ಗೋಕರ್ಣ ಶ್ರೀಮಹಾಬಲೇಶ್ವರ ದೇವಾಲಯ: ವಿವಾದಿತ ವಸ್ತ್ರಸಂಹಿತೆ ವಾಪಸ್
Team Udayavani, Nov 13, 2022, 6:35 AM IST
ಕುಮಟಾ: ಅರೆಬರೆ ಉಡುಪು ಧರಿಸಿ ಸಂಚರಿಸುವುದನ್ನು ನಿಷೇಧಿಸಿ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದ ಮೇಲುಸ್ತುವಾರಿ ಸಮಿತಿ ಆಳವಡಿಸಿದ್ದ ಬ್ಯಾನರ್ ತೀವ್ರ ವಿವಾದ ಪಡೆದುಕೊಂಡ ಕಾರಣ ಶನಿವಾರ ಅದನ್ನು ತೆರವುಗೊಳಿಸಲಾಗಿದೆ.
ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು, ಭಕ್ತರು ಮಹಾಬಲೇಶ್ವರ ದೇವರ ದರ್ಶನ ಮಾಡಲು ದೇವಸ್ಥಾನ ಪ್ರವೇಶದ ವಿಷಯದಲ್ಲಿ ಹಿಂದಿನಿಂದಲೂ ವಸ್ತ್ರಸಂಹಿತೆ ಜಾರಿಯಲ್ಲಿದೆ. ಎರಡು ದಿನಗಳ ಹಿಂದೆ ಆಡಳಿತ ಮಂಡಳಿಯು ಶ್ರೀದೇವರ ರಥದ ನಿಲುಗಡೆ ಸ್ಥಳದಿಂದ ದೇಗುಲದ ಪಶ್ಚಿಮ ದ್ವಾರದವರೆಗಿನ ಪ್ರದೇಶದಲ್ಲಿ ಅರೆಬರೆ ಉಡುಪು ಧರಿಸಿ ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂಬ ಫಲಕ ಅಳವಡಿಸಿತ್ತು.
ಆದರೆ ಈ ಮಾರ್ಗದಲ್ಲಿ ಭಕ್ತರ ಹೊರತಾಗಿಯೂ ಸಮುದ್ರ ತೀರಕ್ಕೆ ತೆರಳುವವರು, ಸಾಮಾನ್ಯ ಕೆಲಸ ಕಾರ್ಯಗಳಿಗೆ ಹೋಗುವವರೂ ಓಡಾಡುವ ಹಿನ್ನೆಲೆಯಲ್ಲಿ ಹೊಸ ಬದಲಾವಣೆಗೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆಯಂತೆ ಉಪವಿಭಾಗಾಧಿಕಾರಿ ರಾಘವೇಂದ್ರ ಜಗಲಾಸರ ಗೋಕರ್ಣಕ್ಕೆ ಭೇಟಿ ನೀಡಿ ಎರಡು ಕಡೆ ಹಾಕಲಾಗಿದ್ದ ಫಲಕ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು