ನಿರ್ಲಕ್ಷ್ಯದ ತಾಣ ಶಿವಗಂಗಾ ಜಲಪಾತ; ಇಲ್ಲಿಲ್ಲ ಕನಿಷ್ಟ ಮೂಲ ಸೌಲಭ್ಯ

ಜಲಪಾತ ಪ್ರದೇಶಕ್ಕೆ ಬೇಕಿದೆ ಕಾಯಕಲ್ಪ

Team Udayavani, Dec 19, 2022, 2:53 PM IST

9

ಶಿರಸಿ: ತಾಲೂಕಿನ ಜಡ್ಡಿಗದ್ದೆ ಸಮೀಪದ ಕಾನನದ ನಡುವೆ ಜಲಧಾರೆಯಗಿ ಬೋರ್ಗರೆಯುವ ಶಿವಗಂಗಾ ಜಲಪಾತ ನಿರ್ಲಕ್ಷ್ಯದ ತಾಣವಾಗಿ ಮಾರ್ಪಟ್ಟಿದೆ. ಕನಿಷ್ಟ ಮೂಲ ಸೌಲಭ್ಯ, ನಿರ್ವಹಣೆಯೂ ಇಲ್ಲದಂತಾಗಿದೆ. ಜಲಪಾತ ಪ್ರದೇಶಕ್ಕೆ ಕಾಯಕಲ್ಪ ನೀಡಬೇಕು ಎಂಬ ಬೇಡಿಕೆ ವ್ಯಾಪಕವಾಗಿದೆ.

ನಗರದಿಂದ 33 ಕಿಮೀ, ಜಡ್ಡಿಗದ್ದೆಯಿಂದ 2 ಕಿಮೀಗಿಂತ ಹೆಚ್ಚು ದೂರ ಇರುವ ಜಲಪಾತ ಮಳೆಗಾಲದಲ್ಲಿ ಧುಮ್ಮಿಕ್ಕಿ ಹರಿದರೆ ಬೇಸಿಗೆಯ ಜನವರಿವರೆಗೂ ನೀರಿನ ಹರಿವು ಇರುತ್ತದೆ. ಸಮೃದ್ಧ ಹಸಿರು ಪರಿಸರದ ಕಲ್ಲಿನ ಪದರಗಳ ನಡುವೆ ಹಾಲಿನಂತೆ ಕೆಳಕ್ಕಿಳಿಯುವ ಈ ಜಲಪಾತ ನೋಡಲು ಶಿರಸಿ ತಾಲೂಕು, ಜಿಲ್ಲೆಯಷ್ಟೆ ಅಲ್ಲದೇ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ ಹೀಗೆ ನಾಡಿನ ನಾನಾ ಕಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ.

ಇಲ್ಲಿನ ಅಭಿವೃದ್ಧಿಗೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ 40 ಲಕ್ಷ ರೂ.ಅನುದಾನ ಒದಗಿಸಿದ್ದು, ಅದರಲ್ಲಿ ಏಳು ಲಕ್ಷ ರೂ. ಕಾಮಗಾರಿಯಷ್ಟೇ ನಡೆದಿದೆ ಎಂಬ ಮಾತುಗಳು ಕೇಳಿ ಬಂದಿವೆ. ಇನ್ನುಳಿದ ಮೊತ್ತದ ಕಾಮಗಾರಿಯನ್ನು ಲ್ಯಾಂಡ್‌ ಆರ್ಮಿಯವರು ನಿರ್ವಹಿಸಬೇಕಿದೆ.

ಶಿವಗಂಗಾ ಜಲಪಾತವನ್ನು ನೋಡುವುದಕ್ಕೆ ಮೇಲ್ಭಾಗದಲ್ಲಿಯೇ ವೀಕ್ಷಣಾ ಗೋಪುರವಿದೆ. ಹೆಂಚಿನ ಮಾಡಿನ ಗೋಪುರದ ಛಾವಣಿಯ ಒಂದು ಭಾಗ ಮುರಿದು ಬಿದ್ದಿದೆ. ವರ್ಷದ ಅವಧಿಯಲ್ಲಿ ಈ ಸ್ಥಿತಿ ಉಂಟಾದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವ ಸ್ಥಿತಿಯಿದೆ. ಜಲಪಾತ ನೋಡಲು ಬಂದವರ ತಲೆ ಮೇಲೆ ಎಲ್ಲಿ ಮಾಡು ಹೆಂಚು ಬೀಳುತ್ತದೆಯೋ ಎಂಬ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ವೀಕ್ಷಣಾ ಸ್ಥಳ ತೀರಾ ಇಕ್ಕಟ್ಟಾಗಿದ್ದು, ಇದನ್ನು ತೆಗೆದು ವಿಶಾಲವಾದ ಜಾಗವನ್ನು ವೀಕ್ಷಣೆಗೆ ಮಾಡಬೇಕಿದೆ. ಗಣೇಶಪಾಲ್‌ ಹೊಳೆಗೆ ಹೋಗುವ ಮಾರ್ಗದಂಚಿನಿಂದ ಒಂದು ಕಿಮೀ ದೂರ ಶಿವಗಂಗಾ ಜಲಪಾತಕ್ಕೆ ತೆರಳಬೇಕು. ಆದರೆ ರಸ್ತೆ ಮಾತ್ರ ಕಿತ್ತು ಹೋಗಿದೆ. ತೀರಾ ಇಕ್ಕಟ್ಟಾದ ರಸ್ತೆ ಇದಾಗಿದ್ದು, ಇದರ ದುರಸ್ತಿಕಾರ್ಯವೂ ಆಗಿಲ್ಲ. ಇದರಿಂದ ಪ್ರವಾಸಿಗರಿಗೆ ಸಂಚಾರಕ್ಕೆ ಸಂಕಟ ಎದುರಿಸುವಂತಾಗಿದೆ.

ಶಿವಗಂಗಾ ಜಲಪಾತನ್ನು ಮೇಲ್ಭಾಗದಿಂದ ನೋಡಿ ಬರುವುದನ್ನು ಬಿಟ್ಟು ನೀರು ಪ್ರದೇಶಕ್ಕೆ ಕೆಳಗಿಳಿದು ಪ್ರವಾಸಿಗರು ತೆರಳುತ್ತಾರೆ. ಅಲ್ಲಿನ ಅಪಾಯದ ಅರಿವಿಲ್ಲದೇ ಜೀವಹಾನಿಯಾದ ಘಟನೆ ನಡೆದಿದೆ. ಇದಕ್ಕಾಗಿ ಕೆಳಗಿಳಿಯದಂತೆ ಎಚ್ಚರಿಕೆಯ ತಾತ್ಕಾಲಿಕ ಬೋರ್ಡ್‌ ಹಾಕಿಡಲಾಗಿದೆ. ಅದನ್ನೂ ಲೆಕ್ಕಿಸದೇ ಪ್ರವಾಸಿಗರು ತೆರಳುತ್ತಾರೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.