ಅಂಕೋಲಾ: ಹಿರಿಯ ಕಾರ್ಯಕರ್ತರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ
Team Udayavani, Dec 29, 2021, 7:27 PM IST
ಅಂಕೋಲಾ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಅಂಕೋಲಾಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಜನಸಂಘದ ಹಿರಿಯ ಕಾರ್ಯಕರ್ತ ಅಶೋಕ ಮಹಾಲೆ ಅವರ ಹೊಟೇಲಿಗೆ ಭೇಟಿ ನೀಡಿ ಕರೆ ಲಾಡು- ಚಹ ಸೇವಿಸಿ ಸರಳತೆಗೆ ಸಾಕ್ಷಿಯಾದರು.
ವಿಶ್ವೇಶ್ವರ ಹೆಗಡೆ ಅವರು ಪ್ರಥಮ ಬಾರಿ ಶಾಸಕರಾಗಿದ್ದು ಅಂಕೋಲಾ ಕ್ಷೇತ್ರದಿಂದ ಎನ್ನುವುದು ಗಮನಾರ್ಹ.
ನಂತರ ಒಮ್ಮೆ ಆಯ್ಕೆ ಆದವರು ಮತ್ತೊಮ್ಮೆ ಆಯ್ಕೆ ಆಗುವುದಿಲ್ಲ ಎಂಬ ಅಂಕೋಲಾ ಕ್ಷೇತ್ರದ ಪ್ರತೀತಿ ಬದಲಿಸಿ ಮೂರು ಬಾರಿ ಆಯ್ಕೆ ಆಗಿ ದಾಖಲೆ ಬರೆದಿದ್ದಾರೆ. ಈ ಆಯ್ಕೆಗೆ ಸಹಕರಿಸಿದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾದ ಅಶೋಕ ಮಹಾಲೆ ಅವರನ್ನು ನೆನಪಿಸಿಕೊಂಡು ಈಗ ಕಾರವಾರ ರಸ್ತೆಯಲ್ಲಿರುವ ಪುಟ್ಟ ಹೊಟೇಲ್ಗೆ ಭೇಟಿ ನೀಡಿ ಕುಶಲೋಪಚರಿ ವಿಚಾರಿಸಿದರು.
ಅದೇ ರೀತಿ ಕಿತ್ತೂರು ಚೆನ್ನಮ್ಮಾ ರಸ್ತೆಯಲ್ಲಿರುವ ಇನ್ನೋರ್ವ ಹಿರಿಯ ರಾಮಚಂದ್ರ ನಾಯ್ಕ ಅವರ ಅಂಗಡಿಗೂ ಹೋಗಿ ಅವರ ಆರೋಗ್ಯ ವಿಚಾರಿಸಿದರು.
ನಾಮಧಾರಿ ದಹಿಂಕಾಲ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಪ್ರಮುಖರಾದ ಸಾಯಿ ಕಿರಣ ಶೇಟಿಯಾ, ಭಾಸ್ಕರ ನಾರ್ವೇಕರ್, ಸಂಜಯ ನಾಯ್ಕ, ನಾಗೇಂದ್ರ ನಾಯ್ಕ , ನಾಗೇಶ ನಾಯ್ಕ, ರಾಜು ನಾಯ್ಕ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ