಸ್ವರ್ಣವಲ್ಲಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ

ಸ್ವರ್ಣವಲ್ಲೀಯಲ್ಲಿ ಮೂರು ದಿನಗಳ ಕಾಲ ಏರ್ಪಾಟು; ವೇದ ಶೋಭಾ -ಶೋಭಾಯಾತ್ರೆ

Team Udayavani, Jan 3, 2024, 3:46 PM IST

10-sirsi

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಜನವರಿ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಮತ್ತು ಉಜ್ಜಯಿನಿ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಕಾರ್ಯಕ್ರಮ ಜ.13ರಂದು ಯತಿಗಳ ದಿವ್ಯಸಾನ್ನಿಧ್ಯ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಸ್ವರ್ಣವಲ್ಲೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಅಭಿನವ ಶಂಕರ ಭಾರತೀ ಮಹಾಸ್ವಾಮಿಗಳವರು ದಿವ್ಯಸಾನ್ನಿಧ್ಯ ನೀಡಲಿದ್ದಾರೆ.

ಅತಿಥಿಗಳಾಗಿ ಶಾಸಕ ಶಿವರಾಮ ಹೆಬ್ಬಾರ್, ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ಪ್ರಫುಲ್ಲಕುಮಾರ ಮಿಶ್ರ, ಕಾರ್ಯದರ್ಶಿ ಪ್ರೋ| ವಿರೂಪಾಕ್ಷ ವಿ. ಜಡ್ಡೀಪಾಲ, ಮಾಜಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲ್ಲಾಪುರದ ಧಾತ್ರೀ ಪೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಭಟ್ಟ ಅವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ| ಕಾ. ಈ. ದೇವನಾಥನ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ವೇದಶೋಭಾ -ಶೋಭಾಯಾತ್ರೆ: ಚತುರ್ವೇದಗಳ ಮಹತ್ವ ಜನಮಾನಸಕ್ಕೆ ತಲುಪಿಸುವ ಉದ್ದೇಶದಿಂದ ಜ. 13ರಂದು 4 ಗಂಟೆಯಿಂದ ಶಿರಸಿ ನಗರದಲ್ಲಿ ವೇದಶೋಭಾ-ಶೋಭಾಯಾತ್ರೆ ಆಯೋಜಿಸಲಾಗಿದೆ. ಶಿರಸಿಯ ಮಾರಿಕಾಂಬಾ ದೇವಾಲಯದಿಂದ ಆರಂಭಗೊಂಡು ಶಿವಾಜಿ ಚೌಕ, ಸಿ. ಪಿ. ಬಝಾರ್, ದೇವಿಕೆರೆ ಮಾರ್ಗವಾಗಿ ಸಾಗಿ ಯೋಗಮಂದಿರದಲ್ಲಿ ಸಮಾಪ್ತಿಗೊಳ್ಳಲಿದೆ.

ಈ ವಿಶಿಷ್ಟ, ವಿನೂತನ ವೇದಮಾತೆಯ ಸೇವಾ ಕೈಂಕರ್ಯದ ಶೋಭಾಯಾತ್ರೆಯಲ್ಲಿ ಸ್ವರ್ಣವಲ್ಲೀ ಮಹಾಸ್ವಾಮಿಗಳು, ಕೂಡಲಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮಿಗಳು ಮತ್ತು ಸಿದ್ದಾಪುರದ ಶ್ರೀಮನ್ನೆಲೆಮಾವಿನಮಠದ ಶ್ರೀಮಾಧವಾನಂದ ಭಾರತೀ ಮಹಾಸ್ವಾಮಿಗಳು ಸಾನ್ನಿಧ್ಯ ನೀಡಲಿದ್ದಾರೆ.

ವೈದಿಕರು, ವಿದ್ವಾಂಸರು, ವಿದ್ಯಾರ್ಥಿಗಳು, ಮಾತೆಯರು, ವೇದಾಭಿಮಾನಿಗಳು, ಆಸ್ತಿಕ ಮಹನೀಯರು ಸಹಸ್ರಾರು ಸಂಖ್ಯೆಯಲ್ಲಿ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ವೇದಪಾರಾಯಣ: ಕ್ಷೇತ್ರೀಯ ವೇದ ಸಮ್ಮೇಳನ ಮೂರು ದಿನಗಳ ಕಾಲ ಶ್ರೀ ಸ್ವರ್ಣವಲ್ಲಿಯಲ್ಲಿ ನಡೆಯಲಿದ್ದು, ವೇದಪಾರಾಯಣ, ವಿದ್ವಾಂಸರಿಗೆ ಸಂಮಾನ, ಗೋಷ್ಠೀ, ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂತಾದ ವಿವಿಧ ಆಯಾಮಗಳಲ್ಲಿ ಜರುಗಲಿದೆ.

ಜ. 13ರಿಂದ 15ರವರೆಗೆ ಪ್ರತಿದಿನ ಬೆಳಗ್ಗೆ 8.30 ರಿಂದ 11 ಗಂಟೆಯವರೆಗೆ ಐದು ರಾಜ್ಯಗಳಿಂದ ಆಮಂತ್ರಿತರಾದ ನೂರಕ್ಕೂ ಹೆಚ್ಚು ವೇದವಿದ್ವಾಂಸರಿಂದ ನಾಲ್ಕು ವೇದಗಳ 8 ಶಾಖೆಗಳ ವೇದ ಪಾರಾಯಣವು ಪ್ರತ್ಯೇಕವಾಗಿ 8 ಸ್ಥಳಗಳಲ್ಲಿ ನಡೆಯಲಿದೆ.

ವೇದಗಳ ಕುರಿತು ವಿಶೇಷ ಜ್ಞಾನ ಜನಸಾಮಾನ್ಯರಿಗೂ ಅರಿವಿಗೆ ಬರುವಂತಾಗಬೇಕು ಎಂಬ ಘನೋದ್ದೇಶದಿಂದ ಚತುರ್ವೇದಗಳ ಕುರಿತಾದ ಉಪನ್ಯಾಸಗಳ 4 ಗೊಷ್ಠಿಗಳನ್ನು ಆಯೋಜಿಸಲಾಗಿದೆ.

ಜ. 13ರಂದು ಬೆಳಗ್ಗೆ 12ರಿಂದ ಮೈಸೂರಿನ ವೇದ ವಿಜ್ಞಾನ ವಿಪ್ಪರಮ್ ಸಂಸ್ಥಾಪಕ ವೇ| ಬ್ರ| ಶ್ರೀ ಡಾ|| ವಂಶೀಕೃಷ್ಣ ಘನಪಾಠಿಗಳಿಂದ ಕೃಷ್ಣಯಜುರ್ವೇದದ ಕುರಿತು, ಜ. 14ರಂದು 11ರಿಂದ 1ರವರೆಗೆ ಹಾಸನದ ವೇ.ಬ್ರ.ಶ್ರೀ. ಎಂ. ವಿ. ಕೃಷ್ಣಮೂರ್ತಿ ಘನಪಾಠಿಗಳು ಹಾಗೂ ಬ್ಯಾಡಗಿಯ ವೇ.ಬ್ರ.ಶ್ರೀ.ಗೋಪಾಲಕೃಷ್ಣ ಶಿವಪೂಜಿ ಅವರಿಂದ ಋಗ್ವೇದ ಮತ್ತು ಶುಕ್ಲಯಜುರ್ವೇದದ ಕುರಿತು, ಜ. 14ರಂದು 3 ರಿಂದ 5 ರವರೆಗೆ ಮೈಸೂರಿನ ವೇ.ಬ್ರ.ಶ್ರೀ. ಸುಬ್ರಹ್ಮಣ್ಯ ಭಟ್ಟ ಹಾಗೂ ಕುಮಟಾದ ವೇ.ಬ್ರ.ಶ್ರೀ.ರಮೇಶ ವರ್ಧನ ಅವರಿಂದ ಸಾಮವೇದ ಮತ್ತು ಅಥರ್ವವೇದದ ಕುರಿತು ಉಪನ್ಯಾಸಗಳು ಜರುಗಲಿವೆ.

ಜ. 15ರಂದು ಬೆಳಗ್ಗೆ 11.30 ರಿಂದ 12.30 ರವರೆಗೆ ಮೈಸೂರಿನ ಪ್ರಾಚಾರ್ಯ, ಟಿ. ಎನ್. ಪ್ರಭಾಕರ ಅವರಿಂದ ಮಹಾಭಾರತದ ಕುರಿತು ಉಪನ್ಯಾಸ ಸಂಯೋಜಿಸಲಾಗಿದೆ.

ವಿದ್ವಾಂಸರಿಗೆ ಸಂಮಾನ:

ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಋಗ್ವೇದ ವಿದ್ವಾಂಸ ವೇ.ಬ್ರ.ಶ್ರೀ ಗಣೇಶ ಘನಪಾಠಿಗಳನ್ನು ಹಾಗೂ ಸಾಮವೇದ ವಿದ್ವಾಂಸರಾದ ವಿಜಯವಾಡದ ವೇ.ಬ್ರ.ಸುಂದರರಾಮ ಶ್ರೌತಿಗಳನ್ನು ಸಂಮಾನಿಸಲಾಗುವುದು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಆಹಿತಾಗ್ನಿಗಳಾದ ವೇ.ಬ್ರ. ಶ್ರೀ. ಗೋವಿಂದ ಪ್ರಕಾಶ ಘನಪಾಠಿಗಳನ್ನು ಹಾಗೂ ಅಥರ್ವವೇದದ ವಿದ್ವಾಂಸರಾದ ಓರಿಸ್ಸಾದ ಪುರಿಯ ವೇ.ಬ್ರ. ಶ್ರೀ. ಕುಂಜಬಿಹಾರೀ ಉಪಾಧ್ಯಾಯರನ್ನು ಸಂಮಾನಿಸಲಾಗುವುದು.

ಜ. 14ರಂದು ಸಾಯಂಕಾಲ 5.30 ರಿಂದ ವಿ|| ಸುಬ್ರಾಯ ಭಟ್ಟ, ವಿ. ಗೀತಾ ಚಿನ್ನಾಪುರ ಅವರಿಂದ ಭಕ್ತಿಸಂಗೀತ, ಶ್ರೀ ಸ್ವರ್ಣವಲ್ಲಿ ಮಾತೃವೃಂದದವರಿಂದ ಭಜನಾಮೃತ ಕಾರ್ಯಕ್ರಮ ನಡೆಯಲಿದೆ.

ಜ. 15ರಂದು 3.30 ರಿಂದ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು,  ಸ್ವರ್ಣವಲ್ಲೀ ಶ್ರೀ ಶ್ರೀಗಳು, ಕೂಡಲಿ ಶೃಂಗೇರಿ ಶ್ರೀ ಶ್ರೀಗಳವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಅಭ್ಯಾಗತರಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಅನಂತಕುಮಾರ ಹೆಗಡೆ, ಶಾಸಕ ಭೀಮಣ್ಣ ನಾಯ್ಕ ಹಾಗೂ ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ಪ್ರಫುಲ್ಲಕುಮಾರ ಮಿಶ್ರ ಹಾಗೂ ಕಾರ್ಯದರ್ಶಿ ಪ್ರೋ. ವಿರೂಪಾಕ್ಷ ವಿ. ಜಡ್ಡೀಪಾಲ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.