ಕನ್ನಡಕ್ಕಾಗಿ ಗೀತಗಾಯನ ಅಭಿಯಾನ


Team Udayavani, Oct 24, 2021, 4:27 PM IST

23kannada

ಶಿರಸಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಪ್ರಾಧಿಕಾರ ರಾಜ್ಯ ಸರಕಾರದ ಆದೇಶದ ಮೇರೆಗೆ ಅ. 28 ರಂದು ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡಕ್ಕಾಗಿ ನಾವು ಗೀತಗಾಯನ ಅಭಿಯಾನವನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳೆಲ್ಲ ಸೇರಿ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆ ನಡೆಯಿತು.

ಕದಂಬ ಕಲಾ ವೇದಿಕೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕದಂಬ ಕಲಾ ವೇದಿಕೆ ಶಿರಸಿ ಹಾಗೂ ಕರ್ನಾಟಕ ಸುಗಮ ಸಂಗೀತ ಪರಿಷತ್‌ ಜಿಲ್ಲಾಧ್ಯಕ್ಷ ಶಿರಸಿ ರತ್ನಾಕರ, ಸುಗಮ ಸಂಗೀತಗಾರ ಮಿತ್ರಾ ಮ್ಯೂಸಿಕ್‌ನ ವಿದ್ವಾನ್‌ ಪ್ರಕಾಶ್‌ ಹೆಗಡೆ ಯಡಳ್ಳಿ, ಸಾರ್ವಜನಿಕ ಕಾರ್ಯಕರ್ತ ಉಮಾಕಾಂತ ಗೌಡ ಹಾಗೂ ಗೂಗಲ್‌ ಮೀಟ್‌ ಸಭೆಯಲ್ಲಿ ಗಾಯಕಿ ಡಾ| ಸುಮನಾ ಹೆಗಡೆ, ಗಾಯಕರಾದ ಸಂತೋಷ್‌ ಶೇಟ್‌, ಪ್ರದೀಪ್‌ ಎಲ್ಲನಕರ್‌, ಉಮೇಶ್‌ ಮುಂಡಳ್ಳಿ ಭಟ್ಕಳ, ಮಾನಸ ಹೆಗಡೆ ಯಲ್ಲಾಪುರ, ರಾಜಪ್ಪ ಎಚ್‌ ಬನವಾಸಿ, ವಿನಾಯಕ ಶೇಟ್‌ ದಿವ್ಯಾಶೇಟ್‌ ರೇಷ್ಮಾ ಶೇಟ್‌, ಪ್ರೀತಿ ಶೆಟ್ಟಿ, ಸುಪ್ರಿಯಾ ನಾಯ್ಕ ಕುಮಟಾ, ಪ್ರೀತಿ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು.

ಅ.28 ರಂದು ಬೆಳಗ್ಗೆ 11ಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲಕ್ಷಾಂತರ ಜನರು ನಾಡಗೀತೆಯೊಂದಿಗೆ ಗಾಯನದಲ್ಲಿ ಭಾಗಿಯಾಗಲು ಸಜ್ಜಾಗುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಗಿನ್ನಿಸ್‌ ದಾಖಲೆ ಬರೆಯುವಂತ ಸದಾವಕಾಶ ಇದಾಗಿದ್ದು ಈಗಾಗಲೆ ಶಿರಸಿ, ಭಟ್ಕಳ, ಯಲ್ಲಾಪುರ ಸೇರಿ ಅನೇಕ ತಾಲೂಕುಗಳಲ್ಲಿ ಗೀತಗಾಯನ ತರಬೇತಿಗೆ ಚಾಲನೆ ದೊರೆತಿದ್ದು ಆಸಕ್ತ ಸಂಘ ಸಂಸ್ಥೆಗಳು ಹಾಗೂ ಶಿಕ್ಷಣ ವಲಯ ಹಾಗೂ ಸಾರ್ವಜನಿಕರು ಭಾಗಿಯಾಗಲು ಕೋರಿದೆ.

ರಾಷ್ಟ್ರ ಕವಿ ಕುವೆಂಪುರವರ ಜಯ ಭಾರತ ಜನನಿಯ ತನುಜಾತೆ ಈ ನಾಡಗೀತೆಯೊಂದಿಗೆ ಬಾರಿಸು ಕನ್ನಡ ಡಿಂಡಿಮ ಪ್ರೊ| ನಿಸಾರ್‌ ಅಹಮ್ಮದ್‌ರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಈ ನಾಲ್ಕು ಗೀತೆಗಳನ್ನು ಸರಕಾರ ರಚಿಸಿರುವ ಸಮಿತಿಯಿಂದ ಆಯ್ಕೆ ಮಾಡಲಾಗಿದೆ.

ಈ ಕನ್ನಡಕ್ಕಾಗಿ ನಾವು ಗೀತ ಅಭಿಯಾನದಲ್ಲಿ ಅಭಿಮಾನದಿಂದ ಭಾಗವಹಿಸಲಿಚ್ಚಿಸುವರು ಅಭಿಯಾನದ ಹಾಡು, ಕರೋಕೆ ಹಾಗೂ ಸಾಹಿತ್ಯಕ್ಕಾಗಿ ಕದಂಬ ಕಲಾ ವೇದಿಕೆ ಶಿರಸಿರವರ ವಾಟ್ಸ್‌ಅಪ್‌ ಸಂಖ್ಯೆ 9449371981 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.