ಘನ ತ್ಯಾಜ್ಯ ನಿರ್ವಹಣಾ ಘಟಕ ಆರಂಭ
Team Udayavani, Oct 16, 2019, 3:31 PM IST
ಕುಮಟಾ: ತಾಲೂಕಿನ ಹೆಗಡೆ ಗ್ರಾಪಂ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕ ಸಾಂಕೇತಿಕವಾಗಿ ಆರಂಭಿಸಲಾಯಿತು.
ಪಂಚಾಯತ ಸುತ್ತಮುತ್ತಲಿನ ಹಾಗೂ ರೈಲ್ವೆ ಗೇಟ್ನಿಂದ ಹಳಕಾರ ರಸ್ತೆ ಅಕ್ಕ ಪಕ್ಕದಲ್ಲಿ ಬೀಸಾಡಿರುವ ಪ್ಲಾಸ್ಟಿಕ್ ಬಾಟಲಿ, ಹಾಲಿನ ಪ್ಯಾಕೆಟ್ ಮತ್ತಿತರ ಘನ ತ್ಯಾಜ್ಯಗಳನ್ನು ಆರಿಸಿ ತಂದು 10 ವಿಭಾಗಗಳಾಗಿ ವಿಂಗಡನೆ ಮಾಡಿ ಘಟಕದಲ್ಲಿ ಹಾಕಲಾಯಿತು. ಈ ಘಟಕದ ಕುರಿತು ಗ್ರಾಪಂ ಅಧ್ಯಕ್ಷ ಮಂಜುನಾಥ ಪಟಗಾರ ಮಾತನಾಡಿ, ಸಾರ್ವಜನಿಕರು ಸcತ್ಛತೆ ಬಗ್ಗೆ ಜಾಗೃತಿಗೊಳ್ಳಬೇಕಿದ್ದು, ಗ್ರಾಪಂ ಕೆಲಸಕ್ಕೆ ಗ್ರಾಮಸ್ಥರು ಕೈಜೋಡಿಸಬೇಕಿದೆ. ಎಲ್ಲೆಂದರಲ್ಲಿ ಕಸ ಬೀಸಾಡದೆ, ಕಸಗಳನ್ನು ವಿಂಗಡಿಸಿ ಘಟಕಕ್ಕೆ ಹಾಕಿದರೆ ಅದನ್ನು ಸಂಬಂಧಪಟ್ಟವರು ವಿಲೇವಾರಿ ಮಾಡುತ್ತಾರೆ ಎಂದರು. ತಾಪಂ ಇಒ ಸಿ.ಟಿ. ನಾಯ್ಕ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ನಿರ್ದೇಶನದಂತೆ ಹೆಗಡೆ ಗ್ರಾಮಕ್ಕೆ 23 ಲಕ್ಷ ರೂ. ವೆಚ್ಚದ ಘನ ಮತ್ತು ದ್ರವ ಸಂಪನ್ಮೂಲ ಘಟಕವನ್ನು ಪ್ರಾರಂಭಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್