ತುರ್ತು ಸೇವೆ ನೀಡಲು ಸಜ್ಜಾದ ಸ್ಕೊಡ್ವೆಸ್
Team Udayavani, Apr 17, 2020, 6:42 PM IST
ಶಿರಸಿ: ಗ್ರಾಮೀಣ ಜನರ ಆರೋಗ್ಯ ಸೇವೆಯಲ್ಲಿ ನಿರತವಾಗಿರುವ ಸ್ಕೊಡ್ವೆಸ್ ಸಂಸ್ಥೆ ಆರೋಗ್ಯ ಇಲಾಖೆ ನೆರವಿನೊಂದಿಗೆ “ಟೀಮ್ ಸಂಜೀವಿನಿ’ ಸಂಚಾರಿ ಆರೋಗ್ಯ ಘಟಕಗಳನ್ನು ಆರಂಭಿಸಿ ತುರ್ತುಸೇವೆ ನೀಡಲು ಸಜ್ಜಾಗಿದೆ. ಕಳೆದ ವರ್ಷ ಕೊಡಗಿನಲ್ಲಿ ಭಾರೀ ಭೂ ಕುಸಿತ ಆದಾಗಲೂ ಸ್ಪಂದಿಸಿದ್ದ ಸ್ಕೊಡ್ವೆಸ್ ಈಗ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದವರಿಗೆ ನೆರವು ನೀಡಲು ಮುಂದಾಗಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ಹಸಿರು ನಿಶಾನೆ ತೋರಿದ್ದು, ಸ್ಕೊಡ್ವೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಉಪಸ್ಥಿತರಿದ್ದರು.
ಕಾರ್ಯ ಹೇಗೆ?: ಸೇವೆ ಅವಶ್ಯಕತೆ ಇರುವವರು 08384-236398, 9900195285 ಸಂಖ್ಯೆಗೆ ಬೆಳಗ್ಗೆ 8ರಿಂದ ಸಂಜೆ 5ರೊಳಗೆ ಕರೆ ಮಾಡಿದರೆ ವೈದ್ಯರ ತಂಡ ಮನೆ ಬಾಗಿಲಿಗೆ ಬರಲಿದೆ. ವೈದ್ಯರು, ನರ್ಸ್ಗಳು, ಫಾರ್ಮಸಿಸ್ಟ್ ಗಳು, ಲ್ಯಾಬ್ಟೆಕ್ನಿಶಿಯನ್ಸ್, ಆರೋಗ್ಯ ಸಹಾಯಕರುಹಾಗೂ ಸ್ವಯಂ ಸೇವಕರು ಸೇವೆ ಸಲ್ಲಿಸುತ್ತಿದ್ದಾರೆ. ಎರಡು ಆಂಬ್ಯುಲನ್ಸ್ಗಳು, 5 ಬುಲೆಟ್ ಬೈಕ್ ಹಾಗೂ 1ಬೊಲೆರೊಜೀಪ್ ಬಳಸಲಾಗುತ್ತಿದೆ. ಮಧುಮೇಹ-ರಕ್ತದೊತ್ತಡ ಪರೀಕ್ಷೆ, ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವವರ ಅನುಪಾಲನ ಸೇವೆ, ಆರೋಗ್ಯ ಸಲಹೆ, ತೀವ್ರ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಆಸ್ಪತ್ರೆಗಳಿಗೆ ಸಾಗಿಸಲು ಸಹಾಯ ಮಾಡುವುದು ಈ ಸಂಸ್ಥೆಯ ಪ್ರಮುಖ ಆಶಯ. ದೂರವಾಣಿ ಮೂಲಕವೂ ತಜ್ಞ ವೈದ್ಯರ ಆರೋಗ್ಯ ಸಲಹೆಯನ್ನು ಒದಗಿಸಲು ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!