ಗ್ರಹಣ ಕಾಲ ಮಹಾಬಲೇಶ್ವರನಿಗೆ ವಿಶೇಷ ಪೂಜೆ
Team Udayavani, Jun 22, 2020, 10:08 AM IST
ಹೊನ್ನಾವರ: ಶ್ರೀಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ರವಿವಾರದ ಚೂಡಾಮಣಿ ಸೂರ್ಯಗ್ರಹಣದ ಸಮಯದಲ್ಲಿ ಗೋಕರ್ಣದ ಊರಿನವರಿಗೆ ನಿಯಮಗಳ ಪ್ರಕಾರ ನಂದಿ ಮಂಟಪದವರೆಗೆ ಹೋಗಿ ದರ್ಶನ ಪಡೆದು ನಮಸ್ಕಾರ ಮಾಡಿ ಬರಲು ಅವಕಾಶ ನೀಡಲಾಗಿತ್ತು. ಬಹಳಷ್ಟು ಜನ ಊರಿನವರು ದೇವರ ದರ್ಶನ ಪಡೆದರು.
ಕ್ಷೇತ್ರದಲ್ಲಿ ಭಕ್ತಾದಿಗಳು ಗ್ರಹಣ ವೇಳೆಯಲ್ಲಿ ಈಶ್ವರನ ದರ್ಶನ ಪಡೆದು ಸಮುದ್ರಕ್ಕೆ ಹೋಗಿ ಸ್ನಾನ ಮಾಡಿ, ಜಪತಪಗಳನ್ನು ಮಾಡುವ ರೂಢಿಗತ ಪರಂಪರೆಗೆ ಅನುಕೂಲವಾಗಲೆಂದು ಅವಕಾಶ ನೀಡಲಾಯಿತು. ಸರಕಾರದ ನಿಯಮಗಳ ಪ್ರಕಾರ ಜನರ ದೇಹದ ಉಷ್ಣಾಂಶ ನೋಡಿ, ಸ್ಯಾನಿಟೈಜರ್ ಸಿಂಪಡಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಶ್ರೀದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ವೇಳೆಯಲ್ಲಿ ಆತ್ಮಲಿಂಗಕ್ಕೆ ನಿರಂತರ ಗಂಗಾಜಲಾಭಿಷೇಕ ಏರ್ಪಡಿಸಲಾಗಿತ್ತು. ರಾಷ್ಟ್ರದ ಗಡಿಯಲ್ಲಿ ಹೋರಾಡುತ್ತಿರುವ ಧೀರಯೋಧರಿಗೆ ಜಯ ಸಿಗಲೆಂದು ಮತ್ತು ರಾಷ್ಟ್ರದಲ್ಲಿ ಮಹಾಮಾರಿಯಾಗಿ ವ್ಯಾಪಿಸುತ್ತಿರುವ ಕೋವಿಡ್-19 ಸಂಪೂರ್ಣ ನಾಶಹೊಂದುವಂತೆ ಪ್ರಾರ್ಥಿಸಿ ಅಭಿಷೇಕ ಮಾಡಲಾಯಿತು. ಗ್ರಹಣ ಮೋಕ್ಷದ ನಂತರ ಸ್ಥಳಶುದ್ಧಿ ಮಾಡಿ, ಶುದ್ಧಿ ಹೋಮ ಮಾಡಿ ಶ್ರೀದೇವರಿಗೆ ವಿಶೇಷ ಮಹಾಪೂಜೆ ಮಾಡಲಾಯಿತು. ವೇ| ಪರಮೇಶ್ವರ ಮಾರ್ಕಾಂಡೆ ಮಹಾಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?